ಪಾಣೆಮಂಗಳೂರು | ಎಸ್‌ಐಒ ವತಿಯಿಂದ ಆ್ಯಂಬುಲೆನ್ಸ್ ಚಾಲಕ ಮಹೇಶ್ ಕುಲಾಲ್‌ಗೆ ಸನ್ಮಾನ

Date:

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೆಷನ್ ಆಫ್ ಇಂಡಿಯಾ (ಎಸ್‌ಐಒ) ಸಂಸ್ಥಾಪನಾ ದಿನ (ಅ.19)ದ ಅಂಗವಾಗಿ, “HUDA – Guided by Principles, Driven by Purposes” ಎಂಬ ಅಭಿಯಾನದ ಭಾಗವಾಗಿ ಎಸ್‌ಐಒ ಪಾಣೆಮಂಗಳೂರು ಘಟಕದ ವತಿಯಿಂದ ಆ್ಯಂಬುಲೆನ್ಸ್ ಚಾಲಕ ಮಹೇಶ್ ಕುಲಾಲ್‌ಗೆ ಸನ್ಮಾನ ಮಾಡಲಾಯಿತು.

ತುರ್ತು ಸಂದರ್ಭಗಳಲ್ಲಿ ಬಡಜನರಿಗೆ ನೆರವಾಗುವ ಸದುದ್ದೇಶದೊಂದಿಗೆ ತಾವು ಆರಂಭಿಸಿದ್ದ ಆ್ಯಂಬುಲೆನ್ಸ್ ಸೇವೆ ಮೂಲಕ ಸಾವಿರಾರು ಜನರಿಗೆ ಆಶಾಕಿರಣವಾಗಿರುವ ಮಹೇಶ್ ಕುಲಾಲ್‌ ಅವರನ್ನು ಎಸ್‌ಐಒ ತಂಡ ಭೇಟಿಯಾಗಿ ಅಭಿನಂದಿಸಿ, ಗೌರವಿಸಿತು.

ಮಹೇಶ್ ಕುಲಾಲ್ ಅವರು ಕಲ್ಲಡ್ಕ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಅಪಘಾತಗಳು, ಅನಾರೋಗ್ಯದ ತುರ್ತು ಸನ್ನಿವೇಶಗಳು ಉದ್ಭವಿಸಿದಾಗ ಅಶಕ್ತರಿಗೆ ತಕ್ಷಣ ನೆರವಾಗುವ ಉದ್ದೇಶದಿಂದ, ಸ್ಥಳೀಯ ಸಮಾಜಸೇವಾ ಮನೋಭಾವದ ಯುವಕರ ಸಹಕಾರದೊಂದಿಗೆ ಐದು ವರ್ಷಗಳ ಹಿಂದೆ ಆಂಬುಲೆನ್ಸ್ ಸೇವೆಯನ್ನು ಆರಂಭಿಸಿದ್ದರು. ಅವರು ತಮ್ಮ ಸೇವಾ ಮನೋಭಾವದಿಂದ ಬಡಜನರ ಪಾಲಿಗೆ ನಿಜವಾದ ಆಪತ್ಭಾಂಧವರಾಗಿ ಪರಿಣಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಕಾರ್‌ ಸ್ಟ್ರೀಟ್‌ ಚಿನ್ನದ ಗಟ್ಟಿ ದರೋಡೆ ಪ್ರಕರಣ; ಆರೋಪಿಗಳ ಬಂಧನ

ಸಮಾಜದ ಹಿತದೃಷ್ಟಿಯಿಂದ ನಿರಂತರವಾಗಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ಕಾರ್ಯವು ನಿಜಕ್ಕೂ ಸ್ಪೂರ್ತಿದಾಯಕವಾಗಿದೆ. ಈ ಅಮೂಲ್ಯ ಸೇವೆಯನ್ನು ಗುರುತಿಸಿ ಎಸ್‌ಐಒ ತಂಡ ಅಭಿನಂದಿಸಿ, ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಸಾಧಿಸಲು ಶುಭ ಹಾರೈಸಿತು.

ಕಾರ್ಯಕ್ರಮದಲ್ಲಿ ಎಸ್‌ಐಒ ಕರ್ನಾಟಕ ರಾಜ್ಯ ಕಾರ್ಯದರ್ಶಿ ಬ್ರ. ಆಸಿಫ್ ಡಿ.ಕೆ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಬ್ರ. ರಿಝ್ವಾನ್ ಅಝ್ಹರಿ, ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಪಾಣೆಮಂಗಳೂರು ಘಟಕಾಧ್ಯಕ್ಷ ಬ್ರ. ಮುಝಮ್ಮಿಲ್ ಮೆಲ್ಕಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...