ಬಂಟ್ವಾಳ | ಯುವತಿಯನ್ನು ಭೇಟಿ ಮಾಡಲು ಬಂದಿದ್ದ ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ: ಆರು ಮಂದಿಯ ಬಂಧನ

Date:

ಯುವತಿಯೋರ್ವಳನ್ನು ಭೇಟಿ ಮಾಡಲೆಂದು ಬಂದಿದ್ದ ಯುವಕನೋರ್ವನನ್ನು ಹಗ್ಗದಿಂದ ಕಂಬಕ್ಕೆ ಕಟ್ಟಿ ಹಾಕಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ನಡೆದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ನ.7ರಂದು ಈ ಘಟನೆ ನಡೆದಿದ್ದು, ಹಲ್ಲೆ ನಡೆಸಿರುವ ವಿಡಿಯೋ ವೈರಲಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಈಗಾಗಲೇ ಆರು ಮಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಹಲ್ಲೆಗೊಳಗಾದ ಯುವಕನನ್ನು ಮಹಮ್ಮದ್‍ ಮುಸ್ತಫಾ(21) ಎಂದು ಗುರುತಿಸಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 11 at 1.11.30 PM 1

ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಂಚಿನಡ್ಕಪದವು ಸಜೀಪನಡು ಗ್ರಾಮದ ನಿವಾಸಿಗಳಾದ ಮಹಮ್ಮದ್‌ ಸಫ್ವಾನ್(25), ಮಹಮ್ಮದ್‌ ರಿಜ್ವಾನ್‌ (25), ಇರ್ಫಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಶಾಕೀರ್‍ (18) ಎಂಬ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದುಬಂದಿದೆ.

ಬಂಟ್ವಾಳ 4

ನವೆಂಬರ್ 7ರಂದು ರಾತ್ರಿ 10.00 ಗಂಟೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಯುವಕ ಮಹಮ್ಮದ್‍ ಮುಸ್ತಫಾ ಎಂಬಾತನನ್ನು ಆತನ ದೂರದ ಸಂಬಂಧಿ ಹುಡುಗಿಯೊಬ್ಬಳು ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ಮನೆಗೆ ಬರಲು ಹೇಳಿದ್ದಳು. ಈ ಹಿನ್ನೆಲೆಯಲ್ಲಿ ಸಜೀಪನಡು ಕಂಚಿನಡ್ಕಪದವು ಎಂಬಲ್ಲಿಗೆ ಬಂದಾಗ ಆರೋಪಿಗಳು ಮಹಮ್ಮದ್‍ ಮುಸ್ತಫಾನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು, ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಅಲ್ಲದೇ, ಮೊಬೈಲ್‌ನಲ್ಲಿ ಕೂಡ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದರು.

ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ಬೆನ್ನಲ್ಲೇ, ಸಂತ್ರಸ್ತ ಯುವಕ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ದೂರು ನೀಡಿದ್ದಾನೆ. ಈ ದೂರಿನ ಅನ್ವಯ ಕಲಂ 115(2), 126(2), 189(2), 190, 191(2), 191(3),351(2),352 ಬಿಎನ್‍ಎಸ್‍ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನು ಓದಿದ್ದೀರಾ? ಮೂಡಬಿದ್ರೆ | ಬೈಕ್ ಸವಾರರ ಮೇಲೆ ಹರಿದ ಖಾಸಗಿ ಬಸ್: ರೊಚ್ಚಿಗೆದ್ದ ಜನರಿಂದ ಬಸ್ಸಿನ ಗಾಜು ಪುಡಿಪುಡಿ

ಹಲ್ಲೆಗೊಳಗಾದ ಮುಸ್ತಫಾ, ತನಗಾದ ಗಾಯದ ನೋವು ಹೆಚ್ಚಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಹೈಲ್ಯಾಂಡ್‍ ಆಸ್ಪತ್ರೆಗೆ ದಾಖಲಾದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಹೈಲ್ಯಾಂಡ್‍ ಆಸ್ಪತ್ರೆಗೆ ತೆರಳಿ ವಿಚಾರಿಸಿದ್ದಾರೆ. ಈ ವೇಳೆ ಯುವಕ, ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಗುಂಪು ಹಲ್ಲೆ ನಡೆಸಿ ಕೊಲೆಯತ್ನ ನಡೆಸಿರುವುದಾಗಿ ಹೇಳಿಕೆ ನೀಡಿದ್ದ.

ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಕಲಂ 109, 117(4) ಬಿಎನ್ಎಸ್‍ ಕಾಯ್ದೆಯನ್ನು ಹೆಚ್ಚುವರಿಯಾಗಿ ಸೇರಿಸಿ, ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಸದ್ಯ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...