ಸ್ನಾನದ ವಿಡಿಯೋ ಪ್ರಕರಣ : ಸಂಘಪರಿವಾರದ ಕಾರ್ಯಕರ್ತನ ವಿರುದ್ಧ ಎಫ್‌ಐಆರ್, ನ್ಯಾಯಾಂಗ ಬಂಧನ

Date:

  • ಆರೋಪಿ ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನ
  • ‘ಸ್ಟೇಷನ್‌ ಬೇಲ್’ನ ಮೇಲೆ ಬಿಟ್ಟು ಕಳುಹಿಸಿದ್ದ ಪೊಲೀಸರು

ಮಂಗಳೂರಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ನಾನ ಮಾಡುವಾಗ ವಿಡಿಯೋ‌ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸರ ವಶದಲ್ಲಿದ್ದ ಬಳಿಕ ಬಿಡುಗಡೆಗೊಂಡಿದ್ದ ಸುದ್ದಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ ಬೆನ್ನಲ್ಲೇ, ಆರೋಪಿ ಸಂಘಪರಿವಾರದ ಕಾರ್ಯಕರ್ತನ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಬಂಧಿತ ಯುವಕನನ್ನು ಮುಲ್ಕಿ ಸಮೀಪದ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ಗುರುತಿಸಲಾಗಿದೆ.

‘ಶೌಚಾಲಯಕ್ಕೆ ಹೋಗಿದ್ದಾಗ ಮೊಬೈಲ್ ಇಟ್ಟು ವಿಡಿಯೋ ಸೆರೆ ಹಿಡಿದಿರುವುದಾಗಿ ಪ್ರಜ್ವಲ್ ಎಂಬವರು ದೂರು ನೀಡಿದ್ದಾರೆ. ಆ ದೂರಿನನ್ವಯ ಐಪಿಸಿ 354 ಸಿ ಐಪಿಸಿ ಮತ್ತು 66 ಇ ಐಟಿ ಕಾಯ್ದೆಯಡಿ ಆರೋಪಿ ಸುಮಂತ್ ಪೂಜಾರಿಯ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸದ್ಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಗಳೂರು | ಮಹಿಳೆ ಸ್ನಾನ ಮಾಡುವಾಗ ವೀಡಿಯೊ‌ ಚಿತ್ರೀಕರಣ : ಸಂಘಪರಿವಾರದ ಕಾರ್ಯಕರ್ತ ಬಂಧನ, ಬಿಡುಗಡೆ!

ಘಟನೆ ಏನು?
ಮಂಗಳೂರು ನಗರ ಹೊರವಲಯದ ಮುಲ್ಕಿಯ ಪಕ್ಷಿಕರೆಯಲ್ಲಿ ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋಗಾಗಿ ಹಿಂದೂ ಜಾಗರಣ ವೇದಿಕೆಯ ಸ್ಥಳೀಯ ಘಟಕದ ಸಕ್ರಿಯ ಕಾರ್ಯಕರ್ತ ಸುಮಂತ್ ಪೂಜಾರಿ ಮೊಬೈಲ್ ಇಟ್ಟಿದ್ದ. ಆದರೆ, ಯುವತಿಯ ಬದಲಾಗಿ ಯುವತಿಯ ಅಣ್ಣ ಬಚ್ಚಲು ಮನೆಗೆ ಸ್ನಾನಕ್ಕಾಗಿ ಬಂದಿದ್ದ. ಇದೇ ವೇಳೆ ವಿಡಿಯೋ ರೆಕಾರ್ಡಿಂಗ್‌ಗೆ ಇಟ್ಟಿದ್ದ ಮೊಬೈಲ್ ಅನ್ನು ತೆಗೆಯಲೆಂದು ಸುಮಂತ್ ಬಂದಾಗ ಏನೋ ಶಬ್ದವಾಗಿದೆ. ಬಳಿಕ ಮೊಬೈಲ್ ಇರುವುದನ್ನು ಗಮನಿಸಿದ ಯುವತಿಯ ಅಣ್ಣ, ರೆಡ್​ ಹ್ಯಾಂಡ್​ ಆಗಿ ಹಿಡಿದು ಆರೋಪಿ ಸುಮಂತ್​ನನ್ನು ಪೊಲೀಸರಿಗೆ ಒಪ್ಪಿಸಿದ್ದರು.

sumant mulky

ಆ ಬಳಿಕ ಪೊಲೀಸರು ‘ಸ್ಟೇಷನ್‌ ಬೇಲ್’ನ ಮೇಲೆ ಬಿಟ್ಟು ಕಳುಹಿಸಿದ್ದಾರೆ ಎಂದೂ ವರದಿಯಾಗಿತ್ತು. ಸಂಘಪರಿವಾರದ ನಾಯಕರ ಒತ್ತಡಕ್ಕೆ ಮಣಿದ ಪೊಲೀಸರು, ಯುವಕನ ವಿರುದ್ಧ ಠಾಣೆಯಲ್ಲೇ ಜಾಮಿನು ನೀಡಬಹುದಾದ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು ಎನ್ನಲಾಗಿತ್ತು.

ಘಟನೆ ಕಳೆದ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ಶುಕ್ರವಾರ ತಡವಾಗಿ ಬೆಳಕಿಗೆ ಬಂದಿತ್ತು. ಈ ಸುದ್ದಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ ಬೆನ್ನಲ್ಲೇ, ಆರೋಪಿಯನ್ನು ಮತ್ತೆ ಬಂಧಿಸಿ, ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಸದ್ಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...