ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಮರಾಠಿಗ ಮಂಗೇಶ ಮೇಯರ್, ಉಪಮೇಯರ್ ಸ್ಥಾನಕ್ಕೆ ವಾಣಿ ಆಯ್ಕೆ

Date:

ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಮಂಗೇಶ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಶನಿವಾರ ಬಹುಮತದಿಂದ ಆಯ್ಕೆಯಾದರು.

ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಗುಂಪು ಮತ್ತೊಮ್ಮೆ ಪಾಲಿಕೆ‌ ಚುಕ್ಕಾಣಿ ‌ಹಿಡಿದಿದೆ. ಮರಾಠಿಗರಾದ ಮಂಗೇಶ 41ನೇ ವಾರ್ಡಿನ ಸದಸ್ಯ, ಕನ್ನಡತಿಯಾದ ವಾಣಿ 43ನೇ ವಾರ್ಡಿನ ಸದಸ್ಯೆಯಾಗಿದ್ದಾರೆ.

ಈ ಎರಡೂ‌ ವಾರ್ಡುಗಳು ದಕ್ಷಿಣ ವಿಧಾನಸಭಾ‌ ಕ್ಷೇತ್ರಕ್ಕೆ ಬರುತ್ತವೆ. ಪಾಲಿಕೆ ಮೇಲೆ ಬಿಗಿ ಹಿಡಿತ ಸಾಧಿಸಿರುವ ಶಾಸಕ ಅಭಯ ಈ ಅಯ್ಕೆಗೆ ಮುಂಚೂಣಿ ನಾಯಕತ್ವ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಪ್ರಕ್ರಿಯೆ: ಸರಿಯಾಗಿ 1 ಗಂಟೆಗೆ ಪ್ರಾದೇಶಿಕ ಆಯುಕ್ತ ಎಸ್ ಬಿ ಶೆಟ್ಟೆನ್ನವರ ಚುನಾವಣಾ ಪ್ರಕ್ರಿಯೆ ಆರಂಭಿಸಿದರು. ಮೇಯರ್ ಸ್ಥಾನಕ್ಕೆ ಬಿಜೆಪಿಯ ಮಂಗೇಶ ಪವಾರ್, ರಾಜು ಭಾತಖಾಂಡೆ, ಎಂಇಎಸ್ ನ ಬಸವರಾಜ ಮಾರುತಿ ಮೋದಗೇಕರ, ಎಐಎಂಐಎಂನ ಶಾಹಿದಖಾನ್ ಪಠಾಣ ತಲಾ 2 ನಾಮಪತ್ರ ಸಲ್ಲಿಸಿದ್ದರು. 2 ನಿಮಿಷ ಅವಕಾಶದ ಬಳಿಕ ರಾಜು ಭಾತಖಾಂಡೆ ಹಾಗೂ ಶಾಹಿದಖಾನ್ ಪಠಾಣ ಉಮೇದುವಾರಿಕೆ ಹಿಂಪಡೆದರು.

ಮಂಗೇಶ ಹಾಗೂ ಬಸವಾರಾಜ ಮಧ್ಯೆ ಚುನಾವಣೆ ನಡೆಯಿತು. ಮಂಗೇಶ ಪರವಾಗಿ 40 ವಿರುದ್ಧವಾಗಿ 5 ಮತಗಳು ಚಲಾವಣೆಯಾದವು. ತಟಸ್ಥವಾಗಿ ಇರುವ ಆಯ್ಕೆಗೆ ಯಾರೂ ಕೈ ಎತ್ತಲಿಲ್ಲ. ಬಸವಾರಾಜ ಪರವಾಗಿ 20, ವಿರೋಧವಾಗಿ 40 ಮತಗಳು ಬಂದವು.

ಅತಿ ಹೆಚ್ಚು ಮತ ಪಡೆದ ಮಂಗೇಶ ಅವರನ್ನು ಮೇಯರ್ ಎಂದು ಘೋಷಿಸಲಾಯಿತು. ಉಪಮೇಯರ್ ಸ್ಥಾನಕ್ಕೆ ವಾಣಿ ವಿಲಾಸ ಜೋಶಿ, ದೀಪಾಲಿ ಟೊಪ್ಪಗಿ, ಶ್ರೀಮತಿ ಖುರ್ಷಿದ್ ಮುಲ್ಲಾ, ಲಕ್ಷ್ಮೀ ಲೋಕರಿ ತಲಾ 2 ನಾಮಪತ್ರ ಸಲ್ಲಿದ್ದರು. ಖುರ್ಷಿದ್ ಮುಲ್ಲಾ ಹಾಗೂ ದೀಪಾಲಿ ಉಮೇದುವಾರಿಕೆ ವಾಪಸ್ ಪಡೆದರು.

ಈ ಸುದ್ದಿ ಓದಿದ್ದೀರಾ? ಅಥಣಿ | ʼಪರಿಶಿಷ್ಟರಿಗೆ 50 ವರ್ಷಗಳಿಂದ ಮರೀಚಿಕೆಯಾದ ಮೂಲಸೌಕರ್ಯʼ

ಕಣದಲ್ಲಿ ಉಳಿದ ವಾಣಿ ವಿಲಾಸ ಜೋಶಿ ಪರವಾಗಿ 40 ವಿರೋಧವಾಗಿ‌ 19 ಮತಗಳು ಬಂದವು. ಲಕ್ಷ್ಮೀ ಲೋಕರಿ ಪರವಾಗಿ 20 ವಿರೋಧವಾಗಿ 40 ಮತಗಳು ಬಂದವು. ಹೆಚ್ಚು ಮತ ಪಡೆದ ವಾಣಿ ಅವರನ್ನು ಉಪಮೇಯರ್ ಎಂದು‌ ಘೋಷಿಸಲಾಯಿತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸತೀಶ ಜಾರಕಿಹೊಳಿ, ಶಾಸಕ ಆಸಿಫ್ ಸೇಠ್, ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ಒಬ್ಬ ಪಾಲಿಕೆ ಸದಸ್ಯ ಗೈರಾದರು. 65 ಮತದಾರ ಪೈಕಿ 60 ಮಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...