ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲಿನ ಸುದೀರ್ಘ ವರ್ಷಗಳ ಹಿಡಿತ ಕಳೆದುಕೊಂಡ ಕತ್ತಿ ಕುಟುಂಬ

Date:

ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲೆ 1986ರಿಂದ ಸುದೀರ್ಘ ಅವಧಿಯವರೆಗೆ ಬಿಗಿ ಹಿಡಿತ ಹೊಂದಿದ್ದ ಕತ್ತಿ ಕುಟುಂಬ, ರಮೇಶ್ ಕತ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕತ್ತಿ ಕುಟುಂಬವು ತಮ್ಮ ಹಿಡಿತವನ್ನು ಕಳೆದುಕೊಂಡಿದೆ.

ರಮೇಶ್ ಕತ್ತಿ 1988 ರಿಂದ ಡಿಸಿಸಿ ಬ್ಯಾಂಕಿನಲ್ಲಿ 10 ವರ್ಷಗಳ ಕಾಲ ನಿರ್ದೇಶಕರಾಗಿ, ಐದು ವರ್ಷ ಉಪಾಧ್ಯಕ್ಷರಾಗಿ 27 ವರ್ಷಗಳ ಕಾಲ ಅಂದರೆ ಇಲ್ಲಿಯವರೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಕ್ಟೋಬರ್ 3ರಂದು ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಿಂದ ರಾಜೀನಾಮೆ ನೀಡುವಂತಾಯಿತು.

ರಾಜ್ಯ ರಾಜಕಾರಣದಲ್ಲಿ ತನ್ನದೇ ಚಾಪು ಮೂಡಿಸಿರುವ ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸದ್ಯ ಬೆಳಗಾವಿ ರಾಜಕಾರಣ ಮೇಲೂ ಬಿಗಿ ಹಿಡಿತ ಹೊಂದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ನವೆಂಬರ್ 13ರಂದು ನಡೆದ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಅತೀ ಹೆಚ್ಚು ನಿರ್ದೇಶಕರ ಬಲ ಇದ್ದರೂ ಕೂಡ, ತಮ್ಮ ಬೆಂಬಲಿಗನನ್ನು ಅಧ್ಯಕ್ಷನನ್ನಾಗಿ ನೇಮಿಸುವಲ್ಲಿ ಸಚಿವ ಸತೀಶ್ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಬೆಳಗಾವಿ ರಾಜಕಾರಣದಲ್ಲಿ ತಾವೇ ‘ಕಿಂಗ್ ಮೇಕರ್’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 22 5

ರಮೇಶ್ ಕತ್ತಿ ರಾಜೀನಾಮೆಗೆ ಕಾರಣವಾಯಿತೇ ಲೋಕಸಭಾ ಚುನಾವಣೆ?

ರಾಜೀನಾಮೆ ನಂತರ ರಮೇಶ್ ಕತ್ತಿ ಡಿಸಿಸಿ ಬ್ಯಾಂಕ್ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಕೆಲವರು ಹೊಸ ಸದಸ್ಯತ್ವ ಶಿಫಾರಸು ನೀಡಿದರೆ ಇನ್ನೂ ಕೆಲವರು ಬೇಡ ಅಂತಿದ್ದರು. ಇದರಿಂದ ನೋವುಂಡ ಅವರು, ರಾಜೀನಾಮೆ ನೀಡಿದ್ದೆನೆ ಎಂದು ಹೇಳಿದರು. ಆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆಯವರ ಗೆಲುವಿಗೆ ಸಹಕರಿಸಲಿಲ್ಲ. ಆ ಕಾರಣಕ್ಕೆ ಅಣ್ಣಾ ಸಾಹೇಬ್ ಜೊಲ್ಲೆ ಬಣದ ಸದಸ್ಯರು ತಕರಾರು ಮಾಡಿದರು. ಈ ಕಾರಣಕ್ಕೆ ರಮೇಸ್ ಕತ್ತಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಯಿತು ಎಂದು ಜಿಲ್ಲೆಯ ಜನ ಮಾತನಾಡಿಕೊಳ್ಳುತ್ತಿದ್ದಾರೆ.

WhatsApp Image 2024 11 14 at 1.45.27 PM

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಯಾಕಿಷ್ಟು ಮಹತ್ವ?

ಬೆಳಗಾವಿ ಡಿಸಿಸಿ ಬ್ಯಾಂಕ್ ಒಟ್ಟು5.791ಕೋಟಿ ಠೇವಣಿ, 5200 ಕೋಟಿ ರೂ ಸಾಲ ನೀಡಿದ್ಧು,1155 ಪಿಕೆಪಿಎಸ್‌ಗಳನ್ನು ಹೊಂದಿದ್ದು 40ಲಕ್ಷಕ್ಕೂ ಹೆಚ್ಚು ರೈತರ ಆರ್ಥಿಕತೆಯ ಮೇಲೆ ಬ್ಯಾಂಕ್ ಪರಿಣಾಮ ಬಿರುತ್ತದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹುದ್ದೆ ಜಿಲ್ಲೆಯಲ್ಲಿ ಮಂತ್ರಿ ಸ್ಥಾನಕ್ಕೆ ಸರಿಸಮವಾಗಿದೆ ಎಂಬುದು ಜಿಲ್ಲೆಯಲ್ಲಿ ಜನಜನಿತವಾದ ಸಂಗತಿ. ಮಂತ್ರಿ ಸ್ಥಾನಕ್ಕೆ ಸಮನಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜ್ಯದಲ್ಲಿಯೇ ಅತಿದೊಡ್ಡ ಸಹಕಾರ ಬ್ಯಾಂಕ್ ಎಂಬ ಖ್ಯಾತಿ ಪಡೆದಿದೆ.

ಇದನ್ನು ಓದಿದ್ದೀರಾ? ಚಿತ್ರದುರ್ಗ | ನರೇಗಾ ಕೆಲಸಕ್ಕೆ ಹಣದ ಬೇಡಿಕೆ: ತಾಂತ್ರಿಕ ಸಹಾಯಕ ಕೆಲಸದಿಂದ ವಜಾ

ಉಮೇಶ್ ಕತ್ತಿ ನಿಧನದ ನಂತರ ಏಕಾಂಗಿಯಾದ ರಮೇಶ್ ಕತ್ತಿ!

ಉಮೇಶ್ ಕತ್ತಿ ಹುಕ್ಕೇರಿ ಕ್ಷೇತ್ರದಿಂದ ಬೇರೆ ಬೇರೆ ಪಕ್ಷಗಳಿಂದ 8 ಸಲ ಶಾಸಕರಾಗಿ, ವಿವಿಧ ಇಲಾಖೆಗಳ ಸಚಿವರಾಗಿ
ಕಾರ್ಯನಿರ್ವಹಿಸಿದ್ದರು. 2009ರಿಂದ 2014ರ ಅವದಿಯಲ್ಲಿ ರಮೇಶ್ ಕತ್ತಿ ಚಿಕ್ಕೋಡಿ ಲೋಕಸಭಾ ಸಂಸದರಾಗಿದ್ದರು. ಆದರೆ ಸಹೋದರ ಉಮೇಶ್ ಕತ್ತಿ ನಿಧನರಾದ ನಂತರ ರಮೇಶ ಕತ್ತಿಯವರಿಗೆ ಚಿಕ್ಕೋಡಿ ಲೋಕಸಭಾ ಟಿಕೆಟ್ ಸಿಗದೆ ಹೋಯಿತು. ಈಗ ತಮ್ಮ ಕೈಯ್ಯಲ್ಲಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನವು ಕೂಡ ಕೈ ತಪ್ಪಿದೆ.

ಹುಬ್ಬಳ್ಳಿ | ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಇರುತ್ತದೆ: ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬಿಜೆಪಿ ತೊರೆಯುವ ಸುಳಿವು ಕೊಟ್ಟಿದ್ದ ರಮೇಶ್ ಕತ್ತಿ

ಕಳೆದ ಅಕ್ಟೋಬರ್ 5ರಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ರಮೇಶ ಕತ್ತಿಯವರು, “ಆಡು ಮುಟ್ಟದ ಸೊಪ್ಪಿಲ್ಲ ಕತ್ತಿ ಸಹೋದರರು ನೋಡದ ಪಕ್ಷವಿಲ್ಲ. ನಾವು ಎಲ್ಲ ಪಕ್ಷಗಳ ಜೊತೆ ಒಡನಾಟ ಹೊಂದಿದ್ದೇವೆ. ಸಿದ್ದರಾಮಯ್ಯರದ್ದು ಜನತಾ ಪರಿವಾರ, ನಮ್ಮದು ಕೂಡ ಜನತಾ ಪರಿವಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್​ನಲ್ಲಿ ಇರಬಹುದು. ವೈಯಕ್ತಿಕವಾಗಿ ಅವರು ದಕ್ಷ, ಆರ್ಥಿಕ ನಿರ್ವಹಣೆ ಮಾಡುವ ನಾಯಕ ಎಂದು ಹಾಡಿ ಹೊಗಳಿದ್ದರಲ್ಲದೆ ಹಿರಿಯರ ಜೊತೆ ಚರ್ಚಿಸಿ ಮುಂದಿನ ರಾಜಕೀಯ ತೀರ್ಮಾನ ತೆಗೆದುಕೊಳ್ಳುತ್ತೇನೆ” ಎಂದು ಹೇಳಿದ್ದರು. ಆ ಮೂಲಕ ಬಿಜೆಪಿ ತೊರೆಯುವ ಧಾಟಿಯಲ್ಲಿ ಮಾತನಾಡಿದ್ದರು.

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ್ದು, ಸುದೀರ್ಘ ವರ್ಷಗಳಿಂದ ಉಳಿಸಿಕೊಂಡು ಬಂದಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಕೂಡ ಈಗ ರಮೇಶ್ ಕತ್ತಿ ಕಳೆದುಕೊಂಡಿದ್ದಾರೆ. ಈಗ ರಾಜಕಾರಣದಲ್ಲಿ ರಮೇಶ ಕತ್ತಿಯವರ ಮುಂದಿನ ನಡೆ ಏನು ಎಂಬುದು ಜಿಲ್ಲೆಯ ಜನತೆಯ ಕುತೂಹಲಕ್ಕೆ ಕಾರಣವಾಗಿದೆ.

image 22 4

ಅಪ್ಪಾ ಸಾಹೇಬ್ ಕುಲಗೋಡೆ ಅಧ್ಯಕ್ಷರಾಗಿ ಆಯ್ಕೆ

ಅತೀ ಹೆಚ್ಚು ಬಿಜೆಪಿ ಬೆಂಬಲಿತ ನಿರ್ದೇಶಕರಿದ್ದರೂ ಕಾಂಗ್ರೆಸ್ ಬೆಂಬಲಿತ ನಿರ್ದೇಶಕನಿಗೆ ಮಣೆ ಹಾಕಲಾಗಿದೆ. ಸತೀಶ್ ಜಾರಕಿಹೊಳಿ ಆಪ್ತ ಅಪ್ಪಾ ಸಾಹೇಬ್ ಕುಲಗೋಡೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೂವರು ಜಾರಕಿಹೊಳಿ ಸಹೋದರರು ಮೂರು ಆಪ್ತರ ಹೆಸರನ್ನು ಸೂಚಿಸಿದ್ದರು. ಅಣ್ಣಾಸಾಹೇಬ್ ಜೊಲ್ಲೆ ಪರ ರಮೇಶ್ ಜಾರಕಿಹೊಳಿ‌, ಸುಭಾಷ್ ಡವಳೇಶ್ವರ ಪರ ಬಾಲಚಂದ್ರ ಜಾರಕಿಹೊಳಿ‌ ಹಾಗೂ ಅಪ್ಪಾಸಾಹೇಬ್ ಕುಲಗೋಡೆ ಪರ ಸತೀಶ್ ಜಾರಕಿಹೊಳಿ ಬ್ಯಾಟ್ ಬೀಸಿದ್ದರು‌. ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ ಅವರ ಆಪ್ತ ಅಪ್ಪಾ ಸಾಹೇಬ್ ಕುಲಗೋಡೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸದ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಅವಧಿ ಪೂರ್ಣಗೊಳ್ಳಲು ಒಂದೇ ವರ್ಷ ಬಾಕಿ ಇದೆ. ಹೀಗಿದ್ದರೂ ಆ ಸ್ಥಾನ ಪಡೆದುಕೊಳ್ಳಲು ಇದನ್ನು ಜಾರಕಿಹೊಳಿ ಕುಟುಂಬ ಪ್ರತಿಷ್ಠೆಯಾಗಿ ತೆಗೆದುಕೊಂಡಿತ್ತು.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...