ದ.ಕ. | ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆ ಸೃಷ್ಟಿ: ಪೊಲೀಸ್ ಸಿಬ್ಬಂದಿಯನ್ನೇ ಬಂಧಿಸಿದ ಪೊಲೀಸರು!

Date:

ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆಗಳನ್ನು ನೀಡಿ ಫೋರ್ಜರಿ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಪೊಲೀಸರೇ ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಫೋರ್ಜರಿ ಮಾಡಿದ ಆರೋಪದಡಿ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣೆಯ ಸಿಬ್ಬಂದಿ ಪ್ರದೀಪ್‌ ಹಾಗೂ ಸುಳ್ಳು ದಾಖಲೆ ನೀಡಿ ಪಾಸ್‌ಪೋರ್ಟ್‌ ಪಡೆದ ಶಕ್ತಿ ದಾಸ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿ ಕೆಲಸ ಮಾಡುತ್ತಿದ್ದ ವಿಟ್ಲ ಪೊಲೀಸ್ ಠಾಣೆಯಲ್ಲೇ ಎಫ್‌‌ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಕ್ತಿ ದಾಸ್‌ ಎಂಬಾತ 2025ರ ಫೆಬ್ರವರಿ ತಿಂಗಳಿನಲ್ಲಿ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದನು. ಆದರೆ ಪೊಲೀಸ್‌ ವೆರಿಫಿಕೇಶನ್‌ ವೇಳೆ ಆತ ನೀಡಿದ್ದ ವಿಳಾಸವು ದಾಖಲಾತಿಗಳಿಗೆ ತಾಳೆಯಾಗದ ಕಾರಣ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ತದನಂತರ ಜೂನ್‌ನಲ್ಲಿ ಆತ ಮತ್ತೆ ಮರು ಅರ್ಜಿ ಸಲ್ಲಿಸಿದ್ದನು.

ಈ ಮರು ಅರ್ಜಿಯ ಪರಿಶೀಲನೆಯ ಹೊಣೆ ಹೊತ್ತಿದ್ದ ಠಾಣಾ ಸಿಬ್ಬಂದಿ ಪ್ರದೀಪ್‌, ಸಂಬಂಧಪಟ್ಟ ಬೀಟ್‌ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಗಮನಕ್ಕೆ ಬಾರದಂತೆ ಅವರ ಹೆಸರಿನಲ್ಲೇ ನಕಲಿ ವರದಿ ಸಿದ್ಧಪಡಿಸಿದ್ದರು. ಅಷ್ಟೇ ಅಲ್ಲದೆ, ಸಾಬು ಮಿರ್ಜಿ ಅವರ ಸಹಿಯನ್ನು ಫೋರ್ಜರಿ ಮಾಡಿ ಮೇಲಧಿಕಾರಿಗಳಿಂದ ಶಿಫಾರಸ್ಸು ಮಾಡಿಸಿ ಪಾಸ್‌ಪೋರ್ಟ್‌ ಹಾಗೂ ಪೊಲೀಸ್‌ ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಸಿಗುವಂತೆ ಮಾಡಿದ್ದರು. ಬಳಿಕ ಈ ಅಕ್ರಮ ಯಾರಿಗೂ ತಿಳಿಯಬಾರದೆಂದು ಸಂಬಂಧಪಟ್ಟ ಕಡತಗಳನ್ನು ನಾಶಪಡಿಸಿದ್ದರು ಎನ್ನಲಾಗಿದೆ.

ಡಿಸೆಂಬರ್ 19ರಂದು ಕಚೇರಿಯ ದಾಖಲೆಗಳನ್ನು ಪರಿಶೀಲಿಸಿದಾಗ ಈ ಗಂಭೀರ ಲೋಪ ಬೆಳಕಿಗೆ ಬಂದಿದೆ.

ಕೇಂದ್ರ ಸರ್ಕಾರದ ಪ್ರಮುಖ ಗುರುತಿನ ಚೀಟಿಯಾದ ಪಾಸ್‌ಪೋರ್ಟ್‌ ಪಡೆಯಲು ಅಪರಾಧಿಕ ನಂಬಿಕೆ ದ್ರೋಹ ಎಸಗಿದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಅವರ ಸೂಚನೆಯ ಮೇರೆಗೆ ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ, ಪೊಲೀಸ್ ಸಿಬ್ಬಂದಿ ಪ್ರದೀಪ್‌ನನ್ನು ವಶಕ್ಕೆ ಪಡೆದು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...