ಬಸವಕಲ್ಯಾಣ | ಧಾರಾಕಾರ ಮಳೆಗೆ ಕೊಚ್ಚಿ ಹೋದ ಸೇತುವೆ : ಸ್ಥಳಕ್ಕೆ ಶಾಸಕ ಶರಣು ಸಲಗರ ಭೇಟಿ

Date:

ಬೀದರ್‌ ಜಿಲ್ಲಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಬುಧವಾರ (ಮೇ 21) ರಂದು ಜಿಲ್ಲೆಯ ಹಲವೆಡೆ ಬೆಳಿಗ್ಗೆಯಿಂದಲೇ ಭಾರಿ ಮಳೆಯಾಗಿದೆ.

ಬಸವಕಲ್ಯಾಣ, ಹುಲಸೂರ ಸೇರಿದಂತೆ ತಾಲ್ಲೂಕಿನ ಹಲವೆಡೆ ಸಂಜೆ 5 ಗಂಟೆಗೆ ಆರಂಭಗೊಂಡ ಮಳೆ ರಾತ್ರಿ 11 ಗಂಟೆವರೆಗೂ ಸುರಿಯಿತು. ಅಬ್ಬರ ಮಳೆಗೆ ಬಸವಕಲ್ಯಾಣ ನಗರದ ಹಲವು ರಸ್ತೆ, ಬಡಾವಣೆಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡಿತು.

ರಸ್ತೆಗಳಲ್ಲಿ ನೀರು ತುಂಬಿಕೊಂಡ ಪರಿಣಾಮ ವಾಹನ ಸವಾರರು ರಸ್ತೆ ಕಾಣದೇ ಕೆಲ ಹೊತ್ತು ಪರದಾಡಿದರು. ಅಲ್ಲದೆ, ಕೆಲ ತಗ್ಗು ಪ್ರದೇಶದ ಅಂಗಡಿಗಳಿಗೂ ನೀರು ನುಗ್ಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಕಲ್ಯಾಣ ನಗರದಿಂದ ಮೀರಖಲ್ ಗ್ರಾಮದ ಮಧ್ಯೆ ಗೌರ್ ಗ್ರಾಮದ ಹತ್ತಿರ ಮಳೆ ನೀರಿನ ರಭಸದಿಂದ ರಸ್ತೆ ಜೊತೆಗೆ ಬ್ರಿಡ್ಜ್ ಕೊಚ್ಚಿಕೊಂಡು ಹೋಗಿದ್ದು ಸಂಚಾರ ಸ್ಥಗಿತಗೊಂಡಿತ್ತು.

WhatsApp Image 2025 05 22 at 1.00.00 PM
ಶಾಸಕ ಶರಣು ಸಲಗರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಷಯ ತಿಳಿದು ಗುರುವಾರ ಶಾಸಕ ಶರಣು ಸಲಗರ ಅವರು ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿ, ಗ್ರಾಮಸ್ಥರಿಂದ ಮಾಹಿತಿ ಪಡೆದರು.

ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಫೋನ್ ಕರೆ ಮೂಲಕ ಮಾತನಾಡಿ ಸ್ಥಗಿತಗೊಂಡ ರಸ್ತೆ ಸಂಚಾರಕ್ಕೆ ಅನುವುಮಾಡಿಕೊಡಬೇಕು ಶೀಘ್ರದಲ್ಲೇ ತಾತ್ಕಾಲಿಕ ರಸ್ತೆ ಸುಧಾರಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...