ಬೆಂಗಳೂರು | ಬಿಬಿಎಂಪಿ 8 ವಲಯಗಳಿಗೆ ಕಾನೂನು ಮುಖ್ಯಸ್ಥರ ನೇಮಕ

Date:

  • ಬಿಬಿಎಂಪಿ ಆಸ್ತಿ ಉಳಿಸಿಕೊಳ್ಳಲು ಅಧಿಕಾರಿಗಳ ನಿರ್ಲಕ್ಷ್ಯ – ಆರೋಪ
  • ನ್ಯಾ. ಗೋವಿಂದರಾಜ್‌ ಏಕಸದಸ್ಯ ನ್ಯಾಯಪೀಠದಿಂದ ಅರ್ಜಿ ವಿಚಾರಣೆ

ವ್ಯಾಜ್ಯಗಳನ್ನು ಬಗೆಹರಿಸಲು ಹಾಗೂ ಕಾನೂನು ಸಲಹೆಗಳನ್ನು ಪಡೆಯುವ ಉದ್ದೇಶದಿಂದ ಬಿಬಿಎಂಪಿಯ 8 ವಲಯಗಳಿಗೆ ಕಾನೂನು ಮುಖ್ಯಸ್ಥರ ನೇಮಕ ಮಾಡಿಕೊಳ್ಳಲಾಗಿದೆ. ನಿವೃತ್ತ ಜಿಲ್ಲಾ ನ್ಯಾಯಾಧೀಶರು ಇವುಗಳ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ ಎಂದು ಹೈಕೋರ್ಟ್‌ ಗೆ ಬಿಬಿಎಂಪಿ ಮಾಹಿತಿ ನೀಡಿದೆ.

ಬೆಂಗಳೂರಿನ ಪಾಲಿಕೆ ಜಾಗವನ್ನು ಒತ್ತುವರಿ ಮಾಡಿಕೊಂಡು ಡಿ ಶಶಾಂಕ್‌ ಎಂಬಾತ ಮನೆ ಕಟ್ಟಿಕೊಂಡಿದ್ದಾರೆ. ಅಧಿಕಾರಿಗಳು ಆ ಜಾಗವನ್ನು ತೆರವುಗೊಳಿಸುವಲ್ಲಿ ಮತ್ತು ಪಾಲಿಕೆ ಆಸ್ತಿಯನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ವೆಂಕಟೇಶ್‌ ಎಂಬುವವರು ಹೈಕೋರ್ಟ್‌ನಲ್ಲಿ ಸಿವಿಲ್‌ ಕೇಸ್‌ ದಾಖಲಿದ್ದರು.

“ಒತ್ತುವರಿ ಮಾಡಿಕೊಂಡು ಮನೆ ಕಟ್ಟುವಾಗ ಪಾಲಿಕೆ ಅಧಿಕಾರಿಗಳು ಕೋರ್ಟ್‌ ಮೆಟ್ಟಿಲೇರಿ, ಪಾಲಿಕೆ ಜಾವನ್ನು ಉಳಿಸಿಕೊಳ್ಳಲು ಯತ್ನಿಸಬೇಕಿತ್ತು. ಆದರೆ, ಯಾವೊಬ್ಬ ಅಧಿಕಾರಿಗಳು ಇದನ್ನು ಮಾಡಲಿಲ್ಲ.ಪಾಲಿಕೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ವ್ಯಕ್ತಿಯ ಜೊತೆ ಶಾಮೀಲಾಗಿ ಕಟ್ಟಡ ಕಟ್ಟಲು ಅನುಕೂಲ ಮಾಡಿಕೊಟ್ಟಿದೆ” ಎಂದು ವೆಂಕಟೇಶ್‌ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಖಾಲಿ ಜಮೀನಿನಲ್ಲಿ ನವಜಾತ ಶಿಶು ಪತ್ತೆ; ಪೊಲೀಸರಿಂದ ರಕ್ಷಣೆ

ಅವರ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದೆ. ಈ ವೇಳೆ ಹಾಜರಿದ್ದ ಬಿಬಿಎಂಪಿ ಕಾನೂನು ಕೋಶದ ಮುಖ್ಯಸ್ಥ ಚಂದ್ರಶೇಖರ ಪಾಟೀಲ, “ಬಿಬಿಎಂಪಿಯ 8 ವಲಯಗಳಲ್ಲಿದ್ದ ಲೋಪಗಳನ್ನು ಸರಿಪಡಿಸಲು ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ. ಪಾಲಿಕೆ ಪರವಾಗಿ ವಕಲತ್ತು ವಹಿಸಲು ವಕೀಲರನ್ನು ನೇಮಿಸಿಕೊಳ್ಳಲು ನಿರ್ದೇಶನ ನೀಡಲಾಗಿದೆ” ಎಂದರು.

“ಬಿಬಿಎಂಪಿಯ ಅಧಿಕಾರಿಗಳು, ಕಾನೂನು ಸಲಹೆಗಾರರು ಮತ್ತು ಬಿಬಿಎಂಪಿ ವಕೀಲರ ನಡುವೆ ಸುಲಭವಾಗಿ ಸಂವಹನ ನಡೆಸುವ ಉದ್ದೇಶದಿಂದ ಸಿಸಿಎಂಎಸ್‌ (ಅಡಕಗೊಂಡ ವಿಷಯಗಳ ನಿರ್ವಹಣಾ ವ್ಯವಸ್ಥೆ) ವೇದಿಕೆ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ” ಎಂದು ತಿಳಿಸಿದರು.

ಇವರ ವಾದವನ್ನು ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಏಪ್ರಿಲ್‌ 11ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...