ಬಾಗಲಕೋಟೆ | ಕೇವಲ ₹12 ರೂಪಾಯಿಯಲ್ಲಿ ಬಡವರ ಹಸಿವು ನೀಗಿಸುತ್ತಿರುವ ಶಿಕ್ಷಕ ಬಸವರಾಜ್

Date:

ದೇಶದಲ್ಲಿ ತರಕಾರಿ ಸೇರಿದಂತೆ ಎಲ್ಲವೂ ತುಟ್ಟಿಯಾಗಿರುವಾಗ ಬಡವರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಬಾಗಲಕೋಟೆಯ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ಶಿಕ್ಷಕರೋರ್ವರು ಕೇವಲ 12 ರೂಪಾಯಿಯಲ್ಲಿ ಊಟ ಬಡಿಸುತ್ತಿದ್ದಾರೆ. ಆ ಮೂಲಕ ಸದ್ದಿಲ್ಲದೇ ಸಮಾಜ ಸೇವೆಯೊಂದನ್ನು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ರಬಕವಿ-ಬನಹಟ್ಟಿಯ ಚಿಕ್ಕಪಡಸಲಗಿಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿರುವ ಬಸವರಾಜ ಜಾಲೋಜಿಯವರೇ ಈ ಕಾರ್ಯದಲ್ಲಿ ತೊಡಗಿರುವವರು. ಕಳೆದ ಮೂರು ವರ್ಷಗಳಿಂದ ಈ ರೀತಿಯ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿ ಬಿಸಿ ಜುನಕಾ, ಬಿಸಿ ರೊಟ್ಟಿ ನೀಡುವ ಕಾಯಕದಲ್ಲಿ ನಿರತವಾಗಿದ್ದಾರೆ. ಶಿಕ್ಷಕರಾಗಿರುವ ಬಸವರಾಜ ಜಾಲೋಜಿ ಯಾವುದೇ ಅಪೇಕ್ಷೆಯಿಲ್ಲದೆ, ಮತ್ತೊಬ್ಬರ ಸಹಾಯ- ಸಹಕಾರವಿಲ್ಲದೆ ಇಂತಹ ಮಹತ್ವದ ಕಾರ್ಯದಲ್ಲಿ ತೊಡಗಿರುದ್ದೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

12 ರೂಪಾಯಿಗೆ ಟಿ-ಕಾಫಿ ಸಿಗದ ಈ ಕಾಲದಲ್ಲಿ ಅಮ್ಮ ಫೌಂಡೇಶನ್‌ ಎಂಬ ಸಂಸ್ಥೆಯ ಮೂಲಕ ಬನಹಟ್ಟಿಯ ಮಂಗಳವಾರ ಪೇಟೆಯ ಈಶ್ವರಲಿಂಗ ಮೈದಾನ ಹತ್ತಿರವಿರುವ ಊಟದ ಮನೆಯಲ್ಲಿ ಕೇವಲ 12 ರೂ.ಗಳಲ್ಲಿ ಬಡವರ, ನಿರ್ಗತಿಕರ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ.

WhatsApp Image 2024 11 13 at 1.51.36 PM

ಪ್ರಸ್ತುತ ದಿನಂಪ್ರತಿ 120 ರಿಂದ 150 ಜನರು ಆಹಾರ ಸೇವಿಸಲು ಬರುತ್ತಾರೆ. 2 ರೊಟ್ಟಿ, ಜುನುಕದೊಂದಿಗೆ ಉಳ್ಳಾಗಡ್ಡಿ, ಸೌತೆಕಾಯಿ ನೀಡುವ ಇವರು ಈ ಭಾಗದ ಬಡವರಿಗೆ ಭಾಗ್ಯದಾತರಾಗಿದ್ದಾರೆ.

ದಿನಂಪ್ರತಿ ಕೂಲಿ ಕಾರ್ಮಿಕರಿಗೆ, ಚಿಕ್ಕ ವೇತನ ದೊರಕುವ ಸಿಬ್ಬಂದಿಗೆ, ನಿರಾಶ್ರಿತರಿಗೆ ಈ ಊಟದ ಮನೆ ಸಂಜೀವಿನಿಯಾಗಿದೆ. ಇಂದಿನ ದಿನಮಾನದಲ್ಲಿ ಕೇವಲ 12 ರೂ.ಗೆ ದಿನಂಪ್ರತಿ 2 ರೊಟ್ಟಿ ಜತೆಗೆ ಸಾಕಾಗುವಷ್ಟು ಜುನಕಾ ಒದಗಿಸುತ್ತಿರುವುದು ವಿಶೇಷ.

ಈ ದಿನ.ಕಾಮ್ ದೊಂದಿಗೆ ಮಾತನಾಡಿದ ಅಮ್ಮ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಶಿಕ್ಷಕ ಬಸವರಾಜ ಜಾಲೋಜಿ, “ಬಡವರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ 3 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದೇನೆ .12ರೂ.ಗೆ ರೊಟ್ಟಿ ಊಟ ನೀಡಲಾಗುತ್ತಿದೆ. ಎಲ್ಲಿಯವರೆಗೂ ಆ ದೇವರು ಶಕ್ತಿ ನೀಡುತ್ತಾನೋ, ಅಲ್ಲಿಯವರೆಗೂ ಈ ಕಾರ್ಯ ಮುಂದುವರಿಸಿಕೊಂಡು ಹೋಗುತ್ತೇನೆ” ಎಂದಿದ್ದಾರೆ.

WhatsApp Image 2024 11 13 at 1.51.35 PM 1

ಕಳೆದೆರಡು ವರ್ಷಗಳಿಂದ ಇಲ್ಲಿಯೇ ನಿತ್ಯ ಊಟ ಮಾಡುತ್ತೇನೆ. ನಿತ್ಯ 80 ರಿಂದ 100 ರೂ. ಸಂಪಾದಿಸುತ್ತೇನೆ. ಕಡಿಮೆ ದರದಲ್ಲಿ ನಿತ್ಯ ಊಟ ದೊರಕುತ್ತಿರುವುದು ನನ್ನ ಪುಣ್ಯ ಎನ್ನುತ್ತಾರೆ ಬಸಪ್ಪ ಪೂಜಾರಿ.

ವೇತನ ಅಷ್ಟಕ್ಕಷ್ಟೇ ಇದ್ದರೂ ಬಡವರಿಗೆ ಊಟ ಒದಗಿಸುವದರಲ್ಲಿ ತೃಪ್ತಿ ಇದೆ. ನಿರಂತರ ಸೇವೆಯಲ್ಲಿ ನೆಮ್ಮದಿಯಿದೆ ಎನ್ನುತ್ತಾರೆ ಅಡುಗೆ ತಯಾರಕ ವಾಸಂತಿ ಮಠಪತಿ.

ಶಿಕ್ಷಕ ಬಸವರಾಜ ಜಾಲೋಜಿಯವರ ಈ ಸಮಾಜ ಸೇವೆ ಹೀಗೆಯೇ ಮುಂದುವರಿಯಲಿ ಎಂಬುದು ಊಟ ಸವಿಯುತ್ತಿರುವ ಬಡವರ ಹಾರೈಕೆ.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...