ವರ್ಗಾವಣೆ ದಂಧೆ, ಪೊಲೀಸ್‌ ಅಧಿಕಾರಿಗಳ ನಡೆ ಬಗ್ಗೆ ಬಿ ಸಿ ನಾಗೇಶ್‌, ಶ್ರೀನಿವಾಸ ಪೂಜಾರಿ ಆಕ್ರೋಶ

Date:

  • ಎಲ್ಲ ಹಂತದಲ್ಲೂ ವರ್ಗಾವಣೆಯಲ್ಲಿ ಸರ್ಕಾರ ಭಾಗಿಯಾಗಿದೆ: ಬಿ ಸಿ ನಾಗೇಶ್‌
  • ಜೈಲುಗಳು ಭಯೋತ್ಪಾದನೆ ಟ್ರೈನಿಂಗ್ ಕೇಂದ್ರಗಳಾಗಿವೆ: ಶ್ರೀನಿವಾಸ ಪೂಜಾರಿ

ವರ್ಗಾವಣೆ ಮತ್ತು ಪೊಲೀಸ್‌ ಅಧಿಕಾರಿಗಳ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಮತ್ತು
ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಆಕ್ರೋಶ ಹೊರ ಹಾಕಿದ್ದಾರೆ.

“ರಾಜ್ಯ ಸರ್ಕಾರ ‌ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಎಲ್ಲ ಹಂತದಲ್ಲೂ ವರ್ಗಾವಣೆಯಲ್ಲಿ ಸರ್ಕಾರ ಭಾಗಿಯಾಗಿದೆ. ಶಾಸಕರು ಅಸಮಾಧಾನ ತೋಡಿಕೊಂಡಿರುವುದು ಎಲ್ಲರಿಗೂ ಅರ್ಥ ಆಗುತ್ತದೆ” ಎಂದು ಬೆಂಗಳೂರಿನಲ್ಲಿ ಬಿ ಸಿ ‌ನಾಗೇಶ್ ಆರೋಪಿಸಿದರು.

ಮುಂದುವರಿದು, “ಸಚಿವರು ಅವರವರೇ ಮಾತಾಡಿಕೊಂಡು ವರ್ಗಾವಣೆ ಮಾಡಿಕೊಳ್ಳುತ್ತಿದ್ದಾರೆ. ‘ಡಿ ದರ್ಜೆ’ ನೌಕರರನ್ನೂ ಬಿಡದಂತೆ ವರ್ಗಾವಣೆ ದಂಧೆ ಈ ಸರ್ಕಾರದಲ್ಲಿ ನಡೆಯುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವರ್ಗಾವಣೆ ದಂಧೆ ಬಗ್ಗೆ ನಾವು ಮಾತಾಡಿದರೆ ಸಾಕ್ಷ್ಯ ನೀಡಿ ಅಂತಾರೆ. ಎಲ್ಲ ಇಲಾಖೆಗಳಲ್ಲೂ ವರ್ಗಾವಣೆಗೆ ಏಜೆಂಟರು ಹುಟ್ಟಿಕೊಂಡಿದ್ದಾರೆ. ಈ ಸರ್ಕಾರಕ್ಕೆ ವರ್ಗಾವಣೆ ದಂಧೆ ಬಿಟ್ಟು ಬೇರೆ ಕೆಲಸ ಇಲ್ಲ. ಶಿಕ್ಷಕರ ಅನೇಕ ಸಮಸ್ಯೆಗಳ ನ್ಯಾಯಾಲಯದಲ್ಲಿವೆ. ಆ ಬಗ್ಗೆ ಸರ್ಕಾರ ಯೋಚಿಸುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಜೀವಕ್ಕೆ ಕಂಟಕ ತರುತ್ತಿರುವ ಜೀವಜಲ; ಆಡಳಿತಶಾಹಿಯೇ ಹೊಣೆ

ಹಣ ಕೊಟ್ಟರೆ ಎಲ್ಲ ವ್ಯವಸ್ಥೆ: ಕೋಟಾ ಶ್ರೀನಿವಾಸ ಪೂಜಾರಿ

“ರಾಜ್ಯದ ಜೈಲುಗಳು ಭಯೋತ್ಪಾದನೆ ಟ್ರೈನಿಂಗ್ ಕೊಡುವ ಕೇಂದ್ರಗಳಾಗಿ ಬದಲಾಗಿವೆ. ಹಣ ಕೊಟ್ಟರೆ ಎಲ್ಲ ವ್ಯವಸ್ಥೆ ಬೇಕಾದರೆ ಸಿಗುತ್ತದೆ. ಅಧಿಕಾರಿಗಳು ಇದರಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಕೇವಲ ಹಿಂಡಲಗಾ ಜೈಲಿನಲ್ಲಿ ಮಾತ್ರ ಅಲ್ಲ ರಾಜ್ಯದ ಬಹುತೇಕ ಎಲ್ಲ ಜೈಲಿನಲ್ಲಿ ಇದೇ ವ್ಯವಸ್ಥೆ ಇದೆ ಎಂದು ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.

“ಬೆಂಗಳೂರಿನ ಜೈಲಿನಲ್ಲಿ ಕುಳಿತು ಉಗ್ರ ಚಟುವಟಿಕೆ ಕೆಲಸ ಮಾಡುತ್ತಾರೆ. ಇದಕ್ಕೆ ಸರ್ಕಾರ ಮತ್ತು ಗೃಹ ಇಲಾಖೆ ನೇರ ಕಾರಣ. ಇದನ್ನ ನಾನು ಖಂಡಿಸುತ್ತೇನೆ” ಎಂದರು.

ಉಡುಪಿ ಪ್ರಕರಣ ಎಸ್‌ಐಟಿಗೆ ನೀಡಲಿ

ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವಹಿಸಬೇಕು. ನಾಳೆ ಮಧ್ಯಾಹ್ನ ರಾಜ್ಯಪಾಲರಿಗೆ ಈ ವಿಚಾರವಾಗಿ ದೂರು ನೀಡುತ್ತಿದ್ದೇವೆ. ಉಡುಪಿ, ಮಂಗಳೂರು ಭಾಗದ ಶಾಸಕರು ರಾಜಭವನಕ್ಕೆ ತೆರಳುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...