ಬೆಳಗಾವಿ | ಕಳಸಾ-ಬಂಡೂರಿ ನಾಲಾ ಯೋಜನೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

Date:

ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನವು ಪರಿಸರಕ್ಕೆ ಮಾರಕವಾಗಲಿದೆ ಎಂದು ಪರಿಸರವಾದಿಗಳು ತಿಳಿಸಿದ್ದು, ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪರ್ಯಾವರಣಿ, ಪರಿಸರಕ್ಕಾಗಿ ನಾವು, ಪರಿವರ್ತನಾ, ಗ್ರಾಕೂಸ್ ಹಾಗೂ ಜಾಗೃತ ಮಹಿಳಾ ಒಕ್ಕೂಟದ ಸಂಘಟನೆಗಳ ಪದಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿದ್ದು, ಕಳಸಾ-ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಪರಿಸರ ಹೋರಾಟಗಾರರಾದ ನಿತಿನ್ ಧೋಂಡ ಮಾತನಾಡಿ, “ನ್ಯಾಯಾಧೀಕರಣದ ತೀರ್ಪಿನ ಪ್ರಕಾರ, ಕುಡಿಯುವ ನೀರಿನ ಅಗತ್ಯತೆ ಪೂರೈಸಲು ಮಲಪ್ರಭಾ ನದಿಗೆ ಸುಮಾರು 3.94 ಟಿಎಂಸಿ ಅಡಿ ನೀರನ್ನು ತಿರುಗಿಸಲಾಗುತ್ತದೆ. ಆದರೆ, ಈ ಯೋಜನೆಯಿಂದ ಅಣೆಕಟ್ಟು ಮತ್ತು ಕಾಲುವೆಗಳ ನಿರ್ಮಾಣದಿಂದ ಅರಣ್ಯಕ್ಕೆ ಹಾನಿಯಾಗಲಿದೆ. 2 ಲಕ್ಷಕ್ಕೂ ಹೆಚ್ಚು ಮರಗಳು ಹುಲಿ ಕಾರಿಡಾರ್ ಸೇರಿದಂತೆ ಪಶ್ಚಿಮ ಘಟ್ಟದ ಅಭಯಾರಣ್ಯಗಳಿಗೆ ತೊಂದರೆಯಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಧೀಕರಣದ ವಿಚಾರಣೆ ವೇಳೆ, ನಮ್ಮ ಅಭಿಪ್ರಾಯ ತಿಳಿಸಲು ಪ್ರಯತ್ನಿಸಿದರೂ ಅವರು ಕೇಳಲಿಲ್ಲ. ಕಳಸಾ ಬಂಡೂರಿ ಯೋಜನೆ ಅನುಷ್ಠಾನಗೊಂಡರೆ ಉತ್ತರ ಕರ್ನಾಟಕಕ್ಕೆ ಮಳೆಯ ಮೂಲವಾಗಿರುವ ಪಶ್ಚಿಮಘಟ್ಟ ಪ್ರದೇಶ ವಿನಾಶವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ದಿಲೀಪ್ ಕಾಮತ್ ಮಾತನಾಡಿ, “1980ರಲ್ಲಿ ದೇಶದಲ್ಲಿ ಪರಿಸರ ಕುರಿತ ಚರ್ಚೆ ಪ್ರಾರಂಭವಾಗಿದೆ. ಪಶ್ಚಿಮ ಘಟ್ಟಗಳ ಉಳಿವಿಗಾಗಿ 1989ರಲ್ಲಿ 3000 ಕೀ .ಮಿ ಪಾದ ಯಾತ್ರೆ ಮಾಡಿದ್ದೆವು. ಆ ಸಂದರ್ಭದಲ್ಲಿ ಶಿವರಾಮ ಕಾರಂತರು ಸಹ ಆಶಿರ್ವಾದ ಮಾಡಿದ್ದರು. ಎಸ್ ಆರ್ ಹಿರೇಮಠ್ ಮತ್ತು ನಾವು ಒಂದು ಬುಲೆಟಿನ್ ಮಾಡಿದ್ದೆವು. ಕೇರಳ, ಕರ್ನಾಟಕ, ಗುಜರಾತ್, ಗೋವಾ, ಮಹಾರಾಷ್ಟ್ರ ಐದು ರಾಜ್ಯಗಳ ಪಶ್ಚಿಮ ಘಟ್ಟಗಳ ಉಳಿವಿಗಾಗಿ ಮಾಧವ್ ಗಾಡ್ಗೀಳ್ ಕೈಲಾಸ್ ಅವರು ಭಾಗವಹಿಸಿದ್ದರು. 100 ಜನ ಕನ್ಯಾಕುಮಾರಿಯಿಂದ ಗೋವಾದವರೆಗೆ ಪಾದಯಾತ್ರೆ ಪೂರ್ಣಗೊಳಿಸಿದ್ದರು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ವಿಜಯನಗರ | ಮಳೆಯ ಆಶ್ರಯಕ್ಕೆ ಮರದಡಿಯಲ್ಲಿ ನಿಂತಿದ್ದ ವೇಳೆ ಬಡಿದ ಸಿಡಿಲು: ಇಬ್ಬರ ಸಾವು

ಪಶ್ಚಿಮ ಘಟ ಉಳಿದರೆ ನಾವು ಉಳಿಯುತ್ತೇವೆ. ನಿಜವಾದ ಅರ್ಥದಲ್ಲಿ ನಾನು ಪರಿಸರವಾದಿ ಅಲ್ಲ. ಪರಿಸರವಾದಿಗಳ ಜೊತೆಗೆ ನಿಕಟ ಸಂಬಂಧವಿದೆ. ನಾನು ಜನವಾದಿ ದುಡಿಯುವ ವರ್ಗಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಾ ಬಂದಿರುವೆ. ಪಶ್ಚಿಮಘಟ್ಟಗಳು ಉಳಿಸಬೇಕು, ದಕ್ಷಿಣ ಭಾರತ ಉಳಿಯಬೇಕು ಅಂದರೆ ಪಶ್ಚಿಮ ಘಟ್ಟ ಉಳಿಯಬೇಕು ಎಂದು ದಿಲೀಪ್ ಕಾಮತ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾರದಾ ಗೋಪಾಲ್, ನೈಲಾ ಕೊಹೆಲೊ, ಶಿವಾಜಿ ಕಾಗಣಿಕರ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...