ಬೆಳಗಾವಿ | ರೈತರಿಗೆ ಕಳಪೆ ಬೀಜ ಕೊಟ್ಟರೆ ಶಿಸ್ತು ಕ್ರಮ: ಶಾಸಕ ಅಶೋಕ ಪಟ್ಟಣ

Date:

ರೈತರ ಬೇಡಿಕೆಗೆ ತಕ್ಕಂತೆ ಎಲ್ಲ ಬಗೆಯ ಬೀಜಗಳು ದೊರೆಯುವಂತೆ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು. ದಾಸ್ತಾನು ಖಾಲಿಯಾಗುವ ಸಂಭವ ಇದ್ದಲ್ಲಿ ಎರಡು ದಿನಗಳ ಮುಂಚಿತವಾಗಿ ಮೇಲಾಧಿಕಾರಿಗಳಿಗೆ ಬೇಡಿಕೆ ಸಲ್ಲಿಸಬೇಕು ಎಂದು ಶಾಸಕ ಅಶೋಕ ಪಟ್ಟಣ ತಿಳಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ರೈತ ಸಂಪರ್ಕ ಕೇಂದ್ರಕ್ಕೆ ಆಗಮಿಸುವ ರೈತರೊಂದಿಗೆ ಅಧಿಕಾರಿಗಳು ಸೌಜನ್ಯಯುತವಾಗಿ ವರ್ತಿಸಬೇಕು. ಇಲಾಖೆಯ ಸವಲತ್ತುಗಳ ಮಾಹಿತಿ ನೀಡಬೇಕು. ಒಂದು ವೇಳೆ ರೈತರಿಂದ ದೂರುಗಳು ಕೇಳಿ ಬಂದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ” ಎಂದು ಅಶೋಕ ಪಟ್ಟಣ ಎಚ್ಚರಿಕೆ ನೀಡಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರಿಂದ ಬರುವ ಸಲಹೆ ಸೂಚನೆಗಳನ್ನು ಪಡೆದು ನನಗೆ ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು” ಎಂದು ತಿಳಿಸಿದರು.

“ಬೀಜಗಳ ಗುಣಮಟ್ಟದ ಬಗ್ಗೆ ಖಾತರಿ ಮಾಡಿಕೊಂಡಿರಬೇಕು. ಒಂದು ವೇಳೆ ಕಳಪೆ ಬೀಜ ವಿತರಣೆ ಮಾಡಿ ರೈತರ ಜಮೀನಿಲ್ಲಿ ಬೀಜಗಳು ಸರಿಯಾಗಿ ನಾಟದೇ ಹೋದಲ್ಲಿ ಅದನ್ನು ಪರೀಕ್ಷಿಸಲು ವಿಫಲರಾಗುವ ಅಧಿಕಾರಿಗಳೇ ರೈತರ ಸಂಪೂರ್ಣ ನಷ್ಟವನ್ನು ತುಂಬಿಕೊಡಬೇಕಾಗುತ್ತದೆ” ಎಂದು ಹೇಳಿದರು.

ಸಹಾಯಕ ಕೃಷಿ ನಿರ್ದೇಶಕ ಎಸ್ ಎಫ್ ಬೆಳವಟಗಿ ಮಾತನಾಡಿ, “ಕೆಲವು ಪ್ರದೇಶಗಳಲ್ಲಿ ಮುಂಗಾರು ಮಳೆಯಾಗಿದೆ. ವಾಡಿಕೆಯ ಮಳೆಯಾಗಿದೆ. 19 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಸೇರಿ 93 ಅಧಿಕೃತ, ಮಾರಾಟಗಾರರಿಂದ ರೈತರಿಗೆ ಎಲ್ಲಡೆ ಬೀಜ ರಸಗೊಬ್ಬರ ದೊರೆಯುವಂತೆ ಇಲಾಖೆಯಿಂದ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಹೆಳಿದ್ಧಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಬಂಧನಕ್ಕೆ ರೈತ ಸಂಘ ಆಗ್ರಹ

ರೈತ ಮುಖಂಡ ರಾಮನಗೌಡ ಪಾಟೀಲ ಮಾತನಾಡಿ, “ರೈತರ ಸಮಸ್ಯೆಗಳ ಪರಿಹಾರಕ್ಕೆ ಶಾಸಕರು ಬದ್ಧರಾಗಿದ್ದಾರೆ. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಅಥವಾ ರೈತರು ಶಾಸಕರ ಗಮನಕ್ಕೆ ತಂದಲ್ಲಿ ಸರ್ಕಾರದ ಮಟ್ಟದಲ್ಲಿ ಅದನ್ನು ಪರಿಹರಿಸುತ್ತಾರೆಂಬ ವಿಶ್ವಾಸವಿದೆ” ಎಂದರು.

ಚಂದರೆಗ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಿ ಅಡಗಿದನಿ, ಕೃಷಿ ಅಧಿಕಾರಿ ಎಂ ವೈ ಚೆನ್ನಿ, ರಮೇಶ ದಾಸರ, ಸೋಮು ಹಲಗಲಿಮಠ, ರೈತ ಮುಖಂಡರು ಹಾಗೂ ಇಲಾಖೆಯ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...