ಶಕ್ತಿಕೇಂದ್ರ ವಿಧಾನಸೌಧ ಎದುರು ಬಸವಣ್ಣ-ಕೆಂಪೇಗೌಡ ಪ್ರತಿಮೆ ಅನಾವರಣ

Date:

  • ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಭಾನುವಾರ ಪ್ರತಿಮೆಗಳ ಅನಾವರಣ
  • ಕೆಂಪೇಗೌಡ, ಬಸವೇಶ್ವರ ಆದರ್ಶದಡಿ ಆಡಳಿತ ಮಾಡುತ್ತಿದ್ದೇವೆ: ಬೊಮ್ಮಾಯಿ

ನಾಡಿನ ಶಕ್ತಿಕೇಂದ್ರ ವಿಧಾನಸೌಧದ ಎದುರು ಸ್ಥಾಪಿಸಲಾಗಿರುವ ಜಗಜ್ಯೋತಿ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಜೆ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಕೆಂಪೇಗೌಡರು ಮತ್ತು ಬಸವೇಶ್ವರರ ಆದರ್ಶಗಳ ಆಧಾರದಲ್ಲಿ ನಾವು ಆಡಳಿತ ಮಾಡುತ್ತಿದ್ದೇವೆ. ಈ ನಾಡಿನ ಶ್ರೇಷ್ಠ ಆಡಳಿತಾಗಾರರು, ತತ್ವಜ್ಞಾನಿಗಳು ಅವರಾಗಿದ್ದರು. ವಿದಾನಸೌಧದ ಮುಂದೆ ಈ ಇಬ್ಬರು ನಾಯಕರ ಪ್ರತಿಮೆ ಅನಾವರಣ ಬಹಳ ದಿನಗಳ ಹಿಂದೆ ಆಗಬೇಕಿತ್ತು. ಅದಕ್ಕೆ ನಾನು ಯಾರನ್ನು ದೂಷಿಸುವುದಿಲ್ಲ” ಎಂದರು.

“ಬಸವೇಶ್ವರರ ಪ್ರತಿಮೆ ವಿಧಾನಸೌಧದ ಮುಂದೆ ಅಷ್ಟೆ ಅಲ್ಲ, ಹೈಕೋರ್ಟ್ ಎದುರಿಗಿದೆ. ನಾಡ ಪ್ರಭು ‌ಕೆಂಪೇಗೌಡರು ಯಾವುದೇ ನದಿ ಇಲ್ಲದ ಪ್ರದೇಶದಲ್ಲಿ ನಗರ ನಿರ್ಮಾಣ ಮಾಡಿದ್ದಾರೆ. ಎಲ್ಲ ಸಮುದಾಯಗಳಿಗೆ ಮಾರುಕಟ್ಟೆ ನಿರ್ಮಿಸಿ, ನಿಜವಾಗಿ ಬಸವಣ್ಣನವರ ಆದರ್ಶಗಳನ್ನು ಜಾರಿಗೆ ತಂದವರು ಕೆಂಪೇಗೌಡರು” ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಡೀ ದೇಶವನ್ನು ಮತ್ತೆ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ನಮ್ಮ ರಾಜ್ಯ, ಆಂಧ್ರಪ್ರದೇಶ, ಓರಿಸ್ಸಾಗಳಲ್ಲಿ ನಕ್ಸಲರ ಹಾವಳಿ ಇತ್ತು. ಅಲ್ಲದೇ ಅನೇಕ‌ ವಿಚಿದ್ರಕಾರಿ ಶಕ್ತಿಗಳನ್ನು ದಮನ ಮಾಡಿ ಇಡಿ ದೇಶವನ್ನು ಅಭಿವೃದ್ಧಿ ಪತದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ” ಎಂದರು.

ಈ ಸಂದರ್ಭದಲ್ಲಿಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಡಾ. ನಿರ್ಮಾಲಾನಂದ ಸ್ವಾಮೀಜಿ, ತುಮಕೂರು ಶಿವಕುಮಾರ ಸ್ವಾಮೀಜಿ, ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಚಿವರಾದ ಆರ್. ಅಶೋಕ, ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಸಿ ಸಿ ಪಾಟೀಲ, ಅಶ್ವತ್ಥನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...