ಬರ ಪೀಡಿತ ಪ್ರದೇಶ ಪಟ್ಟಿಯಲ್ಲಿಲ್ಲ ಬೆಳಗಾವಿ – ಖಾನಾಪುರ; ರೈತರ ಅಸಮಾಧಾನ

Date:

ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಬೆಳಗಾವಿ ಜಿಲ್ಲೆಯ ಎರಡು ತಾಲೂಕುಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಸರ್ಕಾರದ ನಿರ್ಧಾರದಿಂದ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ರೈತರು ನಿರಾಶೆ ವ್ಯಕ್ತಪಡಿಸಿದ್ದಾರೆ. ಬರ ಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ರಾಜ್ಯದಲ್ಲಿ ಬರ ಘೋಷಣೆಯಾದ ನಂತರ ಬೆಳೆ ಸಮೀಕ್ಷೆಯಲ್ಲಿ ತಾರತಮ್ಯವಾಗಿದೆ. ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಮಳೆಯಾಶ್ರಿತ ಬೆಳೆಗಳ ಬಿತ್ತನೆ ಕಾರ್ಯ ವಿಳಂಬವಾಗಿದೆ. ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ. ಇಳುವರಿಯೂ ಕಡಿಮೆಯಾಲಿದೆ. ಆದರೂ, ಬರ ಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸದೇ ಇರುವುದು ರೈತ ವಿರೋಧಿ ನಡೆಯಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಭತ್ತ ಬೆಳೆಯುವ ಪ್ರದೇಶಗಳಿಗೆ ನಿರಂತರ ಮಳೆಯ ಅಗತ್ಯವಿದೆ. ಭತ್ತದ ಬೆಳೆ ನಾಟಿ ಹಂತದಿಂದ ಕೊಯ್ಲು ಮಾಡುವವರೆಗೂ ನೀರು ಬೇಕು. ಆದರೆ, ಈ ವರ್ಷ ಸಮರ್ಪಕವಾಗಿ ಮಳೆಯಾಗಿಲ್ಲ. ಅಗತ್ಯವಿರುವ ನೀರಿನ ಪ್ರಮಾಣ ಮತ್ತು ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸದೆ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಬೆಳಗಾವಿ ತಾಲೂಕಿನ ರೈತರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ ಮತ್ತು ಖಾನಾಪುರ ತಾಲೂಕಿನಲ್ಲಿ ಮಳೆ ಕೊರತೆಯಿಂದ ಭತ್ತದ ಬೆಳೆ ನೆಲಕಚ್ಚಿದೆ. ಆದರೆ, ಸರ್ಕಾರ ಈ ತಾಲೂಕುಗಳನ್ನು ಬರಪೀಡಿತ ಎಂದು ಪರಿಗಣಿಸಿಲ್ಲ. ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತೇವೆ” ಎಂದು ಕಂಗ್ರಾಳಿಯ ರೈತ ಶಿವಾಜಿ ಹೇಳಿದ್ದಾರೆ.

“ಜಿಲ್ಲೆಯ 13 ತಾಲೂಕುಗಳಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಆಯಾ ತಾಲೂಕುಗಳಲ್ಲಿ ಎರಡು ಪ್ರಮುಖ ಬೆಳೆಗಳ ಸ್ಥಿತಿಗತಿ ಕುರಿತು ಐದು ವಿವಿಧ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದ್ದೇವೆ. ಬಹುತೇಕ ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ. ಸವದತ್ತಿ, ಬೈಲಹೊಂಗಲ, ಕಿತ್ತೂರು, ರಾಮದುರ್ಗ, ಅಥಣಿ, ಮೂಡಲಗಿ, ಗೋಕಾಕ, ಯರಗಟ್ಟಿ, ಚಿಕ್ಕೋಡಿ, ಕಾಗವಾಡ, ನಿಪ್ಪಾಣಿ, ರಾಯಬಾಗ ತಾಲೂಕುಗಳಲ್ಲಿ ಸೋಯಾಬಿನ್, ಕಾಳು ಸೇರಿದಂತೆ ಪ್ರಮುಖ ಬೆಳೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬೆಳೆದಿಲ್ಲ. ಅಂತರ್ಜಲ ಮಟ್ಟ ಮತ್ತು ತೇವಾಂಶದ ಕೊರತೆಯನ್ನು ಸಹ ಪರಿಗಣಿಸಲಾಗಿದೆ” ಎಂದು ಕೃಷಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...