ಬೆಳಗಾವಿ | ಅರಣ್ಯ ಭೂಮಿ ಅತಿಕ್ರಮಣ ಆರೋಪ; ವಿಷದ ಬಾಟಲಿ ಹಿಡಿದು ರೈತ ಮಹಿಳೆಯರ ಪ್ರತಿಭಟನೆ

Date:

ಅರಣ್ಯ ಭೂಮಿ ಅತಿಕ್ರಮಣ ಮಾಡಿ ಸಾಗುವಳಿ ಮಾಡಿದ್ದಾರೆಂದು ರೈತರನ್ನು ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತಡೆದ ಮಹಿಳೆಯರು ವಿಷದ ಬಾಟಲಿ ಹಿಡಿದು ಪ್ರತಿಭಟಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ ಗ್ರಾಮದಲ್ಲಿ ನಡೆದಿದೆ.

ಗೋವಿನ ಜೋಳ ಹಾಗೂ ಕಬ್ಬುಬೆಳೆ ನಾಶ ಮಾಡಿ ರಥರನ್ನು ಒಕ್ಕಲೆಬ್ಬಿಸಲು ಬಂದಿದ್ದ ಅಧಿಕಾರಿಗಳ ವಿರುದ್ಧ ದೇವಗಾಂವ ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, “1957ರಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತ ಬಂದಿದ್ದೇವೆ. ಇದೀಗ ಇದ್ದಕಿದ್ದಂತೆ ಜೆಸಿಬಿ ಯಂತ್ರದ ಮೂಲಕ ಬಂದ ಅರಣ್ಯ ಇಲಾಖೆ ಅಧಿಕಾರಿಗಳು, ಗೋವಿನಜೋಳ ಕಬ್ಬುಬೆಳೆಗಳನ್ನು ನಾಶ ಮಾಡಿ, ಕೈಗೆ ಬಂದಿದ್ದು ಬಾಯಿಗೆ ಬರದಂತೆ ಮಾಡಲು ಮುಂದಾಗಿದ್ದಾರೆ” ಎಂದು ರೈತ ಮಹಿಳೆಯರು ಆರೋಪಿಸಿದರು.

“ಪಹಣಿ ಪತ್ರಿಕೆಯ ಸಾಗುವಳಿದಾರರ ಹೆಸರಿನಲ್ಲಿ ಕೆಲವರ ಹೆಸರುಗಳಿವೆ. ನಂತರದ ದಿನಗಳಲ್ಲಿ ಈ ಭೂಮಿಯನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಪಡೆಯಲಾಗಿದೆ. ಕೆಲವರಿಗೆ ಭೂಮಿ ಹಕ್ಕು ನೀಡಿ ನಮಗೇಕೆ ನೀಡುತ್ತಿಲ್ಲ. ಈ ಭೂಮಿಯಲ್ಲಿ ನಾವು ಇಷ್ಟು ವರ್ಷಗಳ ಕಾಲ ಬದುಕು ನಡೆಸಿದ್ದೇವೆ. ಸಾಲ ಮಾಡಿ ಬೆಳೆದ ಬೆಳೆಗಳನ್ನು ನಾಶಮಾಡಲು ಇದೀಗ ಅಧಿಕಾರಿಗಳು ಬಂದಿದ್ದಾರೆ. ಸಾಗುವಳಿ ಭೂಮಿಯಲ್ಲಿ ಟ್ರಂಚ್ ಹೊಡೆದು ಸಸಿ ನೆಡಲು ಬಂದಿದ್ದಾರೆ.‌ ನಮ್ಮ ಜಾಗ ಬಿಟ್ಟು ನಾವು ಕದಲುವದಿಲ್ಲ” ಎಂದು ರೈತ ಮಹಿಳೆಯರು ವಿಷದ ಬಾಟಲಿ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಡಾ ಹಗರಣ ಪ್ರಕರಣ | ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮೈಸೂರು ವಕೀಲರ ಬೆಂಬಲ

ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘಟನೆಯ ಮುಖಂಡರಾದ ಎಂ ಎಫ್‌ ಜಕಾತಿ, ಅಪ್ಪೇಶ ದಳವಾಯಿ, ಬಿಷ್ಪಪ್ಪ ಶಿಂಧೆಯವರು ಘಟನಾ ಸ್ಥಳಕ್ಕೆ ಆಗಮಿಸಿ, ಟ್ರಂಚ್‌ ಹೊಡೆಯಲು ಅವಕಾಶ ಕೊಡುತ್ತೇವೆ. ಆದರೆ ಬೆಳೆ ನಾಶಮಾಡಬಾರದೆಂದು ಅಧಿಕಾರಿಗಳ ಜತೆಗೆ ಒಪ್ಪಂದ ಮಾಡಿಕೊಂಡ ಬಳಿಕ ರೈತರು ಟ್ರಂಚ್ ಹೊಡೆಯಲು ಅವಕಾಶ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...