ಬಂಟ್ವಾಳ | ಎಸ್ಐಒದಿಂದ ಕೋಟೆಕಣಿ ಸರ್ಕಾರಿ ಶಾಲೆಗೆ 20 ಜೊತೆ ಬೆಂಚು ಡೆಸ್ಕುಗಳ ಕೊಡುಗೆ

Date:

ಬಂಟ್ವಾಳ ತಾಲೂಕಿನ ಕೋಟೆಕಣಿ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದೀಕ್ ಕೋಟೆಕಣಿ ಅವರ ಮನವಿಗೆ ಸ್ಪಂದಿಸಿದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ, ಪಾಣೆಮಂಗಳೂರು ಘಟಕದಿಂದ ಶಾಲೆಗೆ 20 ಜೊತೆ ಬೆಂಚು ಡೆಸ್ಕುಗಳನ್ನು ಕೊಡುಗೆಯಾಗಿ ನೀಡಿ ಸಹಕರಿಸಲಾಗಿದೆ.

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ ಪಾಣೆಮಂಗಳೂರು ಘಟಕದ ಅಧ್ಯಕ್ಷ ಮುಬಾರಿಶ್ ಸಿ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿ, “ಕೋಟೆಕಣಿ ಶಾಲೆಯ ಮುಖ್ಯ ಶಿಕ್ಷಕಿ ವಿಮಲ ಅವರು ವಿದ್ಯಾರ್ಥಿಗಳು ವಿದ್ಯೆಯನ್ನು ಸಮಾನವಾಗಿ ಪಡೆಯುವಂತಾಗಬೇಕು. ಮೇಲು-ಕೀಳು ಮನೋಭಾವವಿಲ್ಲದೆ ವಿದ್ಯೆಯಲ್ಲಿ ಸ್ವಲ್ಪ ಹಿಂದಿರುವ ಮಕ್ಕಳಿಗೆ ಹೆಚ್ಚಿನ ಗಮನಕೊಟ್ಟು ಶಿಕ್ಷಣವನ್ನು ಪಡೆಯುವಂತೆ ನಮ್ಮ ಶಿಕ್ಷಕರು ಪ್ರಯತ್ನಿಸುತ್ತಾರೆ. ಅದರ ಜತೆಗೆ ನಮ್ಮೆಲ್ಲರ ಕರ್ತವ್ಯವೂ ಆಗಿದೆ” ಎಂದರು.

“ಶಿಕ್ಷಣ ಪಡೆಯುವುದು ಎಲ್ಲರ ಹಕ್ಕು, ಶಿಕ್ಷಣವನ್ನು ಶಿಕ್ಷಕರು ಮತ್ತು ಹೆತ್ತವರು ನೀತಿಪಾಠಗಳೊಂದಿಗೆ ವಿವರಿಸಿಕೊಡಬೇಕು. ಎಲ್ಲರೂ ಸಮಾನರು ಎಂಬ ಮನೋಭಾವ ಮಕ್ಕಳಲ್ಲಿ ಬೆಳೆಯುವಂತಾಗಬೇಕು, ಎಸ್ಐಒ ವಿದ್ಯಾರ್ಥಿ ಸಂಘಟನೆಯಾಗಿದ್ದು, ವಿದ್ಯಾರ್ಥಿಗಳ ಸೇವೆಗೆ ಸದಾ ಸಿದ್ಧ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದರೆ ದೇಶವು ಉತ್ತಮವಾಗಿ ಅಭಿವೃದ್ಧಿಯೆಡೆಗೆ ಸಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವೈದ್ಯಕೀಯ ಕಾಲೇಜು ನಡೆಸಲಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ: ಡಾ ಮಧುಸೂದನ ಕಾರಿಗನೂರು ಪ್ರಶ್ನೆ

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದೀಕ್, ನೂತನ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಬಸೀರ್, ಉಪಾಧ್ಯಕ್ಷ ಹುಸೇನ್ ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ, ಎಸ್ಐಓ ಜಿಲ್ಲಾಧ್ಯಕ್ಷ ರಿಜ್ವಾನ್ ಹಾಗೂ ಎಸ್ಐಓ ಪಾಣೆಮಂಗಳೂರು ಘಟಕದ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...