ಬಸವಕಲ್ಯಾಣ | ದಲಿತರ ಭೂಮಿ-ವಸತಿ ಹಕ್ಕಿಗಾಗಿ ದಸಂಸ ಪ್ರತಿಭಟನಾ ಧರಣಿ

Date:

ದಲಿತರ ಭೂಮಿ-ವಸತಿ ಹಕ್ಕಿಗಾಗಿ ಮತ್ತು ಬಸವಕಲ್ಯಾಣ ತಾಲ್ಲೂಕಿನ ಇತರೆ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ತಾಲ್ಲೂಕು ಘಟಕದ ಪದಾಧಿಕಾರಿಗಳು ನಗರದ ತಹಶೀಲ್ದಾರ್‌ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು.

‘ರಾಜ್ಯದ ಒಟ್ಟು ಭೂಮಿಯಲ್ಲಿ ದಲಿತರು ಶೇ 11ರಷ್ಟು ಮಾತ್ರ ಭೂಮಿ ಹೊಂದಿದ್ದಾರೆ. ಈ ಪೈಕಿ ನೀರಾವರಿ ಭೂಮಿ ಅತ್ಯಲ್ಪವಾಗಿದೆ. ಫಾರಂ 50, 53, 57ರ ಅಡಿ ಅರ್ಜಿ ಸಲ್ಲಿಸಿದ ಬಗರ್‌ ಹುಕುಂ ಸಾಗುವಳಿದಾರರ ಜಮೀನು ಸಕ್ರಮಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು’ ಎಂದರು.

‘ಹೈಕೋರ್ಟ್‌ಗಳಲ್ಲಿ ಪಿ.ಟಿ.ಸಿ.ಎಲ್‌ ಪ್ರಕರಣಗಳು ವಜಾಗೊಳ್ಳುತ್ತಿದ್ದು, ನುರಿತ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ಅಗತ್ಯ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಬೇಕು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

70ರ ದಶಕದಲ್ಲಿ ಬಿ.ಬಸವಲಿಂಗಪ್ಪನವರ ದೂರದೃಷ್ಟಿಯ ಫಲದಿಂದ ಪಿಟಿಸಿಎಲ್ ಕಾಯ್ದೆ ಜಾರಿಗೆ ಬಂದರೂ ಸಹ ಜಾತಿವಾದಿಗಳು ಹಾಗೂ ಅಧಿಕಾರ ಶಾಹಿ ಕುತಂತ್ರದಿಂದ ಸರ್ಕಾರವು ಪಿಟಿಸಿಎಲ್ ಜಮೀನುಗಳ ಪ್ರಕರಣದಲ್ಲಿ ದಲಿತ ಸಮುದಾಯಗಳು ಕೋರ್ಟ್‌ಗೆ ಅಲೆದಾಡಿ ವಂಚನೆಗೆ ಒಳಗಾಗಿದ್ದಾರೆʼ ಎಂದು ದೂರಿದರು.

ʼಫಾರಂ 50, 53, 57ರ ಅಡಿ ಅರ್ಜಿ ಸಲ್ಲಿಸಿದ ಬಗರ್‌ ಹುಕುಂ ಸಾಗುವಳಿದಾರರ ಜಮೀನು ಸಕ್ರಮಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು. ಹೈಕೋರ್ಟ್‌ಗಳಲ್ಲಿ ಪಿ.ಟಿ.ಸಿ.ಎಲ್‌ ಪ್ರಕರಣಗಳು ವಜಾಗೊಳ್ಳುತ್ತಿದ್ದು, ನುರಿತ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ಅಗತ್ಯ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಬೇಕು’ ಎಂದರು.

ಹುಲಸೂರ ತಾಲ್ಲೂಕಿನ ಕೋಟಮಾಳ, ತೊಗಲೂರು ಗ್ರಾಮದಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಬೇಕು. ಪರಿಶಿಷ್ಟ ಜಾತಿ ಹಾಗೂ ಭೂಹೀನ ತಳಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್‌ ಹುಕುಂ ಸಾಗುವಳಿಯನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು. ಹುಲಸೂರ ತಾಲ್ಲೂಕಿನ ಮಿರ್ಖಲ್‌ ಹಾಗೂ ಮಿರ್ಖಲ್‌ ತಾಂಡಾ ರೈತರ ಬಳಿ ಪಹಣಿ ಸೇರಿದಂತೆ ಎಲ್ಲ ದಾಖಲೆ ಇದ್ದರೂ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದು ಸಸಿ ನೆಟ್ಟಿದ್ದು, ಕೂಡಲೇ ಆ ಭೂಮಿ ರೈತರಿಗೆ ಬಿಟ್ಟುಕೊಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಇದನ್ನೂ ಓದಿ : ಬೀದರ್‌ ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ʼಬೀದರ್‌ ದರ್ಶನʼ ವಿಶೇಷ ಬಸ್‌ಗೆ ಚಾಲನೆ

ಪ್ರತಿಭಟನೆಯಲ್ಲಿ ತಾಲೂಕಾ ಸಂಘಟನಾ ಸಂಚಾಲಕ ಪ್ರಶಾಂತ ಸಿಂಧೆ, ರಾಜು ಸೂರ್ಯವಂಶಿ, ಆಕಾಶ, ಸಿದ್ದಾರ್ಥ ಸಿಂಧೆ, ಮಾರುತಿ ಕಾಂಬಳೆ, ಮನೋಜ ಖೆಲೆ, ಜಿಯಾವುದ್ದಿನ್‌ ನಿಲಂಗಿಕರ್‌, ಅಜಯ ಮಚಕೂರಿ, ರೋಹಿತ್‌ ಕಾಂಬಳೆ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...