ರಾಜ್ಯದಲ್ಲಿ ಸೋನಿಯಾ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೆ ತರುತ್ತಿದ್ದೀರಾ? ಬಿ ಸಿ ನಾಗೇಶ್‌ ಕಿಡಿ

Date:

  • ಎನ್‌ಇಪಿ ಅನ್ನು ‘ನಾಗಪುರ ಶಿಕ್ಷಣ ನೀತಿ’ ಎಂದಿದ್ದ ಕಾಂಗ್ರೆಸ್‌
  • ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪ್ರಶ್ನೆ ಮುಂದಿಟ್ಟ ನಾಗೇಶ್

ಎನ್‌ಇಪಿಯನ್ನು ಅನ್ನು ‘ನಾಗಪುರ ಶಿಕ್ಷಣ ನೀತಿ’ ಎನ್ನುವ ಉಪ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್‌ಇಪಿ (ಸೋನಿಯಾ ಶಿಕ್ಷಣ ನೀತಿ)ಯನ್ನು ಜಾರಿಗೆ ತರುತ್ತಿದ್ದೀರಾ? ಎಂದು ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಕುಟುಕಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿ, ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ರದ್ದುಗೊಳಿಸಿ, ಕಡಿಮೆ ಸಮಯದಲ್ಲಿ ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿಯನ್ನು ತರಲು ಪ್ಲಾನ್ ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳುವೆ ಎಂದು ಹೇಳಿದ್ದಾರೆ.

ಬಿ ಸಿ ನಾಗೇಶ್‌ ಪ್ರಶ್ನೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡವ, ಶ್ರೀಮಂತ ಎನ್ನದೇ ಸರ್ವರಿಗೂ ಕೌಶಲ್ಯ ಆಧಾರಿತ, ‘ಸಮಾನ ಗುಣಮಟ್ಟ’ದ ಶಿಕ್ಷಣ ನೀಡುವ ಅಂಶಗಳನ್ನು ಎನ್‌ಇಪಿ ಒಳಗೊಂಡಿದೆ. ಬಡವರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಬಾರದೇ? ಸಮಾನ ಶಿಕ್ಷಣ ನೀಡಿದರೆ ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಬಾಗಿಲು ಹಾಕಬೇಕಾಗಬಹುದು ಎಂಬ ಆತಂಕವೇ?

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಎನ್ಇಪಿ ರೂಪಿಸಲಾಗಿದೆ ಎಂಬ ತಮ್ಮ ಹೇಳಿಕೆಯು ಅತ್ಯಂತ ಬೇಜವಾಬ್ದಾರಿಯುತ ಹಾಗೂ ರಾಜಕೀಯ ಪ್ರೇರಿತ ಹೇಳಿಕೆಯಾಗಿದೆ. ಅಸಲಿಗೆ ರಾಜ್ಯದ ಡಿಎಸ್‌ಇಆರ್‌ಟಿ, ಅನೇಕ ಶಿಕ್ಷಣ ತಜ್ಞರು, ಕುಲಪತಿಗಳು, ಪಾಲಕರು, ಮಕ್ಕಳ ವೈದ್ಯರು, ತಜ್ಞರಿಂದ ಅಭಿಪ್ರಾಯವನ್ನು ಸಂಗ್ರಹಿಸಿ ಸುದೀರ್ಘ ಸಮಾಲೋಚನೆ ನಡೆಸಿ ಎನ್‌ಇಪಿಯನ್ನು ರೂಪಿಸಲಾಗಿದೆ ಎಂಬುದನ್ನು ನಾನು ಸಾಬೀತುಪಡಿಸುತ್ತೇನೆ. ಸವಾಲು ಸ್ವೀಕರಿಸುವಿರಾ?

ವಿಜ್ಞಾನಿಗಳು, ಶಿಕ್ಷಣ ತಜ್ಞರು, ಮಕ್ಕಳ ತಜ್ಞರು, ಶಿಕ್ಷಕ ಸಮುದಾಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚಿಸಿ ಹತ್ತು ವರ್ಷ ಕಾಲ ಅಧ್ಯಯನ ನಡೆಸಿ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ರದ್ದುಗೊಳಿಸಲು ಕಾರಣವೇನು? ಅದರಲ್ಲಿರುವ ಲೋಪ – ದೋಷಗಳು ಏನು ಎಂಬುದನ್ನು ಅಧಿಕೃತ ದಾಖಲೆಗಳ ಮೂಲಕ ರಾಜ್ಯದ ಜನರಿಗೆ ತಿಳಿಸುವಿರಾ?

ಎನ್‌ಇಪಿಯಲ್ಲಿ ಆಯಾ ರಾಜ್ಯಗಳ ಭಾಷೆ/ ಮಾತೃ ಭಾಷೆಯಲ್ಲಿ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲೂ ಇಂಗ್ಲೀಷೇತರ ಭಾಷೆಯಲ್ಲಿ ಕಲಿತು ಪದವಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಎನ್‌ಇಪಿಯಲ್ಲಿ ಈ ರೀತಿ ವೈವಿಧ್ಯಮಯ ಕಲಿಕೆಗೆ ಅವಕಾಶ ಕಲ್ಪಿಸಿರುವುದರಿಂದ ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳಲ್ಲಿ ನೀಡುತ್ತಿರುವ ಇಂಗ್ಲೀಷ್ ಶಿಕ್ಷಣಕ್ಕೆ ಧಕ್ಕೆಯಾಗುತ್ತದೆ ಎಂಬ ಭಯ ಕಾಡುತ್ತಿದೆಯೇ?

ಸಿಬಿಎಸ್ಇ ಶಾಲೆಗಳಲ್ಲಿ ಈಗಾಗಲೇ ಎನ್‌ಇಪಿ ಅನುಷ್ಠಾನವಾಗಿದೆ. ಹೀಗಾಗಿ, ಕಾಂಗ್ರೆಸ್ ನಾಯಕರು ಹಾಗೂ ಇನ್ನಿತರ ಬಲಾಢ್ಯ ರಾಜಕಾರಣಿಗಳ ಒಡೆತನದಲ್ಲಿರುವ ಸಿಬಿಎಸ್‌ಇ ಶಿಕ್ಷಣ ಸಂಸ್ಥೆಗಳಲ್ಲಿನ ಎನ್‌ಇಪಿ ಆಧಾರಿತ ಸಿಬಿಎಸ್‌ಇ ಪಠ್ಯಕ್ರಮದ ಬದಲು ಉದ್ದೇಶಿತ ರಾಜ್ಯ ಶಿಕ್ಷಣ ನೀತಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲಾಗುವುದೇ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...