ಬೆಳಗಾವಿ | ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೊ ತೋರಿಸಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

Date:

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಅತ್ಯಾಚಾರದ ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

“ಅಭಿಷೇಕ ದೇವನೂರು, ಆದಿಲ್ ಶಾ ಬಂಧಿತ ಆರೋಪಿಗಳು. ಇನ್ನೊಬ್ಬ ಅರೋಪಿ ಕೌತುಬ್ ಬಾಬುಸಾಬ್‌ ಬಡಿಗೇರ ತಲೆಮರೆಸಿಕೊಂಡಿದ್ದಾನೆ. ಮೂವರ ಮೇಲೂ ಪೋಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಬುಧವಾರ ತಿಳಿಸಿದ್ದಾರೆ.

“ಇಬ್ಬರೂ ಯುವತಿಯರು ಜಿಲ್ಲೆಯ ಕಾಲೇಜೊಂದರಲ್ಲಿ ಪಿಯುಸಿ(17 ವರ್ಷದ ಇಬ್ಬರು ಯುವತಿಯರು) ಓದುತ್ತಿದ್ದಾರೆ. ಅಭಿಷೇಕ ದೇವನೂರು ಎಂಬಾತ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಒಬ್ಬ ಯುವತಿಯ ಪರಿಚಯ ಮಾಡಿಕೊಂಡಿದ್ದ. ಸಂದೇಶಗಳಿಗೆ ಪ್ರತಿಕ್ರಿಯೆ ನೀಡಿದ ಯುವತಿ ಆರೋಪಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಳು. ಜನವರಿ 3ರಂದು ಅಥಣಿ ತಾಲೂಕಿನ ಕೊಕಟನೂರು ಜಾತ್ರೆಯಲ್ಲಿ ಇಬ್ಬರೂ ಪರಸ್ಪರ ಭೇಟಿಯಾಗಿ
ಪರಿಚಯ ಮಾಡಿಕೊಂಡಿದ್ದರು. ಎರಡನೇ ಭೇಟಿಯಲ್ಲಿ ಯುವತಿಯನ್ನು ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಹೋಗಿಬರುವುದಾಗಿ ಅಭಿಷೇಕ ಆಹ್ವಾನಿಸಿದ್ದ. ಆಗ ಯುವತಿ ತನ್ನ ಸಹಪಾಠಿಯಾದ ಇನ್ನೊಬ್ಬ ಯುವತಿಯನ್ನೂ ಕರೆದಕೊಂಡು ಬಂದಿದ್ದಳು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿಷೇಕ ಕೂಡ ತನ್ನ ಇಬ್ಬರು ಸ್ನೇಹಿತರಾದ ಆದಿಲ್ ಶಾ ಮತ್ತು ಕೌತುಕ್‌ನನ್ನು ಕರೆದುಕೊಂಡು ಬಂದಿದ್ದ. ಕಾರೊಂದರಲ್ಲಿ ಎಲ್ಲರೂ ಪ್ರಯಾಣ ಬೆಳೆಸಿದ್ದರು.

“ಮೂವರು ಯುವಕರು ಯುವತಿಯರನ್ನು ಸವದತ್ತಿ ಹೊರವಲಯದ ಗುಡ್ಡಗಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದರು. ಗುಡ್ಡದಲ್ಲಿ ಅಭಿಷೇಕ ಹಾಗೂ ಆದಿಲ್ ಶಾ ಸೇರಿಕೊಂಡು ಒಬ್ಬ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ಕೌತುಬ್‌ ಎಂಬಾತ ಇನ್ನೊಬ್ಬ ಕಾರಿನಲ್ಲಿ ಇನ್ನೊಬ್ಬ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ” ಎಂದರು.

ಈ ಸುದ್ದಿ ಓದಿದ್ದೀರಾ? ಉದ್ಯೋಗ ಮಾಹಿತಿ | ವೈದ್ಯಕೀಯ ವಿಭಾಗದ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ

“ಅತ್ಯಾಚಾರ ಮಾಡಿದ ಸಂದರ್ಭದ ಪ್ರತಿ ಕ್ಷಣಗಳನ್ನೂ ಯುವಕರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ವಿಡಿಯೊಗಳನ್ನು ಇಟ್ಟುಕೊಂಡು ಪದೇಪದೆ ತಮ್ಮೊಂದಿಗೆ ಬರುವಂತೆ ಬೆದರಿಕೆ ಒಡ್ಡಲು ಶುರು ಮಾಡಿದ್ದರು. ʼಮುಂದಿನ ವಾರ ಎಲ್ಲರೂ ಸೇರಿ ಗೋವಾಗೆ ಹೋಗೋಣ, ಬರದೇ ಇದ್ದರೆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತೇವೆʼ ಎಂದು ಬ್ಲ್ಯಾಕ್‌ಮೇಲ್‌ ಮಾಡಿದ್ದು, ಇದರಿಂದ ಹೆದರಿದ ಒಬ್ಬ ಯುವತಿ ಜನವರಿ 13ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದರು. ಬಳಿಕ ಪ್ರಕರಣ ಗೊತ್ತಾಗಿದೆ” ಎಂದು ಎಸ್‌ಪಿ ತಿಳಿಸಿದರು.

“ಅತ್ಯಾಚಾರ ಹಾಗೂ ವಿಡಿಯೊ ಮಾಡಿಕೊಂಡ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುತ್ತೇವೆಂದು ಯುವತಿಯರನ್ನು ಹೆದರಿಸಿದ್ದರು. ಹೀಗಾಗಿ, ಯುವತಿ ತಡವಾಗಿ ದೂರು ನೀಡಿದ್ದಾರೆ” ಎಂದು ವಿವರಿಸಿದರು. ಇನ್ನೊಬ್ಬನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...