ಬೆಳಗಾವಿ | ಸರ್ಕಾರಿ ಶಾಲಾ ಮಕ್ಕಳಿಂದಲೇ ಅರ್ಥಪೂರ್ಣ ಮಕ್ಕಳ ದಿನಾಚರಣೆ

Date:

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ಸಾಲಾಪೂರ ಗ್ರಾಮದ ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆ ಆಚರಿಸಿದರು.

ಮಕ್ಕಳ ದಿನಾಚರಣೆಯಲ್ಲಿ ಶಾಲೆಯ ಪ್ರಧಾನ ಮಂತ್ರಿಗಳು ಉಪ ಪ್ರಧಾನ ಮಂತ್ರಿಗಳು ಮತ್ತು ಶಾಲಾ ಸಂಸತ್ತಿನ ಮಂತ್ರಿಗಳು ವೇದಿಕೆಯ ಎಲ್ಲ ಕಾರ್ಯಕ್ರಮಗಳನ್ನು ನಡೆಸಿಕೊಟ್ಟದ್ದು ವಿಶೇಷವಾಗಿತ್ತು ಹಾಗೂ ರಾಜ್ಯದ ಬೇರೆ ಬೇರೆ ಭಾಗದ ಕೃಷಿ ಜೀವನ ಶೈಲಿ ಬಿಂಬಿಸುವ ನೃತ್ಯಗಳನ್ನು ಮಾಡಿ ರಾಜ್ಯದ ಪ್ರಾದೇಶಿಕ ವೈವಿಧ್ಯತೆಯ ಪರಿಚಯ ಮಾಡಿಕೊಟ್ಟರು.

ಮಕ್ಕಳ ದಿನಾಚಾರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ವಿಧ್ಯಾರ್ಥಿನಿ ಮಹಾನಂದಾ ಜೋಗೆಲ್ಲಪ್ಪನ್ನವರ ಮಾತನಾಡಿ, ನೆಹರು ಅವರು ಮಕ್ಕಳ ಜೀವನದಲ್ಲಿ ಶಿಕ್ಷಣದ ಮಹತ್ವ ಪರಿಚಯಿಸಿದ ಶ್ರೇಷ್ಠ ಪ್ರಧಾನಿ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿನಿ ನತಾಷಾ ನದಾಫ ಮಾತನಾಡಿ, ಉತ್ತಮ ನಾಯಕರಾಗಿದ್ದವರು ಚಾಚಾ ಜವಾಹರಲಾಲ್ ನೆಹರು. ಮಕ್ಕಳ ಮೇಲೆ ಬಹಳ ಪ್ರೀತಿ ಹೊಂದಿದ್ದರು. ಅವರ ಜನ್ಮದಿನವನ್ನು ಮಕ್ಕಳ ದಿನಚಾರಣೆಯನ್ನಾಗಿ ಆಚರಿಸುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.

ವಿದ್ಯಾರ್ಥಿನಿ ರೂಪಾ ಬಂಡಿವಡ್ಡರ ಮಾತನಾಡಿ, ನೆಹರು ಅವರು ನಮ್ಮ ದೇಶದ ಪ್ರಧಾನಿಗಳು. ಅವರ ಜನ್ಮದಿನ ಆಚರಿಸುತ್ತಿರುವುದು ಸಂತೋಷವಾಗಿದೆ. ನೆಹರು ಅವರು ದೇಶಕ್ಕಾಗಿ ಅಪಾರ ಕೂಡುಗೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

WhatsApp Image 2024 11 23 at 6.17.38 PM

ಶಾಲಾ ಸಂಸತ್ತಿನ ಉಪ ಪ್ರಧಾನಿ ಶ್ರೇಯಾ ರಾಜನಾಳ ಮಾತನಾಡಿ, ಮಹಾನ್ ಚೇತನ ಜವಾಹರಲಾಲ್ ನೆಹರು ಶ್ರೀಮಂತರಾಗಿದ್ದರು ಸಹ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. 1930ರಲ್ಲಿ ಪೂರ್ಣ ಸ್ವರಾಜ್ಯ ಹಾಗೂ ರಾವಿ ನದಿಯ ದಂಡೆಯ ಮೇಲೆ ರಾಷ್ಟ್ರ ದ್ವಜವನ್ನು ಹಾರಿಸಿ ಸ್ವಾತಂತ್ರ್ಯದ ದಿಕ್ಕನ್ನು ಬದಲಾಯಿಸಿದರು ಎಂದು ವಿವರಿಸಿದರು.

ವಿದ್ಯಾರ್ಥಿನಿ ಪ್ರಿಯಾ ಪೂಜೇರ ಮಾತನಾಡಿ, ಜವಾಹಾರಲಾಲ್ ನೆಹರು ಅವರು ಜೈಲುವಾಸ ಅನುಭವಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ನಂತರ ಪ್ರಧಾನಿಗಳಾಗಿ ಭಾರತ ಭವಿಷ್ಯದ ದೃಷ್ಠಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದರು. ಪಂಚವಾರ್ಷಿಕ ಯೋಜನೆ,ಅಲಿಪ್ತ ನೀತಿ ಹಾಗೂ ವಿದೇಶಾಂಗ ನೀತಿಗಳನ್ನು ಜಾರಿಗೊಳಿಸಿದರು. ಮಕ್ಕಳಿಗಾಗಿ ಶೌರ್ಯ ಪ್ರಶಸ್ತಿ ಆರಂಭಿಸಿದ ಶ್ರೇಯಸ್ಸು ಜವಾಹರಲಾಲ್ ನೆಹರು ಅವರಿಗೆ ಸಲ್ಲುತ್ತದೆ‌ ಎಂದು ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.

ಶಾಲೆಯ ಪ್ರಧಾನ ಗುರುಗಳಾದ ಎ.ಎಸ್ ಗಾಣಗಿ ಶಿಕ್ಷಕರು ಶಾಲೆಯ ವಾರ್ಷಿಕ ವರದಿಯನ್ನು ಓದಿದರು. ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೇ ಆಚರಿಸಿದ ಮಕ್ಕಳ ದಿನಾಚರಣೆ ಪೋಷಕರು ಮತ್ತು ಗ್ರಾಮಸ್ಥರ ಮೆಚ್ಚುಗೆಗೆ ಕಾರಣವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...