ಬೆಳಗಾವಿ | ಜೂ.4ರಂದು ಮತ ಎಣಿಕೆ; ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆ

Date:

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯು ಜೂನ್‌ 4ರಂದು ನಡೆಯಲಿದ್ದು, ಇದಕ್ಕಾಗಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳೊಂದಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೊಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ತಿಳಿಸಿದರು.

ಮತ ಎಣಿಕೆ ಕೇಂದ್ರವಾದ ಪಟ್ಟಣದ ಆರ್ ಡಿ ಕಾಲೇಜಿನಲ್ಲಿ ಸ್ಥಾಪಿಸಲಾದ ಮಾಧ್ಯಮ‌ ಕೇಂದ್ರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

“ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಕ್ಕೆ ಮೇ 7ರಂದು ಜರುಗಿದ ಮತದಾನದ ವೇಳೆ ಚಲಾವಣೆಯಾದ ಒಟ್ಟು 13,85,688 ಮತಗಳು ಹಾಗೂ 4,722 ಅಂಚೆ ಮತಗಳ ಎಣಿಕೆ ನಡೆಯಲಿದೆ. ಜತೆಗೆ ಇಟಿಪಿಬಿಎಸ್ ಮತಗಳ ಎಣಿಕೆಯೂ ನಡೆಯಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಂಟು ಇವಿಎಂ ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗಿರುತ್ತದೆ. ಪ್ರತಿ ಮತ ಎಣಿಕೆ ಕೇಂದ್ರದಲ್ಲಿ 12 ಟೇಬಲ್ ‌ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತಗಳ ಎಣಿಕೆಗೆ 16 ಟೇಬಲ್ ಹಾಗೂ ಇಟಿಪಿಬಿಎಸ್ ಮತಗಳ ಎಣಿಕೆಗೆ 2 ಕೇಂದ್ರಗಳನ್ನು ಸ್ಥಾಪಿಸಲಾಗಿದೆ” ಎಂದರು.

“ಮತ ಎಣಿಕೆಗೆ ಹೆಚ್ಚುವರಿ ಸಿಬ್ಬಂದಿ ಸೇರಿದಂತೆ ಒಟ್ಟು 139 ಮಂದಿ ಮತ ಎಣಿಕೆ ಸೂಪರ್‌ವೈಸರ್, 158 ಮಂದಿ ಮತ ಎಣಿಕೆ ಸಹಾಯಕರು ಹಾಗೂ 139 ಮಂದಿ ಮೈಕ್ರೊ ಅಬ್ಸರ್‌ವರ್‌ಗಳನ್ನು ಹಾಗೂ 40 ಮಂದಿ ಇಟಿಪಿಬಿಎಸ್ ಮತಗಳ ಸ್ಕ್ಯಾನಿಂಗ್ ಪ್ರಕ್ರಿಯೆಗೆ ಸಿಬ್ಬಂದಿ ನಿಯೋಜಿಸಲಾಗಿದೆ” ಎಂದರು.

“ಜೂನ್‌ 4ರ ಬೆಳಿಗ್ಗೆ 8ಕ್ಕೆ ಅಂಚೆ ಮತಗಳ ಎಣಿಕೆ ನಡೆಯಲಿದ್ದು, 8.30ಕ್ಕೆ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ, ನಂತರ ಪ್ರತಿ ಮತಕ್ಷೇತ್ರದ 5 ವಿವಿ ಪ್ಯಾಟ್‌ಗಳನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಿ ಎಣಿಕ ಕಾರ್ಯ ಪ್ರಾರಂಬಿಸಲಾಗುವುದು” ಎಂದು ತಿಳಿಸಿದರು.

“ಮತ ಎಣಿಕೆ ಮುಗಿದ ನಂತರ ವಿದ್ಯುನ್ಮಾನ ಯಂತ್ರಗಳನ್ನು ಬೆಳಗಾವಿ ನಗರದ ಹಿಂಡಲಗಾದಲ್ಲಿನ ವೇರ್‌ಹೌಸ್‌ಗೆ ಕಳುಹಿಸಲಾಗುವುದು. ಮತ ಎಣಿಕ ಏಜೆಂಟರ್‌ಗಳು ಮೊಬೈಲ್‌ಗಳನ್ನು ಮತ ಎಣಿಕಾ ಕೇಂದ್ರದೊಳಗೆ ತರಲು ಅವಕಾಶವಿರುವುದಿಲ್ಲ” ಎಂದು ತಿಳಿಸಿದರು.

ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ‌ ಮಾತನಾಡಿ, “ಮತ ಎಣಿಕಾ ಕಾರ್ಯವು ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ಜರುಗಿಸಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್‌ ಸಿಬ್ಬಂದಿ ನೀಯೋಜಿಸಲಾಗಿದೆ. ಜತೆಗೆ ಜೂನ್‌ 1ರಿಂದ ಮತ ಎಣಿಕೆ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶಕ್ಕೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ; ನಿಯಮ ಪಾಲನೆಗೆ ಸಹಾಯವಾಣಿ ಸ್ಥಾಪನೆ

“ಮತ ಎಣಿಕೆ ದಿನದಂದು ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದ್ದು, ನಿಪ್ಪಾಣಿ ಮಾರ್ಗದಿಂದ ಬರುವ ವಾಹನಗಳಿಗೆ ಐಟಿಐ ಕಾಲೇಜು‌ ಮೈದಾನದಲ್ಲಿ, ಯಕ್ಸಂಬಾ ಮಾರ್ಗದಿಂದ ಬರುವ ವಾಹನಗಳಿಗೆ ಭೀಮ‌ ನಗರದ ಹತ್ತಿರದ‌ ಮುನ್ಸಿಪಾಲಿಟಿ ಖಾಲಿ ಜಾಗದಲ್ಲಿ, ಅಂಕಲಿ‌ ಮಾರ್ಗದಿಂದ ಬರುವ ವಾಹನಗಳಿಗೆ ಪರಟಿ ನಾಗಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹಾಗೂ ಮುಲ್ಲಾ ಪ್ಲಾಟ ಖಾಲಿ ಸ್ಥಳದಲ್ಲಿ, ಹುಕ್ಕೇರಿ ಮಾರ್ಗದಿಂದ ಬರುವ ವಾಹನಗಳಿಗೆ ಪದ್ಮಾ ಮಂಗಲ ಕಾರ್ಯಾಲಯದ ಹತ್ತಿರ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...