ಬೆಳಗಾವಿ | ಪೋಲಿಸರಿಂದ ಅಧಿಕಾರಲೋಪ ಆರೋಪ; ಮಾಹಿತಿ ಹಕ್ಕು ಹೋರಾಟಗಾರ ಕ್ರಮಕ್ಕೆ ಆಗ್ರಹ

Date:

ಪೋಲಿಸರಿಂದ ಅಧಿಕಾರಲೋಪವಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಹಿತಿ ಹಕ್ಕು ಹೋರಾಟಗಾರ ಶ್ರೀನಿವಾಸಗೌಡ ಪಾಟಿಲ್‌ ಆಗ್ರಹಿಸಿದ್ದಾರೆ.

ಬೆಳಗಾವಿಯ ಉತ್ತರ ವಲಯ ಪೋಲಿಸ್ ಮಹಾನಿರೀಕ್ಷಕರು, ಗೃಹ ಮಂತ್ರಿಗಳು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿ‌ ಮಾತನಾಡಿದ್ದಾರೆ.

“ಗ್ರಾಮ ಪಂಚಾಯಿತಿ ಭ್ರಷ್ಟಾಚಾರ ಖಂಡಿಸಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮ ಪಂಚಾಯಿತಿ ಎದುರು 2017ರ ಮಾರ್ಚ್‌ 6ರಂದು ನಡೆಸಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ ನನ್ನ ಮತ್ತು ಸಾರ್ವಜನಿಕರ ವಿರುದ್ಧ ಪೊಲೀಸ್‌ ಇಲಾಖೆಯು ದೂರು ದಾಖಲಿಸಿ, ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿ ದೋಷಾರೋಪಣ ಪತ್ರ ತಾಯಾರಿಸಿ ನಮ್ಮನ್ನು 7 ವರ್ಷಗಳ ಕಾಲ ವಿಚಾರಣೆಗೆ ಒಳಪಡಿಸುವಂತೆ ಮಾಡಿದ್ದರು” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನ್ಯಾಯಾಲಯವು ಈ ಪ್ರಕರಣದಲ್ಲಿ ನಮ್ಮನ್ನು ಆರೋಪಮುಕ್ತಗೊಳಿಸಿದೆ. ಆದ್ದರಿಂದ ದೂರುದಾರರು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಕಲಂ 166, 182, 211, 219, 220, 469, 471 ಮತ್ತು ಕಂಡುಬರುವ ಇತರೆ ಕಲಂಗಳ ಪ್ರಕಾರ ಮೊಕದ್ದಮೆ ದಾಖಲಿಸಬೇಕು. ಅಧಿಕಾರಿಗಳು ಗಂಭೀರ ಕರ್ತವ್ಯಲೋಪವೆಸಗಿದ್ದು ಮತ್ತು ಅಧಿಕಾರಿಗಳಿಗೆ ಸುಳ್ಳು ವರದಿ ನೀಡಿದ್ದಾರೆ. ಹಾಗಾಗಿ 15 ದಿನದೊಳಗಾಗಿ ತನಿಖೆ ನಡೆಸಿ ಸಂಬಂಧಪಟ್ಟ ಪೋಲಿಸ್ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ದಲಿತರಿಗೆ ಬಹಿಷ್ಕಾರ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಈ ಕುರಿತು ಈ ದಿನ.ಕಾಮ್ ಜೊತೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟಿಲ್, “ಅನಾವಶ್ಯಕವಾಗಿ 7 ವರ್ಷಗಳ ಕಾಲ ಕೋರ್ಟಿಗೆ ಅಲೆದಾಡಿಸಿ ಮಾನಸಿಕವಾಗಿ ಕಿರುಕುಳ ನೀಡಿದ ಅಧಿಕಾರಿಗಳನ್ನು ವಜಾಗೊಳಿಸಬೇಕು. ಹಾಗೂ 15 ದಿನಗಳೊಳಗೆ ಸೂಕ್ತ ಆದೇಶವನ್ನು ಮಾಡಬೇಕೆಂದು ಪೋಲಿಸ್ ಅಧಿಕಾರಿಗಳಿಗೆ ಲಿಖಿತವಾಗಿ ಮನವಿ ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...