ದೇರಳಕಟ್ಟೆಯಲ್ಲಿ ಏ.26ರಂದು ‘ಬ್ಯಾರೀಸ್ ಟರ್ನಿಂಗ್ ಪಾಯಿಂಟ್’ ಲೋಕಾರ್ಪಣೆ

Date:

ಬ್ಯಾರೀಸ್ ಗ್ರೂಪ್‌ನ ಬಹು ನಿರೀಕ್ಷಿತ ವಾಣಿಜ್ಯ ಹಾಗೂ ವಸತಿ ಯೋಜನೆ ‘ಬ್ಯಾರೀಸ್ ಟರ್ನಿಂಗ್ ಪಾಯಿಂಟ್’ ಇದೇ ಏಪ್ರಿಲ್ 26 ರಂದು ಉದ್ಘಾಟನೆಯಾಗುತ್ತಿದೆ ಎಂದು ಬ್ಯಾರೀಸ್ ಟರ್ನಿಂಗ್ ಪಾಯಿಂಟ್ ರಿಟೈಲ್ ಮುಖ್ಯಸ್ಥ ಕೆ. ನಂದಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, “ಶಿವಮೊಗ್ಗದ ಬ್ಯಾರೀಸ್ ಸಿಟಿ ಸೆಂಟರ್ ಮಾಲ್ ನಲ್ಲಿ ಯಶಸ್ಸು ಸಾಧಿಸಿದ ಬಳಿಕ ಇದೀಗ ಮಂಗಳೂರು ಹೊರವಲಯದಲ್ಲಿರುವ ದೇರಳಕಟ್ಟೆಯಲ್ಲಿ ನಗರ ಜೀವನ ಶೈಲಿಯ ಈ ವಿಶಿಷ್ಟ ಯೋಜನೆ ಶುಭಾರಂಭವಾಗುತ್ತಿದೆ. ಈ ಯೋಜನೆಯ ಹೃದಯ ಭಾಗದಲ್ಲಿ ಫ್ಯಾಮಿಲಿ ಎಂಟರ್‌ಟೈನ್ಮೆಂಟ್ ಸೆಂಟರ್, ಆಧುನಿಕ ನಾಲ್ಕು ಪರದೆಗಳ ಮಲ್ಟಿಪ್ಲೆಕ್ಸ್, ವಿವಿಧ ಪಾಕ ವಿಧಾನಗಳನ್ನು ಒಳಗೊಂಡ ಸೊಗಸಾದ ಫುಡ್ ಕೋರ್ಟ್, ಜತೆಗೆ ಇಂಟರಾಕ್ಟಿವ್ ಆಟಗಳು, ನಾಲ್ಕು ಲೇನ್ ಬೌಲಿಂಗ್ ಅಲೈ, ದೊಡ್ಡ ಕ್ಲೈಂಬಿಂಗ್ ವಾಲ್, ಬಂಪರ್ ಕಾರುಗಳು, ಇಂಡೋರ್ ಕ್ರಿಕೆಟ್, ಮಕ್ಕಳಿಗಾಗಿ ಸಾಫ್ಟ್ ಏರಿಯಾ ಹಾಗೂ ಇತರ ವೈವಿಧ್ಯಮಯ ಆಟ ಹಾಗೂ ಮನೋರಂಜನೆಗಳು ಲಭ್ಯ ಇವೆ. ಗ್ರಾಹಕರಿಗೆ ಈ ಆಟಗಳಲ್ಲಿ ಭಾಗವಹಿಸಿ , ಫುಡ್ ಕೋರ್ಟ್ ನಲ್ಲಿ ರುಚಿಯಾದ ಖಾದ್ಯಗಳನ್ನು ಸವಿದು ಖುಷಿ ಪಡೆಯಲು ಶೀಘ್ರ ಅವಕಾಶ ಸಿಗಲಿದೆ” ಎಂದು ಅವರು ಹೇಳಿದ್ದಾರೆ.

WhatsApp Image 2025 04 23 at 3.59.38 PM

“ಮಲ್ಟಿಪ್ಲೆಕ್ಸ್, ಎಂಟರ್ ಟೈನ್ಮೆಂಟ್ ಸೆಂಟರ್ ಹಾಗೂ ಫುಡ್ ಕೋರ್ಟ್ ಒಂದೇ ಜಾಗದಲ್ಲಿ ಸಂಯೋಜನೆ ಆಗಿದೆ. ಎತ್ತರದ ಇಂಟೀರಿಯರ್ ಗಳು ಮತ್ತು ಗಾಜಿನ ಭಿತ್ತಿಗಳ ಮೂಲಕ ಆಂತರಿಕ ಹಾಗೂ ಬಾಹ್ಯ ಭಾವವನ್ನು ಒದಗಿಸುತ್ತದೆ. ಪ್ರತಿದಿನ ಬೆಳಗ್ಗಿನಿಂದ ರಾತ್ರಿವರೆಗೆ ವಿಭಿನ್ನ ವಾತಾವರಣ ಅನುಭವಿಸಬಹುದು. ಇಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಐದು ಬಾರಿ ನಮಾಝ್ ನಿರ್ವಹಣೆಗೆ ಪ್ರತ್ಯೇಕ ‌ವ್ಯವಸ್ಥೆ ಕಲ್ಪಿಸಲಾಗಿದೆ. ಬ್ಯಾರೀಸ್ ಟರ್ನಿಂಗ್ ಪಾಯಿಂಟ್ ನ ಈ ಹೊಸ ಯೋಜನೆಯು ದೇರಳಕಟ್ಟೆ ಪರಿಸರದ ಪ್ರಗತಿ, ಬದಲಾವಣೆ ಹಾಗೂ ಹೊಸ ದಿಕ್ಕನ್ನು ಸೂಚಿಸುತ್ತದೆ. ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನಗರಗಳನ್ನು ವಿಶ್ವದರ್ಜೆಗೆ ಏರಿಸಬೇಕು ಎಂಬ ಇಲ್ಲಿನ ಶಾಸಕ ಹಾಗೂ ರಾಜ್ಯ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರ ದೂರದೃಷ್ಟಿಯಂತೆ ಬ್ಯಾರೀಸ್ ಟರ್ನಿಂಗ್ ಪಾಯಿಂಟ್ ರೂಪುಗೊಂಡಿದೆ. ಅಲ್ಲದೇ ಇದೇ ಜಾಗದಲ್ಲಿ ವಿಶಾಲ ಹೈಪರ್ ಮಾರ್ಕೆಟ್ ಮತ್ತು ಅಂತಾರಾಷ್ಟ್ರೀಯ ಬ್ರಾಂಡ್ ಗಳ ಪ್ರಮುಖ ಔಟ್‌ಲೆಟ್ ಗಳು ಶೀಘ್ರ ಆರಂಭಗೊಳ್ಳಲಿವೆ. ಇದು ಶಾಪಿಂಗ್ ಹಾಗೂ ಮನರಂಜನೆಗೆ ಕೇಂದ್ರ ಬಿಂದು ಆಗಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಮೆಟ್ರೋದಲ್ಲಿ ಗುಟ್ಕಾ, ಪಾನ್ ಉಗುಳುವವರೇ ಎಚ್ಚರ! ಬೀಳಲಿದೆ ದಂಡ

ಸುದ್ದಿಗೋಷ್ಠಿಯಲ್ಲಿ ಇಂಟೀರಿಯರ್ ಮತ್ತು ಫಿಟ್ ಔಟ್ಸ್ ನ ಸೀನಿಯರ್ ಮ್ಯಾನೇಜರ್ ಕೋಡಿ ಮೊಹಮ್ಮದ್ ಇಕ್ಬಾಲ್, ಮಾರ್ಕೆಟಿಂಗ್ ವಿಭಾಗದ ಅಸಿಸ್ಟೆಂಟ್ ಮ್ಯಾನೇಜರ್ ಪ್ರಫುಲ್ಲ ಪುಷ್ಪರಾಜ್, ಪಿಆರ್‌ಒ ಬಾಪು ನೈನಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...