ಬೆಳಗಾವಿ | ಗಣೇಶ ವಿಸರ್ಜನೆಗೆ 8 ಸ್ಥಳಗಳಲ್ಲಿ ವ್ಯವಸ್ಥೆ; ಬಿಗಿ ಭದ್ರತೆ

Date:

ಬೆಳಗಾವಿ ನಗರದಲ್ಲಿ ಸೆಪ್ಟೆಂಬರ್ 28ರಂದು ನಡೆಯಲ್ಲಿರುವ ಗಣೇಶ ವಿಸರ್ಜನೆಗೆ 8 ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಕಪಿಲೇಶ್ವರ ದೇವಸ್ಥಾನ ಬಳಿಯ ಹಳೆ ಮತ್ತು ಹೊಸ ಹೊಂಡ, ಜಕ್ಕೇರಿ ಹೊಂಡ, ಅನಗೋಳದ ಕೆರೆ ಸೇರಿದಂತೆ 8 ಕಡೆ ವ್ಯವಸ್ಥೆ ಮಾಡಲಾಗಿದ್ದು, ವೀಕ್ಷಿಸಲು ಬರುವವರಿಗೆ ಅನುಕೂಲವಾಗಲೆಂದು ಸಮರ್ಪಕ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಧರ್ಮವೀರ ಸಂಭಾಜಿ ವೃತ್ತದಲ್ಲಿ ವೀಕ್ಷಕರ ಗ್ಯಾಲರಿ ನಿರ್ಮಿಸಲಾಗಿದೆ. ಗಣೇಶ ವಿಸರ್ಜನೆ ಪ್ರಕ್ರಿಯೆ ಸುಗಮವಾಗಿ ಮುಗಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ” ಎಂದು ಹೇಳಿದರು.

“ಬೆಳಗಾವಿ ನಗರದ ಬಡಾವಣೆಗಳಲ್ಲಿ 378 ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಹುತಾತ್ಮ ಚೌಕ್‌ನಲ್ಲಿ ಸಂಜೆ 4ಕ್ಕೆ ಮೂರ್ತಿಗಳ ಮೆರವಣಿಗೆಗೆ ಚಾಲನೆ ಸಿಗಲಿದೆ. ಅಲ್ಲಿಂದ ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ, ಯಂಡೇಖೂಟ, ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಕಿರ್ಲೋಸ್ಕರ್‌ ರಸ್ತೆ, ರಾಮಲಿಂಗಖಿಂಡ್‌ ಗಲ್ಲಿ ರಸ್ತೆ, ಟಿಳಕ ಚೌಕ, ಹೆಮು ಕಲಾನಿ ಚೌಕ್‌, ಪಾಟೀಲ ಗಲ್ಲಿಯ ಶನಿ ಮಂದಿರ, ಕಪಿಲೇಶ್ವರ ರೈಲ್ವೆ ಮೇಲ್ಸೇತುವೆ ಮಾರ್ಗವಾಗಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಈ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲಾಗಿದ್ದು, ಮೂರ್ತಿ ಸಾಗಿಸುವ ವಾಹನಗಳಿಗೆ ಅಡ್ಡಿಯಾಗಬಹುದಾದ ವಿದ್ಯುತ್ ಪರಿಕರಗಳನ್ನು ತೆರವುಗೊಳಿಸಲಾಗಿದೆ. ಮೆರವಣಿಗೆ ವೇಳೆ ನಿರಂತರವಾಗಿ ವಿದ್ಯುತ್‌ ಸರಬರಾಜು ಮಾಡಲು ಮತ್ತು ಅಗತ್ಯ ಸುರಕ್ಷತೆ ವಹಿಸಲು ಹೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕಿತ್ತೂರು ಉತ್ಸವ: ಕವಿಗೋಷ್ಠಿಗೆ ಕವನ ಆಹ್ವಾನ

“ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೆರವಣಿಗೆ ಮಾರ್ಗ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ 487 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪ್ರತಿ ಚಟುವಟಿಕೆ ಮೇಲೆ ನಿಗಾ ವಹಿಸಲು 8 ಡ್ರೋನ್‌ ಕ್ಯಾಮೆರಾ ಬಳಸಲಾಗುತ್ತಿದೆ. ಬೆಳಗಾವಿ ಮತ್ತು ಬೇರೆ ಜಿಲ್ಲೆಗಳ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ, 10 ಕೆಎಸ್‌ಆರ್‌ಪಿ ತುಕಡಿ, 8 ಸಿಎಆರ್‌ ತುಕಡಿಗಳನ್ನು ಬೆಳಗಾವಿ ಗಣೇಶ ವಿಸರ್ಜನೆ ಭದ್ರತೆಗಾಗಿ ಬಳಸಲಾಗುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...