ಬೆಳಗಾವಿ | ನೈತಿಕತೆಯೇ ಸ್ವಾತಂತ್ರ್ಯ ಘೋಷ ವಾಕ್ಯದಡಿ ಸೆ.1ರಿಂದ 30ರವರೆಗೆ ರಾಷ್ಟ್ರವ್ಯಾಪಿ ಅಭಿಯಾನ

Date:

ನೈತಿಕತೆಯೇ ಸ್ವಾತಂತ್ರ್ಯ ಎಂಬ ವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ ಸೆಪ್ಟೆಂಬರ್‌ 1ರಿಂದ 30ರವರೆಗೆ ರಾಷ್ಟ್ರವ್ಯಾಪಿ ಅಭಿಯಾನ ನಡೆಸಲಾಗುವುದು ಎಂದು ಸಾಜಿದುನ್ನಿಸ್ಸಾ ಅವರು ಹೇಳಿದರು.

ಬೆಳಗಾವಿಯ ಜಮಾಅತೆ ಇಸ್ಲಾಮೀ ಹಿಂದ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, “ನೈತಿಕತೆಯೇ ಸ್ವಾತಂತ್ರ್ಯ ಎಂಬ ವಿಷಯದೊಂದಿಗೆ ನಾವು ಸೆಪ್ಟೆಂಬರ್ 2024ರಲ್ಲಿ ಒಂದು ತಿಂಗಳ ಅವಧಿಯ ಅಭಿಯಾನವನ್ನು ಪ್ರಾರಂಭಿಸುತ್ತಿದ್ದೇವೆ. ಈ ಅಭಿಯಾನವು ನಿಜವಾದ ಸ್ವಾತಂತ್ರ್ಯ ಎಂದರೇನು ಮತ್ತು ಅದು ನೈತಿಕತೆಯೊಂದಿಗೆ ಹೇಗೆ ಸಂಬಂಧ ಹೊಂದಿದೆ ಎಂಬುದರ ಕುರಿತು ಜಾಗೃತಿ ಮೂಡಿಸುವ ಗುರಿ ಹೊಂದಿದೆ. ನೈತಿಕ ಮೌಲ್ಯಗಳನ್ನು ಅನುಸರಿಸುವುದರಿಂದ ಮಾತ್ರ ಜೀವನದಲ್ಲಿ ನಿಜವಾದ, ಶಾಶ್ವತವಾದ ಸ್ವಾತಂತ್ರ್ಯ ಮತ್ತು ಸಾರ್ಥಕತೆಯನ್ನು ಪಡೆಯಬಹುದು” ಎಂದರು.

“ಜಾತಿ, ಬಣ್ಣ, ಲಿಂಗ, ಧರ್ಮ ಅಥವಾ ಪ್ರದೇಶವನ್ನು ಲೆಕ್ಕಿಸದೆ ತಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಲು ಮತ್ತು ಮೂಲಭೂತ ಹಕ್ಕುಗಳನ್ನು ಪಡೆಯಲು ಅಗತ್ಯವಿರುವ ಸ್ವಾತಂತ್ರ್ಯವನ್ನು ಖಾತ್ರಿಪಡಿಸುವುದು ಅಭಿಯಾನದ ಗುರಿಯಾಗಿದ್ದು,
ಶಿಕ್ಷಣ ತಜ್ಞರು, ಸಲಹೆಗಾರರು, ವಕೀಲರು, ಧಾರ್ಮಿಕ ವಿದ್ವಾಂಸರು ಮತ್ತು ಸಮುದಾಯದ ಮುಖಂಡರನ್ನು ಒಳಗೊಂಡ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಶಾಶ್ವತ ಸಂತೋಷ ಮತ್ತು ಸ್ವಾತಂತ್ರ್ಯಕ್ಕಾಗಿ ನೈತಿಕ ಮೌಲ್ಯಗಳನ್ನು ಅನುಸರಿಸುವ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಶಿಕ್ಷಣ ನೀಡಲು, ಹುರಿದುಂಬಿಸಲು ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಮಾಅತ್-ಎ-ಇಸ್ಲಾಮಿ ಹಿಂದ್(JIH)ನ ಮಹಿಳಾ ಇಲಾಖೆಯು ಭಾರತದಲ್ಲಿ ಮಹಿಳೆಯರು ಮತ್ತು ಹುಡುಗಿಯರ ವಿರುದ್ಧ ನಿರಂತರ ಕಿರುಕುಳ, ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯಗಳು, ಹಿಂಸೆ ಮತ್ತು ನಿರಂತರವಾಗಿ ಹೆಚ್ಚುತ್ತಿರುವ ನರಹತ್ಯೆಯ ಪ್ರಕರಣಗಳ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸುತ್ತದೆ. ಬಿಲ್ಕಿಸ್ ಬಾನೊ ಪ್ರಕರಣವು ನಮ್ಮ ಸಂಸ್ಥೆಗಳಲ್ಲಿ ಬೇರೂರಿರುವ ವ್ಯವಸ್ಥಿತ ಪಕ್ಷಪಾತ ಮತ್ತು ಸಂವೇದನಾಶೀಲತೆಗೆ ಸಂಪೂರ್ಣ ಸಾಕ್ಷಿಯಾಗಿದೆ. ಇತ್ತೀಚಿನ ಎಡಿಆರ್ ವರದಿಯು ಇದನ್ನು ಒತ್ತಿಹೇಳುತ್ತದೆ. ಇದು ಪ್ರಸ್ತುತ 151 ಹಾಲಿ ಶಾಸಕರು ಮಹಿಳೆಯರ ವಿರುದ್ಧದ ಅಪರಾಧಗಳ ಆರೋಪಗಳನ್ನು ಎದುರಿಸುತ್ತಿದ್ದಾರೆ” ಎಂದರು.

“ಮಹಿಳೆಯರ ಮೇಲಿನ ಈ ದೌರ್ಜನ್ಯಗಳು ನಮ್ಮ ರಾಷ್ಟ್ರದ ಶಾಂತಿ ಮತ್ತು ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿರುವ ವ್ಯಾಪಕವಾಗಿ ಹರಡುತ್ತಿರುವ ರೋಗದ ಲಕ್ಷಣವಾಗಿದೆಯೆಂದು ನಾವು ಬಲವಾಗಿ ನಂಬುತ್ತೇವೆ. ನೈತಿಕ ಮೌಲ್ಯಗಳ ಕುಸಿತವೇ ಈ ಅನಾಹುತಕ್ಕೆ ಮೂಲ ಕಾರಣ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ರಾಜ್ಯಪಾಲರ ನಡೆ ಖಂಡಿಸಿ ಸೆ.3ರಂದು ಪ್ರತಿಭಟನೆ: ದಸಂಸ ಮುಖಂಡ ಮರೆಪ್ಪ ಚೆಟ್ಟೇರಕರ್

“ಕೆಲವು ಸಮುದಾಯಗಳು ಮತ್ತು ಜಾತಿಗಳನ್ನು ವಶಪಡಿಸಿಕೊಳ್ಳುವ ಮತ್ತು ಪ್ರಾಬಲ್ಯ ಸಾಧಿಸುವ ಬಯಕೆಯಿಂದ ನಡೆಸಲ್ಪಡುತ್ತಿರುವ ಕೋಮು ಮತ್ತು ಜಾತಿ ಆಧಾರಿತ ರಾಜಕೀಯದ ಪ್ರಭಾವವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ.
ನಾವು ಕೋಮು ಮತ್ತು ಜಾತಿ ದ್ವೇಷದ ವಿರುದ್ಧ ಜಾಗೃತಿ ಮೂಡಿಸಬೇಕಾಗಿದೆ. ಆದ್ದರಿಂದ ಸಮಾಜ ಮತ್ತು ಅದರ ರೂಢಿಗಳು ಇವುಗಳನ್ನು ಆಳವಾದ ಅನೈತಿಕ ಕೃತ್ಯಗಳೆಂದು ಗುರುತಿಸುತ್ತವೆ. ನಮ್ಮ ಯುವಕರು ಅವ್ಯವಸ್ಥೆ, ಒಂಟಿತನ, ಹತಾಶೆ ಮತ್ತು ಒತ್ತಡದಿಂದಿದ್ದಾರೆ. ಇದು ಅವರ ಉತ್ಪಾದಕತೆ ಮತ್ತು ಪ್ರಗತಿಯ ಮೇಲೆ ಪರಿಣಾಮ ಬೀರುತ್ತದೆ” ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಸದಸ್ಯರು ಹಾಗೂ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...