ಬೆಳಗಾವಿ | ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ: ಕ್ರಮ ಕೈಗೊಳ್ಳದಿದ್ದರೆ ಅಹೋರಾತ್ರಿ ಧರಣಿಯ ಎಚ್ಚರಿಕೆ

Date:

ಬೆಳಗಾವಿ ಜಿಲ್ಲೆಯ ಎಂ ಕೆ ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ವತಿಯಿಂದ ಕಿತ್ತೂರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

2021ರ ಜು.26 ರಂದು ಬೆಳಗಾವಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಿತ್ತೂರು ತಹಶೀಲ್ದಾ‌ರ್ ಸೋಮಲಿಂಗಪ್ಪ ಹಾಲಗಿ ಅವರು ಕಾರ್ಖಾನೆಯಿಂದ ಸಕ್ಕರೆ ಸಾಗಿಸುತ್ತಿದ್ದ 4 ಲಾರಿ ವಶಕ್ಕೆ ಪಡೆದು ಪರಿಶೀಲಿಸಿದಾಗ ಇನ್‌ವೈಸ್‌ನಲ್ಲಿ ನಮೂದಿಸಿದ್ದಕ್ಕಿಂತ ಹೆಚ್ಚು ಸಕ್ಕರೆ ಲಾರಿಗಳಲ್ಲಿ ಸಾಗಿಸಲಾಗುತ್ತಿತ್ತು ಎಂದು ವರದಿ ಸಲ್ಲಿಸಿದ್ದರು.

ಇನ್ನೂ ಹೆಚ್ಚುವರಿ ಸಕ್ಕರೆ ದಾಸ್ತಾನು ಕಾರ್ಖಾನೆ ಗೋದಾಮಿನಲ್ಲಿದೆ ಎಂದು ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ, ತಪ್ಪಿತಸ್ಥರ ವಿರುದ್ಧ ಎಫ್‌ಐಆ‌ರ್ ದಾಖಲು ಮಾಡಿಲ್ಲ. ಇದನ್ನು ಖಂಡಿಸಿ ಹಾಗೂ ಕಾರ್ಖಾನೆಯಲ್ಲಿ ನಡೆದ ಅನೇಕ ಅವ್ಯವಹಾರಗಳ ಕುರಿತು ತನಿಖೆ ಮಾಡುವಂತೆ ಒತ್ತಾಯಿಸಿ ಅ. 18 ರಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾ ಸಂಘ (ಒಕ್ಕೂಟ)ದ ಪದಾಧಿಕಾರಿಗಳು ಕಿತ್ತೂರು ತಹಶೀಲ್ದಾರ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘಟನೆಯ ಮುಖಂಡರಾದ ಬೀರಪ್ಪ ದೇಶನೂರ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನೇಕ ರೈತ ಸಂಘಟನೆಗಳು, ಷೇರುದಾರರು ಹಾಗೂ ಈ ಭಾಗದ ರೈತರು ಹೋರಾಟ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೂ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಚನ್ನಗಿರಿ | ದೃಢೀಕರಣ ಪತ್ರ ನೀಡಲು ರೈತನಿಂದ ಲಂಚ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಉಪತಹಶೀಲ್ದಾರ್

ಈ‌ ಸಂದರ್ಭದಲ್ಲಿ ವೇಳೆ ರೈತ ಸಂಘಟನೆಯ ಬಸವರಾಜ ಮೋಕಾಶಿ, ರುದ್ರಪ್ಪ ಸಂಜೀವಕುಮಾರ ತಿಳಗರ, ಶಿವಾನಂದ ಜ್ಯೋತಿ, ಬಸನಗೌಡ ಪಾಟೀಲ, ಈರಣ್ಣ ಅಂಗಡಿ, ಮಹಾಂತೇಶ ಗೌರಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...