ಬೆಳಗಾವಿ | ಆಸ್ತಿಗಾಗಿ ಜಗಳ: ತಮ್ಮನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆಗೈದ ಸಹೋದರ

Date:

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಹತ್ತಿಸಿ ಒಡಹುಟ್ಟಿದ ತಮ್ಮನನ್ನೇ ಅಣ್ಣನೋರ್ವ ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣ ಹೊರವಲಯದ‌ ಜಮೀನಿನಲ್ಲಿ ನಡೆದಿದೆ.

ಯರಗಟ್ಟಿ ಪಟ್ಟಣದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಕಿರುಕುಳಕ್ಕೆ ಬೇಸತ್ತು ಸಹೋದರನ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದ್ದು ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

ಯರಗಟ್ಟಿಯ ಗೋಪಾಲ ಬಾವಿಹಾಳ (27) ಹತ್ಯೆಯಾದ ವ್ಯಕ್ತಿಯಾಗಿದ್ದು, ಮಾರುತಿ ಬಾವಿಹಾಳ (30) ತಮ್ಮನನ್ನೇ ಹತ್ಯೆಗೈದ ಆರೋಪಿ ಸಹೋದರ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿತ್ಯ ಮದ್ಯ ಸೇವಿಸಿ ಬಂದು ಪಿತ್ರಾರ್ಜಿತ ಆಸ್ತಿ ಅನುಭವಿಸಲು ನಿಮಗೆ ಬಿಡಲ್ಲ‌ ಎಂದು ಗೋಪಾಲ ಕಿರಿಕಿರಿ ಮಾಡುತ್ತಿದ್ದ ಹಾಗೂ ತನ್ನ ಪಾಲಿಗೆ ಬಂದಿದ್ದ ಟ್ರ್ಯಾಕ್ಟರ್ ಅನ್ನು ಗೋಪಾಲ ಪತ್ನಿಯ ಮನೆಯಲ್ಲಿ ಇರಿಸಿದ್ದ. ಹೀಗಾಗಿ, ತಮ್ಮನ ಕಿರಿಕಿರಿಗೆ ಬೇಸತ್ತು ಬೈಕಿನಲ್ಲಿ ಹೊರಟಿದ್ದ ಗೋಪಾಲನ ಮೇಲೆ ಟ್ರ್ಯಾಕ್ಟರ್ ಹರಿಸಿ ಮಾರುತಿ ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ 37

ಗೋಪಾಲನ ತಂದೆ ಅರ್ಜುನ್‌ ಬಾವಿಹಾಳ ಅವರಿಗೆ ಮೂವರು ಗಂಡು ಮಕ್ಕಳಿದ್ದು, ಕಳೆದ 15 ದಿನಗಳ ಹಿಂದಷ್ಟೇ ತಮಗೆ ಬಂದ ಜಮೀನು ಪಾಲು, ಹಣ ಪಡೆದು ಸಹೋದರರು ಬೇರೆ ಬೇರೆಯಾಗಿದ್ದರು. ಮೂವರೂ ಸಹೋದರರಿಗೂ ಒಂದೊಂದು ಟ್ರ್ಯಾಕ್ಟರ್ ಪಾಲಿಗೆ ಬಂದಿದ್ದವು. ಮೃತ ಗೋಪಾಲನಿಗೆ ಬಂದಿದ್ದ ಟ್ರ್ಯಾಕ್ಟರ್ ಅನ್ನು ಹೆಂಡತಿ ಮನೆಯಲ್ಲಿ ಇಟ್ಟಿದ್ದಕ್ಕೆ ಗಲಾಟೆ ಆಗಿತ್ತು. ನಾನು ದುಡಿದಿರುವುದನ್ನು ಹಾಳು ಮಾಡುತ್ತಿರುವೆ ಎಂದು ಆಗಾಗ್ಗೆ ಇಬ್ಬರು ಸಹೋದರ ನಡುವೆ ಜಗಳ ನಡೆಯುತ್ತಲೇ ಇತ್ತು.‌ ಗೋಪಾಲ ವಿಪರೀತ ಕುಡಿತದ ಚಟ ಹೊಂದಿದ್ದು, ಟ್ರ್ಯಾಕ್ಟರ್ ವಿಚಾರಕ್ಕೆ ಇಬ್ಬರು ಸಹೋದರರ ಮಧ್ಯೆ ಮತ್ತೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗದಗ | ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಡಿ.24ಕ್ಕೆ ಬಂದ್‌ಗೆ ಕರೆ

ತಮ್ಮನನ್ನು ಕೊಲೆ‌ ಮಾಡಲೆಂದೇ ಹೊಂಚುಹಾಕಿ ಕುಳಿತಿದ್ದ ಮಾರುತಿ, ಯರಗಟ್ಟಿ ಹೊರವಲಯದ ಬೂದಿಗೊಪ್ಪ ರಸ್ತೆಯಲ್ಲಿ ಬೈಕ್ ಮೇಲೆ ಬರುತ್ತಿದ್ದ ಗೋಪಾಲನಿಗೆ ಟ್ರ್ಯಾಕ್ಟರ್​​ನಿಂದ ಡಿಕ್ಕಿ ಹೊಡೆದಿದ್ದಾನೆ. ಅವಘಡದಲ್ಲಿ ಜಮೀನಿನಲ್ಲಿ ಬಿದ್ದ ಗೋಪಾಲ ಮೇಲೆ ಮನಬಂದಂತೆ ಟ್ರ್ಯಾಕ್ಟರ್ ಹಾಯಿಸಿ ಹತ್ಯೆ ಮಾಡಿದ್ದಾನೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಟ್ರ್ಯಾಕ್ಟರ್​​ನಡಿ ಸಿಲುಕಿದ್ದ ಭಯಾನಕ ದೃಶ್ಯವನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...