ಬೆಳಗಾವಿ | ನಿರ್ಗತಿಕ ಅಜ್ಜಿಯ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ನೆರವು

Date:

ಪ್ರವಾಸದ ಮಾರ್ಗ ಮಧ್ಯೆ ನಿರ್ಗತಿಕ ಅಜ್ಜಿಯ ಕುಟುಂಬವನ್ನು ಕಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಹಾಯ ಮಾಡಿದ್ದು, ಸರ್ಕಾರಿ ಯೋಜನೆಗಳನ್ನು ದೊರಕಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ವಿಜಯಪುರಕ್ಕೆ ಪ್ರವಾಸ ಕೈಗೊಂಡಿದ್ದರು. ಬಳಿಕ ಬೆಳಗಾವಿಗೆ ವಾಪಸ್ ಬರುವಾಗ ವಿಜಯಪುರ-ಬಾಗಲಕೋಟೆಯ ಹೆದ್ದಾರಿಯ ಪಕ್ಕದ ಹನಗನಹಳ್ಳಿಯ ರಸ್ತೆ ಪಕ್ಕದಲ್ಲಿ ಊಟಕ್ಕೆಂದು ವಾಹನ ನಿಲ್ಲಿಸಿದರು. ಈ ವೇಳೆ ಊಟ ಮಾಡುವಾಗ ಪಕ್ಕದಲ್ಲಿದ್ದ ಸಣ್ಣ ಮನೆಯ ಮುಂದೆ ಅಜ್ಜಿಯೊಬ್ಬರು ಬಾಟಲಿಗಳಲ್ಲಿ ನೀರು ತುಂಬಿಸಿ ಮನೆಯ ಮುಂದೆ ಇಡುತ್ತಿರುವುದನ್ನು ಗಮನಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಗ್ಗೆ ವಿಚಾರಿಸಿದಾಗ ರಸ್ತೆಯಲ್ಲಿ ಹೋಗುವ ಜನರು ನೀರು ಕುಡಿಯಲು ಬರುತ್ತಾರೆ. ಅವರಿಗೆ ಸಹಾಯವಾಗಲೆಂದು ಬಾಟಲಿಗಳಲ್ಲಿ ತುಂಬಿ ಇಡುತ್ತಿರುವುದಾಗಿ ಅಜ್ಜಿ ತಿಳಿಸಿದ್ದಾರೆ.

ಗೌರಮ್ಮ ವಾಡೆದ್ ಎಂಬ ಅಜ್ಜಿ ಹಾಗೂ ಜೊತೆಗಿದ್ದ ಮಗ ಮಲ್ಲು ಎಂಬುವವರನ್ನು ಕುರಿತು ವಿಚಾರಿಸಿದಾಗ ಮಾತನಾಡಿದ ಅವರು, “ಹಳ್ಳಿಯಲ್ಲಿ ಹೊಂದಿದ್ದ ಮನೆಯ ಜಾಗ ರಸ್ತೆ ಮಾಡುವಾಗ ಕೈ ತಪ್ಪಿದೆ. ಇದರಿಂದಾಗಿ ವಾಸಿಸಲು ಮನೆ ಇರಲಿಲ್ಲ. ನಂತರ ಈ ಸ್ಥಳದಲ್ಲಿದ್ದ ತೋಟದ ಮಾಲೀಕರು ಒಂದೇ ಕೊಠಡಿಯಿರುವ ಮನೆಯನ್ನು ನೀಡಿದ್ದು, ವಾಸಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಅಡುಗೆ ಮಾಡಲು ಪಾತ್ರೆಗಳಾಗಲಿ, ಹಾಸಿಗೆ- ಹೊದಿಕೆಗಳಾಗಲಿ, ಕಾಳು ಕಡ್ಡಿಗಳಾಗಲಿ ಏನೂ ಇಲ್ಲದೆ ಊಟಕ್ಕೂ ಸರಿಯಾಗಿ ಗತಿ ಇಲ್ಲದಂತಾಗಿದೆ. ಈ ಮೊದಲು ಹೊಂದಿದ್ದ ಪಡಿತರ ಕಾರ್ಡ್ ಕೂಡ ಕಳೆದುಹೋಗಿದ್ದರಿಂದ ಸರ್ಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡಲೇ ಅವರಿಗೆ ಸ್ವಲ್ಪಮಟ್ಟಿಗೆ ಆರ್ಥಿಕ ನೆರವು ನೀಡಿ, ಆದಷ್ಟು ಬೇಗ ರೇಷನ್ ಕಾರ್ಡ್ ಮತ್ತು ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವ ಬಗ್ಗೆ ತಿಳಿಸಿ, ಸ್ಥಳದಿಂದಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನೆರವು ನೀಡಿದ ಪೊಲೀಸ್ ಅಧಿಕಾರಿ

ಇದೇ ವೇಳೆ ಅದೇ ಮಾರ್ಗವಾಗಿ ತೆರಳುತ್ತಿದ್ದ ಎಎಸ್‌ಐ ಎಚ್ ಎಸ್ ಗೌಡರ್ ಅಧಿಕಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಭೇಟಿಯಾಗಿದ್ದು, ಅಜ್ಜಿಯ ಕುಟುಂಬದ ಪರಿಸ್ಥಿತಿ ವಿವರಿಸಿದರು. ಆಗ ಅಜ್ಜಿ, ತಾವು ಉಪವಾಸವಿದ್ದ ಸಂದರ್ಭದಲ್ಲಿ ಎಎಸ್‌ಐ ತಮಗೆ ಅಕ್ಕಿ ನೀಡಿ, ಸಹಾಯ ಮಾಡಿರುವ ಬಗ್ಗೆ ಮಾತನಾಡಿದರು. ಸಂಕಷ್ಟದಲ್ಲಿದ್ದವರಿಗೆ ನೆರವು ನೀಡಿದ್ದಕ್ಕಾಗಿ ಸರ್ಕಾರದ ಪರವಾಗಿ ಎಎಸ್ಐ ಗೌಡರ್‌ಗೆ ಹೆಬ್ಬಾಳ್ಕರ್ ಧನ್ಯವಾದ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಂಗಯ್ಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಕಚ್ಚಾಬಾಂಬ್ ಸ್ಫೋಟ; ಹಸು ಸಾವು

“ಸರ್ಕಾರ ‌ನಿರ್ಗತಿಕರಿಗಾಗಿಯೇ ಗೃಹಲಕ್ಷ್ಮೀ, ಅನ್ನಭಾಗ್ಯ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿಗಳು ಬಡವರಿಗಾಗಿಯೇ ಯೋಜನೆಗಳನ್ನು ತಂದಿದ್ದಾರೆ. ಅದು ಯಾರಿಗೆ ತಲುಪಿಲ್ಲವೋ ಅಂತಹವರಿಗೆ ತಲುಪಿಸುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಶೀಘ್ರದಲ್ಲೇ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...