ಬೆಳಗಾವಿ | ಬೆಳ್ಳುಳ್ಳಿ ಬೆಳೆಗೆ ಉತ್ತಮ ಬೆಲೆ; ರೈತರ ಮುಖದಲ್ಲಿ ಮಂದಹಾಸ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ಬೈಲಹೊಂಗಲ, ಯರಗಟ್ಟಿ ರಾಮದುರ್ಗ ತಾಲೂಕಿನ ರೈತರು ಈ ವರ್ಷ ಬೆಳ್ಳುಳ್ಳಿ ಬೆಳೆ ಉತ್ತಮವಾಗಿದ್ದು, ಅದಕ್ಕೆ ತಕ್ಕಂತೆ ಉತ್ತಮ ಬೆಲೆಯೂ ಸಿಕ್ಕಿದೆ. 2023ರಲ್ಲಿ ₹14,000 ದಿಂದ ₹15,000 ಇದ್ದ ಬೆಲೆ ಪ್ರಸ್ತುತ ವರ್ಷ ₹26,000ಕ್ಕೆ ಏರಿಕೆ ಕಂಡಿದೆ.

ಬೈಲಹೊಂಗಲ, ಯರಗಟ್ಟಿ, ಸವದತ್ತಿ ಭಾಗದ ಬೆಳ್ಳುಳ್ಳಿ ಬೆಳೆಗಾರರು ತಾವು ಬೆಳೆದ ಬೆಳ್ಳುಳ್ಳಿಯನ್ನು ರಾಮದುರ್ಗ ಮಾರುಕಟ್ಟೆಗೆ ತಂದು ಮಾರಾಟ ಮಾಡುತ್ತಿದ್ದಾರೆ.

ಬೆಳ್ಳುಳ್ಳಿ ಬೆಳೆಗಾರರು

ಯರಗಟ್ಟಿ ತಾಲೂಕಿನ ಬೆಳ್ಳುಳ್ಳಿ ಬೆಳೆಗಾರ ಲಕ್ಕಪ್ಪ ಪೂಜೆರ ಈ ದಿನ.ಕಾಮ್ ಜೊತೆ ಮಾತನಾಡಿ, “ಬೆಳ್ಳುಳ್ಳಿ 3 ತಿಂಗಳ ಬೆಳೆಯಾಗಿದ್ದು, ಒಂದು ಎಕರೆಗೆ ಸುಮಾರು ₹80 ಸಾವಿರ ರೂಪಾಯಿ ಖರ್ಚಾಗುತ್ತದೆ. ಉತ್ತಮ ಇಳುವರಿ ಬಂದರೆ ಒಂದು ಎಕರೆಯಲ್ಲಿ 25 ಕ್ವಿಂಟಲ್ ಬೆಳ್ಳುಳ್ಳಿ ಬೆಳೆಯಬಹುದು. ಖರ್ಚು ತೆಗೆದು ₹5 ಲಕ್ಷ ರೂಪಾಯಿ ರೈತರಿಗೆ ಸಿಗುತ್ತದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸವದತ್ತಿ ತಾಲೂಕಿನ ವಿಠ್ಠಲ ಕುರಿ ಮಾತನಾಡಿ, “ಮೆದುವಾದ ಮಣ್ಣಿನಲ್ಲಿ ಬೆಳೆದರೆ ಉತ್ತಮ ಇಳುವರಿ ಬರುತ್ತದೆ ಹಿಂದಿನ ವರ್ಷ ₹16,000 ಬೆಲೆಯಿತ್ತು. ಈ ವರ್ಷ ₹24,000 ರಿಂದ ₹25,000ದಂತೆ ಬೆಳ್ಳುಳ್ಳಿಗೆ ಉತ್ತಮ ಬೆಲೆ ಸಿಕ್ಕಿರುವುದು ರೈತರಿಗೆ ಖುಷಿ ತಂದಿದೆ” ಎಂದು ಸಂತಸ ವ್ಯಕ್ತಪಡಿಸಿದರು.

“ರಾಜ್ಯದ ಅನೇಕ ಭಾಗಗಳಲ್ಲಿ ವರ್ಷಕ್ಕೆ ಎರಡು ಬಾರಿ ಬೆಳ್ಳುಳ್ಳಿ ಬೆಳೆ ಬೆಳೆಯಲಾಗುತ್ತದೆ. ಈ ಸಸ್ಯಗಳ ಬೆಳವಣಿಗೆಯ ವಿವಿಧ ಹಂತಗಳಲ್ಲಿ ಹಲವಾರು ರೋಗಗಳಿಗೆ ಒಳಗಾಗುತ್ತವೆ. ಬೆಳ್ಳುಳ್ಳಿ ಬೆಳೆಗೆ ಸೂಕ್ಷ್ಮ ಶಿಲೀಂಧ್ರ, ತುಕ್ಕು, ನೇರಳೆ ಮಚ್ಚೆ, ಸ್ಟೆಂಫಿಲಿಯಮ್ ಬ್ಲೈಟ್, ತಳದ ಕೊಳೆ ರೋಗ ಗಣನೀಯವಾಗಿ ಕಾರಣವಾಗುತ್ತದೆ. ಇದರಿಂದ ಬೆಳೆ ಇಳುವರಿಯಲ್ಲಿ ಕೊರತೆ ಹೊರತಾಗಿ, ಕೊಯ್ಲು, ಸಂಸ್ಕರಣೆ ಮತ್ತು ಮಾರುಕಟ್ಟೆ ಹಂತಗಳಲ್ಲಿ ರೋಗವು ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ತಿರುಪತಿ ಲಡ್ಡು ವಿವಾದ; ನಂದಿನಿ ತುಪ್ಪಕ್ಕೆ ಬೇಡಿಕೆ

“ಬೆಳ್ಳುಳ್ಳಿಗೆ ವಿಶೇಷವಾಗಿ ಹೊಲಗಳು ಮತ್ತು ಶೇಖರಣೆ ನಿರ್ವಹಣೆ, ಕೃಷಿ ಪದ್ಧತಿ ಮತ್ತು ಕೆಟ್ಟ ಶೇಖರಣೆಯಿಂದಾಗಿ ಶಿಲೀಂಧ್ರ ರೋಗಕಾರಕಗಳ ಸಂಖ್ಯೆಯಿಂದ ತೀವ್ರವಾಗಿ ಸೋಂಕಿಗೆ ಒಳಗಾಗುತ್ತವೆ. ಇದರಿಂದ ಬೆಳ್ಳುಳ್ಳಿ ಬೆಳೆಯು ನಾಶವಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ರೈತರು ಎಚ್ಚರಿಕೆಯಿಂದ ನಿರ್ವಹಣೆ ಮಾಡಬೇಕು” ಎಂದು ಬೆಳ್ಳುಳ್ಳಿ ಬೆಳೆಗಾರರು ಮಾಹಿತಿ ನೀಡಿದರು.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...