ಬೆಳಗಾವಿಯ ರೈತ ನಾಯಕಿ, ಜಯಶ್ರೀ ಎಂಬ ಮಾಸ್ ಲೀಡರ್

Date:

ಬೆಳಗಾವಿಯ ರೈತ ನಾಯಕಿ ಜಯಶ್ರೀ ಗುರನ್ನವರ್ ನಿಧನರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ವಿಧವೆಯಾಗಿದ್ದ ಜಯಶ್ರೀ, ಪತಿಯ ಸಾವಿನ ನಂತರ ಗಂಡನ ಮನೆಯಲ್ಲಿ ವಿಪರೀತ ಹಿಂಸೆ ಅನುಭವಿಸಿ, ತನಗಾದ ಶೋಷಣೆ ಮತ್ಯಾರಿಗೂ ಆಗಬಾರದೆಂದು ತನ್ನ ಚಿಕ್ಕ ಮಗನೊಂದಿಗೆ ಹೊರಬಂದು ಹೋರಾಟಗಾರ್ತಿ ಆದ ದಲಿತ ಸಮುದಾಯದ ಚೇತನ ಜಯಶ್ರೀ ಗುರನ್ನವರ್.

ಮೊದಲು Action Aid ಎಂಬ ಸರ್ಕಾರೇತರ ಸಂಸ್ಥೆಯಲ್ಲಿ ಸಾಮಾಜಿಕ ಕಾರ್ಯಕರ್ತೆಯಾಗಿ ಕೆಲಸ ಮಾಡಿ ನಂತರ ಬೆಳಗಾವಿಯಲ್ಲಿ ರೈತ ಹೋರಾಟಕ್ಕೆ ಧುಮುಕಿದರು. ಕಬ್ಬಿಗೆ ಹೆಚ್ಚಿನ ಬೆಂಬಲ ಬೆಲೆ ಕೊಡಿಸಲು ಬೆಳಗಾವಿಯ ಸುವರ್ಣ ಸೌಧದ ಗೇಟಿನ ಬೀಗವನ್ನು, ಸೈಜು ಕಲ್ಲಿನಿಂದ ಒಡೆದು ರೈತರ ಕಬ್ಬಿನ ಲಾರಿಗಳನ್ನು ಸುವರ್ಣ ಸೌಧದ ಒಳಗೆ ನುಗ್ಗಿಸುವ ಪ್ರಯತ್ನ ಮಾಡುವಂತಹ ಹೋರಾಟ ಮಾಡಿ ರಾಜ್ಯಾದ್ಯಂತ ಸುದ್ದಿಯಾಗಿದ್ದ ಧೈರ್ಯವಂತ ದಿಟ್ಟ ಮಹಿಳಾ ರೈತ ಹೋರಾಟಗಾರ್ತಿಯಾಗಿದ್ದರು ಜಯಶ್ರೀ.

1980 ಹಾಗೂ 90ರ ದಶಕದಲ್ಲಿ ಶಾಮಿಯಾನ ಹಾಗೂ ಕುರ್ಚಿಗಳಿಲ್ಲದೆಯೇ ಜನಸಾಗರವು ರೈತ ಸಂಘದ ಸಮಾವೇಶಗಳಿಗೆ ಹರಿದು ಬರುತ್ತಿದ್ದ ಕಾಲವಿತ್ತು. ಈಗ ಅಂತಹ ಕಾಲವೆಲ್ಲಿ ಎಂಬ ಪ್ರಶ್ನೆ ಹುಟ್ಟುತ್ತಿರುವಾಗಲೇ, ನಮ್ಮ ಅನಿಸಿಕೆ ಸುಳ್ಳು ಎಂದು ಮನವರಿಕೆ ಮಾಡುವಂತೆ ಜನಸಾಗರವನ್ನು ಜಯಶ್ರೀ ಸೃಷ್ಟಿಸಿಬಿಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಯಶ್ರೀ ಮತ್ತು ಚೂನಪ್ಪ ಪೂಜೇರಿರವರುಗಳ ನೇತೃತ್ವದಲ್ಲಿ ಬೆಳಗಾವಿ ಅನೇಕ ಅವಿಸ್ಮರಣೀಯ ರೈತ ಹೋರಾಟಗಳನ್ನು ಕಂಡಿದೆ. ವಿಪರೀತ ಆರ್ಥಿಕ ಮುಗ್ಗಟ್ಟಿದ್ದರೂ ಹೋಂಡಾ ಆಕ್ಟಿವಾದಲ್ಲಿ ಹಳ್ಳಿ ಹಳ್ಳಿಗಳಿಗೆ ಹೋಗಿ ನರೇಗಾ ಕಾರ್ಮಿಕರನ್ನು ಸಂಘಟಿಸಿ ಸುವರ್ಣ ಸೌಧದ ಮುಂದೆ ಜಯಶ್ರೀ ಸಾವಿರಾರು ರೈತರನ್ನು ಮತ್ತು ಮಹಿಳೆಯರನ್ನು ಸೇರಿಸಿ ಹೋರಾಟ ಮಾಡಿದ್ದು, ಅವಿಸ್ಮರಣೀಯ ಹೋರಾಟವಾಗಿದೆ.

ಇನ್ನೂ ಹೆಚ್ಚು ಕಾಲ ಬದುಕಿ, ಇನ್ನೂ ಎತ್ತರಕ್ಕೆ ಏರಬೇಕಾಗಿದ್ದ ರೈತ ಚಳವಳಿಯ ಪ್ರತಿಭಾವಂತ ಹೋರಾಟಗಾರ್ತಿ ಕೇವಲ 40ನೇ ವಯಸ್ಸಿಗೆ ನಿಧನರಾಗಿರುವುದು ನೋವಿನ ಸಂಗತಿ. ಅವರ ಕಿರುವಯಸ್ಸಿನ ಮಗನಿಗೆ ಮತ್ತು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸೋಣ. ಜಯಶ್ರೀ ಗುರನ್ನವರ್‌ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಹಸಿರು ನಮನಗಳು.

-ಪಚ್ಚೆ ನಂಜುಂಡಸ್ವಾಮಿ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...