ಬಂಟ್ವಾಳ | ತಡೆಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯ ಮರಿ: ಅರಿವಳಿಕೆ ನೀಡಿ ರಕ್ಷಿಸಿದ ಅರಣ್ಯಾಧಿಕಾರಿಗಳು

Date:

ರಬ್ಬರ್ ತೋಟದಲ್ಲಿ ಅಳವಡಿಸಿದ್ದ ತಡೆಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯ ಮರಿಯೊಂದನ್ನು ಅರಣ್ಯಾಧಿಕಾರಿಗಳು ಅರಿವಳಿಕೆ ನೀಡಿ ರಕ್ಷಿಸಿದ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂರ್ಜೆ ಸಮೀಪದ ಕೊಳಕೆಬೈಲು ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಅಂದಾಜು 8ರಿಂದ 10 ತಿಂಗಳು ಇರುವ ಚಿರತೆಯ ಮರಿಯೊಂದು ಆಹಾರ ಹುಡುಕಿಕೊಂಡು ಮೂರ್ಜೆ ಸಮೀಪದ ಕೊಳಕೆಬೈಲು ಎಂಬಲ್ಲಿರುವ ಕೇರಳ ಮೂಲದ ವ್ಯಕ್ತಿಯೋರ್ವರ ತೋಟಕ್ಕೆ ಬಂದಿದೆ. ಆದರೆ, ಓಡಾಡುವ ಭರದಲ್ಲಿ ತಂತಿ ಇರುವ ತಡೆಬೇಲಿಗೆ ಸಿಲುಕಿಕೊಂಡಿತ್ತು. ಗುರುವಾರ ಬೆಳಗ್ಗೆ ಕೆಲಸಕ್ಕೆಂದು ತೋಟಕ್ಕೆ ಬಂದಿದ್ದವರು ಗಮನಿಸಿದ್ದು, ಕೂಡಲೇ ವೇಣೂರು ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

chirate

ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಅರಿವಳಿಕೆ ತಜ್ಞೆ ಡಾ. ಯಶಸ್ವಿನಿ ಅವರ ಮೂಲಕ ಅರಿವಳಿಕೆ ಮದ್ದು ನೀಡಿ, ರಕ್ಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿರುವ ವೇಣೂರು ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ(RFO) ಭರತ್ ಅವರು, “ಗುರುವಾರ ಬೆಳಗ್ಗೆ 9ರ ಸುಮಾರಿಗೆ ಚಿರತೆ ತಡೆಬೇಲಿಯಲ್ಲಿ ಸಿಕ್ಕಿಕೊಂಡಿರುವುದಾಗಿ ನಮಗೆ ಮಾಹಿತಿ ಬಂತು. ಕೂಡಲೇ ಸ್ಥಳಕ್ಕೆ ತಂಡದೊಂದಿಗೆ ತೆರಳಿ, ಅರಿವಳಿಕೆ ಮದ್ದು ನೀಡಿ ರಕ್ಷಿಸಲಾಗಿದೆ. ಸದ್ಯ ನಯನಾಡುವಿನಲ್ಲಿರುವ ಅರಣ್ಯ ಇಲಾಖೆಯ ಕೇಂದ್ರದಲ್ಲಿ ಇಟ್ಟು ಅದರ ಆರೋಗ್ಯವನ್ನು ಡಾ. ಯಶಸ್ವಿನಿಯವರು ಪರಿಶೀಲಿಸಿದ್ದು, ಯಾವುದೇ ಗಂಭೀರ ಗಾಯಕಂಡುಬಂದಿಲ್ಲ ಎಂದು ಪ್ರಾಥಮಿಕ ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.

“ಚಿರತೆಗೆ ಅಂದಾಜು 8ರಿಂದ 10 ತಿಂಗಳು ಅಥವಾ ಎರಡು ವರ್ಷ ಪ್ರಾಯವಿರಬಹುದು. ಮೂಡಬಿದ್ರೆ ಎಸಿಎಫ್ ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ಚಿರತೆಯ ಮರಿಯನ್ನು ಮತ್ತೆ ಕಾಡಿಗೆ ಬಿಡಬೇಕೋ ಅಥವಾ ಪಿಲಿಕುಳ ವನ್ಯಜೀವಿ ಕೇಂದ್ರಕ್ಕೆ ಕಳುಹಿಸುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ” ಎಂದು ವೇಣೂರು ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಭರತ್ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಇರಾನ್ ಪ್ರತಿಭಟನೆಗಳು- ಪಶ್ಚಿಮ ಮಾಧ್ಯಮಗಳ ಹುಸಿ ಕಥಾನಕಗಳು ಮತ್ತು ಹಸಿ ವಾಸ್ತವಗಳು

ಕಾರ್ಯಾಚರಣೆಯಲ್ಲಿ ಅರಿವಳಿಕೆ ತಜ್ಞೆ ಡಾ. ಯಶಸ್ವಿನಿ, ಡಿವೈಆರ್‌ಎಫ್ ಅಶ್ವಿತ್, ವೇಣೂರು ಪ್ರಾದೇಶಿಕ ವಲಯದ ಬೀಟ್ ಗಾರ್ಡ್‌ಗಳಾದ ಸುರೇಶ್, ದಿವಾಕರ್ ಸೇರಿದಂತೆ ಕೇರ್ ವೈಲ್ಡ್‌ ಲೈಫ್ ರೆಸ್ಕ್ಯೂ ಟೀಮ್‌ನ ಸಿಬ್ಬಂದಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...