ಬೀದರ್‌ | ಬಸವಕಲ್ಯಾಣ, ಹುಲಸೂರ ಬರಪೀಡಿತ ತಾಲೂಕು ಘೋಷಣೆಗೆ ರೈತ ಸಂಘ ಆಗ್ರಹ

Date:

  • ಎಲ್ಲಾ ರೈತರ ಸಂಪೂರ್ಣ ಸಾಲ ಮನ್ನಾ ಘೋಷಿಸಿ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯ
  • ರೈತರ ಬೇಡಿಕೆಗಳಿಗೆ ಜಿಲ್ಲೆಯ ಎಲ್ಲಾ ಶಾಸಕರು ಬೆಂಬಲ ಸೂಚಿಸಿ ಸರ್ಕಾರದ ಗಮನಕ್ಕೆ ತರಬೇಕು

ಬೀದರ್ ಜಿಲ್ಲೆ ಕಳೆದ ಒಂದು ದಶಕದಿಂದ ಅತಿವೃಷ್ಟಿ – ಅನಾವೃಷ್ಟಿಗೆ ತುತ್ತಾಗಿದೆ. ಈ ವರ್ಷವೂ ಅನಾವೃಷ್ಟಿಯಿಂದ ರೈತರ ಬೆಳೆ ಸಂಪೂರ್ಣ ನಾಶವಾಗಿದೆ. ಸಾಲ ಸೋಲ ಮಾಡಿ ಬಿತ್ತನೆ ಮಾಡಿದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬಸವಕಲ್ಯಾಣ ಸಹಾಯಕ ಆಯುಕ್ತರಿಗೆ ಸಲ್ಲಿಸಿದರು.

“ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬಸವಕಲ್ಯಾಣ ಹಾಗೂ ಹುಲಸೂರ ತಾಲೂಕಿನಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಎರಡೂ ತಾಲೂಕು ಬರಪೀಡಿತ ತಾಲೂಕು ಎಂದು ಘೋಷಿಸಿ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು. ನಮ್ಮ ಬೇಡಿಕೆಗಳಿಗೆ ಜಿಲ್ಲೆಯ ಎಲ್ಲಾ ಶಾಸಕರು ಬೆಂಬಲ ಸೂಚಿಸಿ ಸರ್ಕಾರದ ಗಮನಕ್ಕೆ ತರಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರು ಅರಣ್ಯ ಸಚಿವರು ಆಗಿದ್ದಾರೆ. ಹೀಗಾಗಿ ಕಾಡುಪ್ರಾಣಿಗಳಿಂದ ಬೆಳೆ ಹಾನಿ ತಪ್ಪಿಸಲು ಶಾಶ್ವತ ಪರಿಹಾರಕ್ಕಾಗಿ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖರಾದ ರುದ್ರಸ್ವಾಮಿ, ಖಾಸಿಂಸಾಬ್ ಅಲಿ, ವೀರಾರೆಡ್ಡಿ, ಮಹೇಶ ಬಂಡೆ, ಬಸವರಾಜ ಬಂಡೆ, ಕಾಶಪ್ಪ ಬಿರಾದರ, ರಾಜಕುಮಾರ ಬೇಲೂರ, ಇಕ್ರಾಮೋದ್ದೀನ್‌ ಖಾದಿವಾಲೆ ಸೇರಿದಂತೆ ಇತರರಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹುಮನಾಬಾದ್‌ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಲಘು ಭೂಕಂಪನ

ಬೇಡಿಕೆಗಳು:

1. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಸೂಕ್ತ ಪರಿಹಾರ ನೀಡಬೇಕು.

2. ಐಪಿ ಸೆಟ್‌ ಗಳಿಗೆ ಏಳು ಗಂಟೆ ವಿದ್ಯುತ್‌ ಪೂರೈಸಬೇಕು.

3. ರೈತರ ಬೆಳೆಗಳಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಬೆಳೆ ರಕ್ಷಣೆಗೆ ಶಾಶ್ವತ ಪರಿಹಾರ ಒದಗಿಸಿ ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...