ಮಂಡ್ಯಕ್ಕೆ ಭೇಟಿ ನೀಡಲಿರುವ ಬರಾಕ್ ಒಬಾಮ, ದಲೈಲಾಮ

Date:

ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಟಿಬೆಟಿಯನ್ ಧಾರ್ಮಿಕ ಗುರು ದಲೈಲಾಮಾ ಅವರು ಡಿಸೆಂಬರ್‌ನಲ್ಲಿ ರಾಜ್ಯದ ಮಂಡ್ಯ ಜಿಲ್ಲೆಗೆ ಭೇಟಿ ನೀಡಿ, ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವರದಿಯಾಗಿದೆ.

ಮಂಡ್ಯ ಜಿಲ್ಲೆಯ ಹಲ್ಲೇಗೆರೆ ಗ್ರಾಮದಲ್ಲಿ ಭೂತಾಯಿ ಟ್ರಸ್ಟ್ ಈ ಆಧ್ಯಾತ್ಮಿಕ ಕೇಂದ್ರವನ್ನು ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿ ಗುರುವಾರ ತಿಳಿಸಿದೆ.

ಅಮೆರಿಕಾದ ವೈದ್ಯ ಡಾ. ಲಕ್ಷ್ಮೀನರಸಿಂಹ ಮೂರ್ತಿ ನೇತೃತ್ವದ ನಿಯೋಗ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಹಲ್ಲೇಗೆರೆ ಗ್ರಾಮಕ್ಕೆ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುತ್, ಕುಡಿಯುವ ನೀರು ಮತ್ತಿತರ ಸೌಲಭ್ಯ ಕಲ್ಪಿಸಲು ನೆರವು ನೀಡುವಂತೆ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಗಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಅಧಿಕಾರಿಗಳ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಆಧ್ಯಾತ್ಮಿಕ ಕೇಂದ್ರದ ಕಾರ್ಯವೈಖರಿಯನ್ನು ವಿವರಿಸಿದ ನಿಯೋಗದ ಸದಸ್ಯರು, ಹಲ್ಲೇಗೆರೆ ಮಂಡ್ಯ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ಹೇಳಿದ್ದಾರೆ.

ಭೂತಾಯಿ ಟ್ರಸ್ಟ್ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರವನ್ನು ಸ್ಥಾಪಿಸುವ ಮಹದಾಶಯ ಹೊಂದಿದೆ. ಇದರ ಶಂಕುಸ್ಥಾಪನೆಗಾಗಿ ಬರಾಕ್ ಒಬಾಮಾ ದಂಪತಿ ಹಾಗೂ ಟಿಬೆಟಿಯನ್ ಧರ್ಮಗುರು ದಲೈಲಾಮಾ ಆಗಮಿಸುವರು. ಹೀಗಾಗಿ ಹಲ್ಲೇಗೆರೆ ಗ್ರಾಮದಲ್ಲಿ ಹೆಲಿಪ್ಯಾಡ್, ರಸ್ತೆ ನಿರ್ಮಾಣ, ವಿದ್ಯುತ್ ದೀಪಗಳ ವ್ಯವಸ್ಥೆ, ಚರಂಡಿ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸರ್ಕಾರದಿಂದ ಒದಗಿಸಿಕೊಡಬೇಕೆಂದು ನಿಯೋಗದ ಸದಸ್ಯರು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮುಸ್ಲಿಂ ಯುವಕರಿಂದ ಖಬರ ಸ್ಥಾನ ಸ್ವಚ್ಛತಾ ಕಾರ್ಯಕ್ರಮ

ಅಮೆರಿಕಾ ಹಾಲಿ ಅಧ್ಯಕ್ಷ ಜೋ ಬೈಡನ್ ಅವರ ವೈದ್ಯಕೀಯ ಸಲಹೆಗಾರ ಡಾ. ವಿವೇಕ್ ಮೂರ್ತಿ ಅವರು ಭಾರತೀಯ ಮೂಲದವರು. ಡಾ ವಿವೇಕ್ ಮೂರ್ತಿ ಅಮೆರಿಕಾದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೂ ವೈದ್ಯಕೀಯ ಸಲಹೆಗಾರರಾಗಿದ್ದರು.

ಡಾ. ವಿವೇಕ್ ಮೂರ್ತಿ ಅವರ ತಂದೆ, ಅನಿವಾಸಿ ಭಾರತೀಯ ಡಾ. ಲಕ್ಷ್ಮಿನರಸಿಂಹ ಮೂರ್ತಿ (ಎಲ್ ಎನ್ ಮೂರ್ತಿ) ಅವರು ತಮ್ಮ ಮಾತೃಭೂಮಿಯ ಅಭ್ಯುದಯಕ್ಕೆ ಪಣ ತೊಟ್ಟಿದ್ದಾರೆ. ಅವರ ಸ್ವಂತ ಊರು ಮಂಡ್ಯ ಜಿಲ್ಲೆಯ ಹಲ್ಲೇಗೆರೆಯಾಗಿದ್ದು, ಇಲ್ಲಿ 13 ಎಕರೆ ಪಿತ್ರಾರ್ಜಿತ ಜಮೀನಿದೆ. ಅದರಲ್ಲಿ ಭೂತಾಯಿ ಟ್ರಸ್ಟ್‌ನಿಂದ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಯೋಗ ಮತ್ತು ಧ್ಯಾನ ಕೇಂದ್ರ ತೆರೆಯಲು ಯೋಜಿಸಿ, ಕಾರ್ಯಪ್ರವೃತ್ತರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...