ಬೀದರ್‌ |ಸಮಾಜೋಧಾರ್ಮಿಕ ಕ್ರಾಂತಿಗೈದ ಬಸವಣ್ಣ ಕರ್ನಾಟಕದ ಮಾರ್ಟಿನ್‌ ಲೂಥರ್

Date:

  • ಅನುಭವ ಮಂಟಪದ ಮೂಲಕ ನಡೆಸಿದ ವಚನ ಚಳುವಳಿ ಎಂದೆಂದಿಗೂ ಪ್ರಸ್ತುತ
  • ಕಾಯಕದ ಮಹತ್ವವನ್ನು ಜಗತ್ತಿಗೆ ಶಿವಶರಣರು ಮಾನವ ಜಾತಿ ಒಂದೇ ಎಂದು ಸಾರಿದರು.

ಹನ್ನೆರಡನೆಯ ಶತಮಾನದಲ್ಲಿ ಕಾಯಕವೇ ಕೈಲಾಸವೆಂಬ ತತ್ವದ ಮಹತ್ವ ತಿಳಿಸಿ ಸಾಮಾಜಿಕ, ಆರ್ಥಿಕ, ಧಾರ್ಮಿಕ ಕ್ರಾಂತಿಗೈದು ಸಮಾನತೆಯ ಸಂದೇಶ ಸಾರಿ ವಿಶ್ವಕುಟುಂಬ ಮಾಡಿರುವ ಕರ್ನಾಟಕದ ಮಾರ್ಟಿನ್ ಲೂಥರ್ ಎಂದೇ
ಕರೆಯಲ್ಪಡುವ ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ನಡೆಸಿದ ವಚನ ಚಳುವಳಿ ಎಂದೆಂದಿಗೂ ಪ್ರಸ್ತುತವಾಗಿದೆ ಎಂದು ಬಸವತತ್ವ ಚಿಂತಕ ಶತಾಯುಷಿ ಪೂಜ್ಯ ವಿ. ಸಿದ್ಧರಾಮಣ್ಣ ನುಡಿದರು.

ಬೀದರ್‌ ನಗರದ ಶಿವನಗರ ಉತ್ತರ ಭಾಗದಲ್ಲಿರುವ ಅಕ್ಕಮಹಾದೇವಿ ಕಲ್ಯಾಣಮಂಟಪದಲ್ಲಿ ಬಸವ ಗೆಳೆಯರ ಬಳಗ
ಏರ್ಪಡಿಸಿದ ಶ್ರಾವಣ ಮಾಸದ ಪ್ರವಚನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ” ಬಸವಣ್ಣನವರ ಅನುಭವ ಮಂಟಪದಲ್ಲಿ 770 ಅಮರಗಣಗಳು ಮತ್ತು ಒಂದು ಲಕ್ಷ ತೊಬಂತ್ತಾರು ಸಾವಿರ ಶಿವಶರಣರಿದ್ದರು. ಬಸವಣ್ಣ ಒಬ್ಬ ತತ್ವಜ್ಞಾನಿಯೂ ಆಗಿದ್ದರು. ವಚನ ಸಾಹಿತ್ಯದ ಮೂಲಕ ಅವರು ನೀಡಿದ ಕೊಡುಗೆ ಅಗಾಧವಾಗಿದೆ” ಎಂದರು.

ಕೃತಿ ಬಿಡುಗಡೆಗೊಳಿಸಿದ ಶರಣ ಡಾ. ಅಮರನಾಥ ಸೋಲಪುರೆ ಅವರು ಮಾತನಾಡಿ, “ಅನುಭವ ಮಂಟಪದ ಮೂಲಕ ಶರಣರಿಗೆ ವಚನಗಳ ರಚನೆಗೆ ಕಾರಣಿಕೃತರಾಗಿರುವ ಬಸವಣ್ಣನವರು ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದವರು. ಆಯ್ದಕ್ಕಿ ಲಕ್ಕಮನ್ಮ, ಮಾರಯ್ಯ ಸೇರಿದಂತೆ ಅನೇಕ ವಚನಕಾರರ ವಚನಗಳ ಅರ್ಥಗಳನ್ನು ಸರಳವಾಗಿ ತಿಳಿಯುವಂತೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮತ್ತು ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅವರು ಮಾತನಾಡಿ, 12ನೇ ಶತಮಾನದಲ್ಲಿ ಆಗಿಹೋದ ಶಿವಶರಣ ದೇವರ ದಾಸಿಮಯ್ಯ ಮತ್ತು ಇತರೆ ಶರಣರು ವಚನ ಸಾಹಿತ್ಯ ಮೂಲಕ ಜಾತಿ, ಧರ್ಮ, ವರ್ಣಾಶ್ರಮದ ವಿರುದ್ಧ ಬಂಡೆದ್ದು, ಮಾನವ ಜಾತಿ ಒಂದೇ ಧರ್ಮ ಎಂದು ಸಾರಿದರು. ಅವುಗಳನ್ನು ತಮ್ಮ ನಿಜ ಜೀವನದಲ್ಲಿ ಆಚರಣೆಗೆ ತಂದವರು. ಆತ್ಮಶುದ್ಧಿ ಮತ್ತು ಕಾಯಕದ ಮಹತ್ವವನ್ನು ಜಗತ್ತಿಗೆ ತಿಳಿಸಿದ ಬಸವಾದಿ ಶಿವಶರಣರು ಸಮಾಜದಲ್ಲಿರುವ ಜನಸಾಮಾನ್ಯರ ಜೀವನಲ್ಲಿ ಹಾಸುಹೊಕ್ಕಾಗಿರುವ ಸೂಕ್ಷ್ಮ ಸಮಸ್ಯೆಗಳನ್ನು ಎಳೆ-ಎಳೆಗಳನ್ನು ಬಿಚ್ಚಿಟ್ಟಿದ್ದರು” ಎಂದು ತಿಳಿಸಿದರು.

ರಾಷ್ಟ್ರೀಯ ಬಸವ ದಳದ ಜಿಲ್ಲಾಧ್ಯಕ್ಷ ಸೋಮಶೇಖರ ಅಣ್ಣೆಪ್ಪಾ ಪಾಟೀಲ ಗಾದಗಿ, ಅಧ್ಯಕ್ಷತೆ ವಹಿಸಿದ ಶರಣ ಶಾಂತಲಿಂಗ ಸಾವಳಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ ? ಬೀದರ್‌ |ಬ್ರಿಮ್ಸ್ ಹೊರಗುತ್ತಿಗೆಯಲ್ಲಿ ಲೂಟಿ; ಸಚಿವ ಖೂಬಾರನ್ನು ಸಂಪುಟದಿಂದ ವಜಾಕ್ಕೆ ಒತ್ತಾಯ

ಕಾರ್ಯಕ್ರಮದಲ್ಲಿ ಕುಶಾಲ ಪಾಟೀಲ ಖಾಜಾಪುರ, ಡಾ. ವಿಜಯಶ್ರೀ ಬಶೆಟ್ಟಿ, ಪ್ರೊ. ಮಂಗಲಾ ಪಾಟೀಲ, ಸಿದ್ದಯ್ಯ ಕಾವಡಿಮಠ, ಬಸವರಾಜ ಕಲ್ಯಾಣ, ಲಿಂಗಾಯತ ಅಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಜಿ. ಶೆಟಕಾರ ಉಪಸ್ಥಿತರಿದ್ದರು. ಬಸವಸೇವಾ ಪ್ರತಿಷ್ಠಾನದ ಪರಮ ಪೂಜ್ಯ ಡಾ. ಗಂಗಾಂಬಿಕೆ ಅಕ್ಕ ಬಸವತತ್ವ ಜ್ಞಾನ ಅಧ್ಯಾತ್ಮಿಕ ಪ್ರವಚನ ನಡೆಸಿಕೊಟ್ಟರು. ಅಪ್ಪಾರಾವ ನವಡೆ ದಂಪತಿಗಳು ಗುರುಪೂಜೆ ಮಾಡಿದರು. ಶಿವಕುಮಾರ ಪಾಂಚಾಳ ವಚನ ಸಂಗೀತ ನಡೆಸಿದರು. ರಾಜಕುಮಾರ ಮಿಟಕಾರಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...