ಬೆಳಗಾವಿ | ಉತ್ತಮ ಬೆಲೆ ನಿರೀಕ್ಷೆಯಲ್ಲಿ ಈರುಳ್ಳಿ ಬೆಳೆಗಾರರು

Date:

ಮಹಾರಾಷ್ಟ್ರದ ರೈತರು ಬೆಳೆಯುವ ಈರುಳ್ಳಿ ಪ್ರಮಾಣ ಮೇಲೇ ಪ್ರತಿವರ್ಷ ಬೆಳಗಾವಿ ಮತ್ತು ಹುಬ್ಬಳ್ಳಿ ಮಾರುಕಟ್ಟೆಯ ಈರುಳ್ಳಿ ಬೆಲೆ ನಿರ್ಧಾರವಾಗುತ್ತದೆ. ಆದರೆ ಮಹಾರಾಷ್ಟ್ರದಲ್ಲಿ ಈ ವರ್ಷ ನೆರೆ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಈರುಳ್ಳಿ ಬೆಳೆ ನಾಶವಾಗಿದ್ದು, ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ. ಹಾಗಾಗಿ ಈರುಳ್ಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ಈರುಳ್ಳಿ ಬೆಳೆಗಾರರು ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದಾರೆ.

ಈ ಬಾರಿ ಈರುಳ್ಳಿ ಬೆಳೆ ಉತ್ತಮವಾಗಿದ್ದು, ರೈತರು ಉತ್ತಮ ದರದ ನಿರೀಕ್ಷೆಯನ್ನೂ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈರುಳ್ಳಿಗೆ ಉತ್ತಮ ಬೆಲೆ

ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ರೈತ ಬಸಪ್ಪ ಪೂಜೇರ ಈ ದಿನ.ಕಾಮ್ ಜೊತೆ ಮಾತನಾಡಿ, “ಈ ವರ್ಷ ಮಹಾರಾಷ್ಟ್ರದಿಂದ, ಬೆಳಗಾವಿ ಮತ್ತು ಹುಬ್ಬಳ್ಳಿ ಮಾರುಕಟ್ಟೆಗೆ ಈರುಳ್ಳಿ ಬಂದಿಲ್ಲ. ಇದರಿಂದ ನಾವು ಬೆಳೆದಿರುವ ಈರುಳ್ಳಿಗೆ ಹೆಚ್ಚಿನ ಬೆಲೆ ಸಿಗುವ ನಿರೀಕ್ಷೆಯಲ್ಲಿದ್ದೇವೆ. ಮಾರುಕಟ್ಟೆಯಲ್ಲಿ ಈಗ ಪ್ರತಿ ಕ್ವಿಂಟಲ್ ಈರುಳ್ಳಿಗೆ ₹4,200ರಿಂದ ₹4,600ರವರೆಗೆ ಬೆಲೆಯಿದ್ದು, ಇನ್ನೂ ಹೆಚ್ಚಿನ ಬೆಲೆ ಸಿಗುವ ನಿರೀಕ್ಷೆಯಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂದಿಹಾಳ ಗ್ರಾಮದ ರೈತ ಸುರೇಶ್ ಭಂಗಿ ಮಾತನಾಡಿ, “ಒಂದು ಎಕರೆ ಈರುಳ್ಳಿ ಬೆಳೆಯಲು ಸುಮಾರು ₹30,000 ವೆಚ್ಚವಾಗುತ್ತದೆ. ಹಿಂದಿನ ವರ್ಷಕ್ಕಿಂತ ಈ ವರ್ಷ ಒಳ್ಳೆಯ ಬೆಲೆ ಇರುವುದರಿಂದ ಈರುಳ್ಳಿ ಬೆಳೆಗಾರರಿಗೆ ಲಾಭವಾಗುವ ನಿರೀಕ್ಷೆಯಿದೆ. ಆದರೆ ಕೇಂದ್ರ ಸರ್ಕಾರವು ಬೇರೆ ಕಡೆಯಿಂದ ಈರುಳ್ಳಿ ಆಮದು ಮಾಡಿಕೊಂಡರೆ ಈರುಳ್ಳಿ ಬೆಲೆ ಕುಸಿಯುವ ಸಾಧ್ಯತೆಯಿತೆ. ಆದ್ದರಿಂದ ಆಮದು ಮಾಡಿಕೊಳ್ಳದೇ ಇರುವುದು ಉತ್ತಮ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಸೀತಾರಾಮ್ ಯೆಚೂರಿ ನಿಧನ; ಎಸ್‌ಎಫ್‌ಐನಿಂದ ಸಂತಾಪ

ಕೆಂದ್ರ ಸರ್ಕಾರವು ಗ್ರಾಹಕರ ಅನುಕೂಲಕ್ಕಾಗಿ ರಾಷ್ಟ್ರೀಯ ಸಹಕಾರ ಗ್ರಾಹಕರ ಒಕ್ಕೂಟ ಮತ್ತು ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ಮಳಿಗೆಗಳಿಂದ ಗ್ರಾಹಕರಿಗೆ ಪ್ರತಿ ಕೆಜಿಗೆ ₹35ರ ದರದಲ್ಲಿ ಮಾರಾಟ ಮಾಡಲು ಮುಂದಾಗಿರುವುದು ಈರುಳ್ಳಿ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. ಹಿಂದಿನ ವರ್ಷಗಳಲ್ಲಿ ಕೇಂದ್ರ ಸರ್ಕಾರವು ಈರುಳ್ಳಿ ಆಮದು ಮಾಡಿಕೊಂಡಿದ್ದರಿಂದ ಈರುಳ್ಳಿ ಬೆಲೆ ಕುಸಿದಿತ್ತು. ಆದ್ದರಿಂದ ಕೇಂದ್ರ ಸರ್ಕಾರವು ಗ್ರಾಹಕರು ಮತ್ತು ಈರುಳ್ಳಿ ಬೆಳೆಗಾರರ ಹಿತ ಕಾಪಾಡುವಂತಹ ಕ್ರಮ ಕೈಗೊಳ್ಳಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಬಾಳಪ್ಪ ಪಾಟೀಲ ಕೋರಿದ್ದಾರೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...