ಬೆಳಗಾವಿ | ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ; ಸಚಿವ ಸತೀಶ್ ಜಾರಕಿಹೊಳಿ‌ ಚಾಲನೆ

Date:

ಬೆಳೆಗಳಿಗೆ ಡ್ರೋನ್‌ ಮೂಲಕ ಪೋಷಕಾಂಶ ಸಿಂಪಡಣೆ ಮಾಡುವುದು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ಒಳ್ಳೆಯ ಪದ್ಧತಿಯಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ ಹತ್ತರಗಿ ಬಳಿಯ ಕೃಷಿ ಜಮೀನಿನಲ್ಲಿ ಆಯೋಜಿಸಲಾದ ಸೋಯಾ ಮತ್ತು ಅವರೆ ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಡ್ರೋನ್‌ ಮೂಲಕ ಪೋಷಕಾಂಶ ಸಿಂಪಡಣೆ ಮಾಡುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ ಮತ್ತು ವೇಗವಾಗಿ ಕೃಷಿ ಚಟುವಟಿಕೆ ನಿರ್ವಹಿಸಲು ಸಾಧ್ಯವಾಗುತ್ತದೆ. ರೈತರು ಹೊಸ ತಂತ್ರಜ್ಞಾನದ ಮೂಲಕ ಕೃಷಿ ಚಟುವಟಿಕೆಗಳಲ್ಲಿ ಬೆಳವಣಿಗೆಯಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, “37 ಡ್ರೋನ್‌ಗಳನ್ನು ಸೋಯಾ, ಅವರೆ ಬೆಳೆಗಳಿಗೆ ಪೋಷಕಾಂಶಗಳ ಸಿಂಪಡಣೆಗೆ ಬಳಕೆ ಮಾಡಲಾಗುತ್ತಿದೆ. ರೈತರು ಬೆಳೆದ ವಿವಿಧ ಬೆಳೆಗಳಿಗೆ ಪೋಷಕಾಂಶ ಮತ್ತು ರಸಗೊಬ್ಬರಗಳನ್ನು ಸಿಂಪಡಣೆ ಮಾಡಲು ಈ ವಿಧಾನ ಅನುಕೂಲವಾಗಿದೆ” ಎಂದು ಹೇಳಿದರು.

“ಪ್ರತಿ ಎಕರೆ ಸಿಂಪಡಣೆಗೆ ಕೇವಲ ₹400 ಖರ್ಚಾಗುತ್ತದೆ. ಡ್ರೋನ್ ಮೂಲಕ ವಿವಿಧ ಬೆಳೆಗಳಿಗೆ ಕೀಟನಾಶಕ, ರಸಗೊಬ್ಬರ ಸಿಂಪಡಣೆ ಮಾಡಬಹುದು. ರೈತರಿಗೆ ತಾಂತ್ರಿಕತೆಯ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ; ರಾಜ್ಯಪಾಲರ ಅಧಿಕಾರ ದುರುಪಯೋಗಕ್ಕೆ ಸಿಪಿಐಎಂ ಖಂಡನೆ

“ಜಿಲ್ಲೆಯ ರೈತ ಸಮುದಾಯವು ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಡ್ರೋನ್ ಬಳಕೆ ಬಗ್ಗೆ ಮಾಹಿತಿ ಪಡೆಯಬೇಕು. ಈಗಾಗಲೇ ಕಿತ್ತೂರು ಬೈಲಹೊಂಗಲ ಬಾಗೇವಾಡಿಯಲ್ಲಿ ಕಬ್ಬುಬೆಳೆಗೆ ಡ್ರೋನ್ ಬಳಕೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಕೃಷಿ ಇಲಾಖೆಯ ಉಪ ನಿರ್ದೇಶಕರು, ಹುಕ್ಕೇರಿ ತಹಶೀಲ್ದಾರ್ ಮಂಜುಳಾ ನಾಯಕ, ರೋಟರಿ ಕ್ಲಬ್ ಪದಾಧಿಕಾರಿಗಳು‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...