ಬಂಟ್ವಾಳ | ತಮ್ಮ ಮಕ್ಕಳನ್ನು ಪೋಷಕರು ಇತರರೊಂದಿಗೆ ಹೋಲಿಕೆ ಮಾಡಬಾರದು: ಡಾ. ಬೀರಾನ್ ಮೊಯ್ದಿನ್

Date:

ಪೋಷಕರು ತಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡಬಾರದು ಎಂದು ಪುಣೆಯ ಡಿ. ವೈ. ಪಾಟೀಲ್ ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಬೀರಾನ್ ಮೊಯ್ದಿನ್ ಸಲಹೆ ನೀಡಿದರು.

ಅವರು ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದಲ್ಲಿರುವ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರ ಇದರ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಾರ್ಷಿಕೋತ್ಸವ ‘WEMS SPARK 2K25’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

“ಈ ವಿದ್ಯಾ ಸಂಸ್ಥೆಯು ನೆಲೆಗೊಂಡಿರುವ ‘ಗಡಿಯಾರ’ ಎಂಬ ಪರಿಸರವು ತನ್ನ ತವರೂರು ಎಂಬುವುದನ್ನು ನೆನಪಿಸಿಕೊಂಡು, ಈ ಊರಿನ ಬಗೆಗಿನ ಪ್ರೀತಿ ಮತ್ತು ಆತ್ಮೀಯತೆ ಅಷ್ಟೊಂದು ದೂರದಿಂದ ಪ್ರಯಾಣ ಮಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಲ್ಲಿ ನನಗೆ ಪ್ರೇರಣೆಯಾಯಿತು. ಪೋಷಕರಿಗೆ ಪ್ರತಿಯೊಂದು ಮಕ್ಕಳಲ್ಲಿ ಪ್ರತ್ಯೇಕ ಪ್ರತಿಭೆಗಳಿರುತ್ತವೆ. ಆದ್ದರಿಂದ ತಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡಬೇಡಿ. ಪೋಷಕರ ಹಾಗೂ ಶಿಕ್ಷಕರ ಜೊತೆಯಲ್ಲಿ ಪ್ರಾಮಾಣಿಕವಾಗಿರಲು ಮಕ್ಕಳಿಗೆ ಸೂಚಿಸಿ, ಜವಾಬ್ದಾರಿಯರಿತು ಎಲ್ಲರನ್ನೂ ಗೌರವಿಸುತ್ತಾ ಬಾಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಬುಡೋಳಿ (ಅಬುಧಾಬಿ) ರವರ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳ ಯಾವುದೇ ಅವಶ್ಯಕತೆಗಳನ್ನು ಪೂರೈಸಲು ಆಡಳಿತ ಮಂಡಳಿ ಬದ್ಧವಾಗಿದೆ ಮತ್ತು ಅದರೊಂದಿಗೆ ಪೋಷಕರ ಹಾಗೂ ಇಲ್ಲಿನ ನಾಗರಿಕರ ಸಹಕಾರ ದೊರೆತಾಗ ನಮಗೆ ಯಶಸ್ಸನ್ನು ಸಾಧಿಸಬಹುದು ಹಾಗೂ ಮುಂದಿನ ದಿನಗಳಲ್ಲಿ ಕೂಡಾ ಉತ್ತಮ ಸಲಹೆ, ಸಹಕಾರಕ್ಕಾಗಿ ಸಭೆಯನ್ನು ವಿನಂತಿಸಿಕೊಂಡರು.

WhatsApp Image 2025 12 27 at 5.30.29 PM

ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ಲೋಬಲ್ ಗ್ಯಾನ್ ಅಕಾಡೆಮಿ ಇದರ ವ್ಯವಸ್ಥಾಪಕ ನಿರ್ದೇಶಕಿ ಡಾ. ರುಕ್ಸಾನಾ ಹಸನ್ ಅತಿಥಿಯಾಗಿ ಮಾತನಾಡಿದರು.

ಈ ಸಂಧರ್ಭದಲ್ಲಿ ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ, ಉಪಾಧ್ಯಕ್ಷ ಸುರೇಶ್ ಪೂಜಾರಿ ಕನ್ನೋಟ್, ಗ್ರಾಮಾಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್, ವಿಸ್ಡಮ್ ಶಾಲಾ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆ, ಮುಖ್ಯ ಶಿಕ್ಷಕಿ ಆಮಿನಾ ಬಾನು, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ರಾಜೇಶ್ವರಿ ಹಾಗೂ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಮುರ್ಷಿದಾ ಕೆ. ವೇದಿಕೆಯಲ್ಲ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಗದಗ | ಮೌಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಸ್ಪೀಕರ್ ಯು.ಟಿ. ಖಾದರ್‌

ವಿದ್ಯಾರ್ಥಿನಿಗಳಾದ ಝಿಯಾನಾ, ಹಿಬಾ, ಫಿದಾ, ರಿಝಾ, ಧನ್ಯಶ್ರೀ ಮತ್ತು ಆರಿಫಾ ರವರು ಪ್ರಾರ್ಥನಾ ಗೀತೆ ಹಾಡಿದರು. ಸಹ ಶಿಕ್ಷಕಿ ಶ್ರೀಮತಿ ಅಲಿಮತ್ ಸಅದಿಯಾ ಸ್ವಾಗತಿಸಿದರು. ಬಳಿಕ ವಿವಿಧ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಸಹಶಿಕ್ಷಕಿಯರುಗಳಾದ ಶ್ರೀಮತಿ ಆಬಿದಾ ಬೇಗಂ, ಕುಮಾರಿ ತಸ್ಮಿನಾ ಹಾಗೂ ಸಹ ಶಿಕ್ಷಕರಾದ ಹೈದರ್, ಫಝಲ್, ಸಹ ಶಿಕ್ಷಕಿಯರುಗಳಾದ ಶ್ರೀಮತಿ ಮುಬೀನಾ ಶುಭಾನ್, ಕುಮಾರಿ ಸಮ್ರೀನಾ, ಆಶಿಕಾ, ಮುಬೀನಾ ಹಾಗೂ ಅಶ್ಫಿಯಾ ಸಹಕರಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳಿಂದ ಕರಾಟೆ ಶಿಕ್ಷಕ ಅಬ್ದುಲ್ ರಹಮಾನ್ ನಿರ್ದೇಶನದಲ್ಲಿ ಆತ್ಮ ರಕ್ಷಣಾ ಕಲಾ ಮನೋರಂಜನೆಯ ಪ್ರದರ್ಶನಗಳನ್ನು ನೀಡಲಾಯಿತು. ಸಹ ಶಿಕ್ಷಕಿ ಶ್ರೀಮತಿ ಫಾತಿಮತ್ ಸಿನಾನರವರು ಕಾರ್ಯಕ್ರಮವನ್ನು ನಿರೂಪಣೆಗೈದರೆ, ಶಿಕ್ಷಕಿ ಶ್ರೀಮತಿ ಮೀನಾಕ್ಷಿ ಧನ್ಯವಾದವಿತ್ತರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ನಿರ್ದೇಶಕರಾದ ಪ್ರಹ್ಲಾದ್ ಶೆಟ್ಟಿ ಮತ್ತು ವಿಸ್ಡಮ್ ಶಾಲಾ ಶಿಕ್ಷಕ-ರಕ್ಷಕ ಸಂಘದ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ ಕಲ್ಲಾಜೆ ಸಹಿತ ಅನೇಕ ಗಣ್ಯರು ಶುಭ ಹಾರೈಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.

WhatsApp Image 2025 12 27 at 5.30.32 PM
WhatsApp Image 2025 12 27 at 5.30.28 PM
WhatsApp Image 2025 12 27 at 5.30.05 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...