ಬೆಳಗಾವಿ | ಬದುಕಿರುವುದಾಗಿ ಸಾಬೀತು ಮಾಡಲು ಕಚೇರಿಗೆ ಅಲೆದಾಡುತ್ತಿರುವ ವೃದ್ಧ; ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ಭರವಸೆ

Date:

ತಹಶೀಲ್ದಾರ್ ಕಚೇರಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಯೊಬ್ಬರು ಮಾಡಿದ ತಪ್ಪಿನಿಂದಾಗಿ 62 ವರ್ಷದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದು, ತಾನು ಬದುಕಿದ್ದೇನೆಂದು ಸಾಬೀತುಪಡಿಸಲು ಹಲವು ತಿಂಗಳುಗಳಿಂದ ಕಚೇರಿಗೆ ಅಲೆಯುತ್ತಿದ್ದಾರೆ.

ಬೆಳಗಾವಿ ತಾಲೂಕಿನ ಸಾವಗಾಂವ್ ಗ್ರಾಮದ ಗಣಪತಿ ಖಚ್ಚು ಕಾಕತ್ಕರ್ ಮೃತಪಟ್ಟಿದ್ದಾರೆಂದು ಘೋಷಿಸಲಾಗಿದ್ದು, ಒಂದೂವರೆ ವರ್ಷಗಳ ಹಿಂದೆ ಅವರ ಆಧಾರ್ ಕಾರ್ಡ್‌ನಂತಹ ಗುರುತಿನ ಪುರಾವೆಗಳನ್ನು ತಹಶೀಲ್ದಾರ್ ಕಚೇರಿ ರದ್ದುಗೊಳಿಸಿದೆ. ಅವರ ದಿವಂಗತ ಅಜ್ಜನ ಹೆಸರಿನಲ್ಲಿದ್ದ ಆರು ಎಕರೆ ಮತ್ತು 23 ಗುಂಟೆ ಭೂಮಿಯ ಮೇಲಿನ ಅವರ ಹಕ್ಕು ಪಡೆಯಲು “ಉತ್ತರಾಧಿಕಾರಿ ಪ್ರಮಾಣಪತ್ರ” ಪಡೆಯಲು ಗಣಪತಿ ಮತ್ತು ಅವರ ಸಹೋದರರು ಅರ್ಜಿ ಸಲ್ಲಿಸಿದಾಗ ಸಮಸ್ಯೆ ಆರಂಭವಾಗಿದೆ.

ಗಣಪತಿಯವರ ಅಜ್ಜ, ಮಸಾನು ಶಟ್ಟು ಕಾಕತ್ಕರ್ ಅವರು 1976ರ ಫೆಬ್ರವರಿ 2ರಂದು ನಿಧನರಾಗಿದ್ದಾರೆ. ಅವರ ಮರಣಕ್ಕೂ ಮುನ್ನಾ ಅವರು ತಮ್ಮ ಮೂವರು ಪುತ್ರರಿಗೆ ತಲಾ ಒಂಬತ್ತು ಎಕರೆ ಭೂಮಿಯನ್ನು ವರ್ಗಾಯಿಸಿದ್ದು, ಆರು ಎಕರೆ ಮತ್ತು 23 ಗುಂಟೆ ಜಮೀನನ್ನು ತನಗಾಗಿ ಇಟ್ಟುಕೊಂಡಿದ್ದರು. ಅವರ ಮರಣದ ನಂತರ ಮಸಾನು ಅವರ ಮೂವರು ಪುತ್ರರು ಭೂಮಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಲು ಚಿಂತಿಸಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ವರ್ಷಗಳ ನಂತರ ಮಸಾನು ಅವರ ಮೂವರು ಪುತ್ರರು ನಿಧನರಾದರು. ಗಣಪತಿ ಸೇರಿದಂತೆ ಮಸಾನು ಅವರ ಎಂಟು ಮೊಮ್ಮಕ್ಕಳು ಎರಡು ವರ್ಷಗಳ ಹಿಂದೆ ಜಮೀನನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳಲು ನಿರ್ಧರಿಸಿದ್ದಾರೆ. ಉತ್ತರಾಧಿಕಾರ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಲು ತಹಶೀಲ್ದಾರ್ ಕಚೇರಿಯಿಂದ ಮೊಮ್ಮಕ್ಕಳು ತಮ್ಮ ಅಜ್ಜನ ಮರಣ ಪ್ರಮಾಣಪತ್ರವನ್ನು ಸ್ವೀಕರಿಸದಿದ್ದಾಗ, ಅವರು ಬೆಳಗಾವಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ನಂತರ ಅರ್ಜಿದಾರರಿಗೆ ಮಸಾನು ಮರಣ ಪ್ರಮಾಣ ಪತ್ರ ನೀಡುವಂತೆ ತಹಶೀಲ್ದಾರ್ ಕಚೇರಿಗೆ ನ್ಯಾಯಾಲಯ ಸೂಚಿಸಿದೆ.

ಹಿಂಡಲಗಾದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮರಣ ಪ್ರಮಾಣ ಪತ್ರ ಸಿದ್ಧಪಡಿಸಿದ ಬಳಿಕ ಅಲ್ಲಿನ ಕಂಪ್ಯೂಟರ್ ಆಪರೇಟರ್ ಒಬ್ಬರು ಗಣಪತಿ ಅವರಿಗೆ ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್ ನೀಡುವಂತೆ ತಿಳಿಸಿದರು. ಆದರೆ, ಕಂಪ್ಯೂಟರ್ ಆಪರೇಟರ್ ತನ್ನ ಅಜ್ಜನ ಬದಲಿಗೆ ಗಣಪತಿ ಅವರ ಆಧಾರ್ ಕಾರ್ಡ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿ ಮರಣ ಪ್ರಮಾಣಪತ್ರದಲ್ಲಿ ಮುದ್ರಿಸಿದ್ದಾರೆ. ಅದೇ ಸಮಯದಲ್ಲಿ, ಗಣಪತಿ ಅವರ ಆಧಾರ್ ಸಂಖ್ಯೆಯನ್ನು ಲಾಕ್ ಮಾಡಲಾಗಿದೆ ಮತ್ತು ಅವರು ತೀರಿಕೊಂಡಿದ್ದಾರೆಂದು ಉಲ್ಲೇಖಿಸಿದ್ದು, ಪಡಿತರ ಚೀಟಿಯಿಂದ ಅವರ ಹೆಸರನ್ನೂ ಕೂಡಾ ತೆಗೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಖಾನಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಕಂಪ್ಯೂಟರ್ ಆಪರೇಟರ್ ತನ್ನ ಅಜ್ಜನ ಮರಣ ಪ್ರಮಾಣಪತ್ರದಲ್ಲಿ ತನ್ನ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿದ ಕಾರಣ ತನ್ನ ಹೆಸರನ್ನು ಡಿಲೀಟ್ ಮಾಡಲಾಗಿದೆ ಎಂಬುದು ಜೂನ್ 2024ರಲ್ಲಿ ಅವರ ಗಮನಕ್ಕೆ ಬಂದಿದೆ. ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳದ ಕಾರಣ, ಗಣಪತಿ ತಾನು ಬದುಕಿದ್ದೇನೆಂಬುದನ್ನು ಸಾಬೀತುಪಡಿಸಲು ಜನವರಿ 6ರಂದು ತಮ್ಮ ಕುಟುಂಬ ಸದಸ್ಯರು ಮತ್ತು ವಕೀಲರೊಂದಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರನ್ನು ಸಂಪರ್ಕಿಸಿದರು. ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದು, ಕ್ರಮ ಕೈಗೊಳ್ಳುವಂತೆ ಸಹಾಯಕ ಆಯುಕ್ತರಿಗೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...