ಬಿಬಿಎಂಪಿ | ಅಗ್ನಿ ಅವಘಡ ಪರಿಶೀಲನೆ; ಇಲ್ಲಿಯವರೆಗೂ 48 ರೆಸ್ಟೋರೆಂಟ್‌ ಬಂದ್​

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ನಾಲ್ಕು ಕಡೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಗಳು ಪದೇಪದೆ ಸಂಭವಿಸುತ್ತಿರುವ ಹಿನ್ನೆಲೆ, ನಗರದಲ್ಲಿರುವ ಪಬ್, ಹೋಟೆಲ್​​, ರೆಸ್ಟೋರೆಂಟ್, ಬೃಹತ್ ಮಳಿಗೆಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಕಳೆದ ನಾಲ್ಕು ದಿನಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಅ.23ರಂದು 5 ರೆಸ್ಟೋರೆಂಟ್‌ಗಳನ್ನು ಮುಚ್ಚಿಸಿದ್ದು, ಇಲ್ಲಿಯವರೆಗೆ ಪರವಾನಗಿ ನಿಯಮಾವಳಿ ಪಾಲಿಸದ 48 ಉದ್ದಿಮೆಗಳನ್ನು ಬಂದ್ ಮಾಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ‌ ನೇತೃತ್ವದಲ್ಲಿ ಅ.23ರಂದು ತಪಾಸಣೆ ನಡೆಸಿದ್ದಾರೆ. ನ್ಯೂನತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಜಾರಿಮಾಡಲಾಗಿದೆ. ಜತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿದೆ ಎಂದು ಪಾಲಿಕೆ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಲು ಸಾಲು ಅಗ್ನಿ ದುರಂತ; ಪಬ್, ಹೋಟೆಲ್​​, ರೆಸ್ಟೋರೆಂಟ್ ಪರಿಶೀಲನೆಗೆ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಅ.23 ರಂದು 79 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 26 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ, 5 ಉದ್ದಿಮೆಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿದೆ.
  • ಅ.20ರಂದು 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ, ಪರವಾನಗಿ ನಿಯಮಾವಳಿ ಪಾಲಿಸದ 12 ಉದ್ದಿಮೆಗಳನ್ನು ಮುಚ್ಚಲಾಗಿದೆ. ನ್ಯೂನತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಜಾರಿಮಾಡಲಾಗಿದೆ.
  • ಅ.21 ರಂದು 280 ಉದ್ದಿಮೆಗಳನ್ನು ಪರಿಶೀಲಿಸಲಾಗಿದ್ದು, ಅದರಲ್ಲಿ 167 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 21 ಉದ್ದಿಮೆಗಳನ್ನು ಮುಚ್ಚಲಾಗಿದೆ.
  • ಅ.22 ರಂದು 157 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 74 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ, 10 ಉದ್ದಿಮೆಗಳನ್ನು ಮುಚ್ಚಲಾಗಿದೆ.
  • ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದೆ. ಈ ಪೈಕಿ‌ 748 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 353 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 48 ಉದ್ದಿಮೆಗಳನ್ನು ಮುಚ್ಚಲಾಗಿದೆ.

ಅಗ್ನಿ ಅವಘಡ

ನಗರದಲ್ಲಿ ನಡೆದ ಸಾಲು ಸಾಲು ಅಗ್ನಿ ದುರಂತಗಳಲ್ಲಿ ಅತ್ತಿಬೆಲೆ ಪಟಾಕಿ ಅಗ್ನಿ ಅವಘಡದಲ್ಲಿ 17 ಜನ ಸಾವನ್ನಪ್ಪಿದ್ದರೆ, ರಾಸಾಯನಿಕ ಸೋರಿಕೆಯಿಂದ ನಗರದ ಚೋಳರಪಾಳ್ಯದಲ್ಲಿರುವ ಅಗರಬತ್ತಿ ಗೋದಾಮಿಗೆ ಬೆಂಕಿ ಹೊತ್ತಿ, ಅಪಾರ ಪ್ರಮಾಣದ ಆಸ್ತಿ ಹಾನಿಯಾಗಿದೆ. ಜತೆಗೆ 5ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿವೆ. ಇನ್ನು ಲಗ್ಗೆರೆಯಲ್ಲಿ ಗುಜರಿ ಅಂಗಡಿಗೆ ಬೆಂಕಿ ಹೊತ್ತಿ ಅಪಾರ ಹಾನಿ ಉಂಟುಮಾಡಿದೆ. ಅ.18ರಂದು ಕೋರಮಂಗಲದಲ್ಲಿರುವ ಪಬ್‌ವೊಂದಕ್ಕೆ ಬೆಂಕಿ ಹೊತ್ತಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.  ಈ ವೇಳೆ, ಪ್ರಾಣ ಉಳಿಸಿಕೊಳ್ಳಲು ಪ್ರೇಮ್​ ಸಿಂಗ್​ ಎಂಬುವರು ಆರನೇ ಮಹಡಿಯಿಂದ ಕೆಳಗೆ ಜಿಗಿದಿದ್ದು, ಬಲಗೈ ಮೂಳೆ ಮುರಿದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...