‌ಬೆಳಗಾವಿ | ನಮ್ಮ ಧರ್ಮ ನಮ್ಮೊಂದಿಗೆ, ನಮ್ಮ ಪ್ರೀತಿ ಎಲ್ಲರೊಂದಿಗೆ: ಮುಹಮ್ಮದ್ ಕುಂಞಿ

Date:

ನಮ್ಮ ಧರ್ಮ ನಮ್ಮೊಂದಿಗೆ ನಮ್ಮ ಪ್ರೀತಿ ಎಲ್ಲರೊಂದಿಗೆ ಇರಲಿ. ನಾವು ನಮ್ಮ ಧರ್ಮಗಳನ್ನು ಪಾಲಿಸೋಣ, ಆದರೆ ಎಲ್ಲರೊಂದಿಗೆ ಪ್ರೀತಿಯನ್ನು ಹಂಚಿಕೊಳ್ಳಬೇಕಾಗಿದೆ ಎಂದು ಶಾಂತಿ ಪ್ರಕಾಶನ ಸಂಸ್ಥೆಯ ಮುಹಮ್ಮದ್ ಕುಂಞಿ ತಿಳಿಸಿದರು.

ಬೆಳಗಾವಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯಿಂದ ಸರ್ವಧರ್ಮಗಳ ಗುರುಗಳನ್ನು ಒಂದೆಡೆ ಸೇರಿಸಿ ಹಮ್ಮಿಕೊಂಡಿದ್ದ ಸದ್ಭಾವನಾ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

“ಸಮಾಜದಲ್ಲಿ ಪ್ರೀತಿ, ಸಾಮರಸ್ಯ ಮತ್ತು ಪರಸ್ಪರ ಸಹಕಾರ ವಾತಾವರಣ, ಬೆಳೆಯುವ ಅವಕಾಶಗಳನ್ನು ಪ್ರೋತ್ಸಾಹಿಸುವುದು, ಸಾಮಾಜಿಕ ಪಿಡುಗುಗಳ ನಿರ್ಮೂಲನೆ, ಸಂವಿಧಾನ ಖಾತರಿಪಡಿಸಿದ ಸಾಂಸ್ಕೃತಿಕ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಜನರಿಗೆ ಶಿಕ್ಷಣ ನೀಡುವುದು, ಕೋಮುದ್ವೇಷದ ಸಂದರ್ಭದಲ್ಲಿ ಪರಸ್ಪರ ಸಹಕಾರದೊಂದಿಗೆ ಪರಿಹಾರ ಕಂಡುಕೊಳ್ಳುವುದು, ಭಾರತೀಯ ಸಂವಿಧಾನವು ಪ್ರತಿಪಾದಿಸಿದ ಮೂಲಭೂತ ಮೌಲ್ಯಗಳಾದ ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಭಾತೃತ್ವವನ್ನು ಬಲಪಡಿಸಿವುದು ಸದ್ಭಾವನಾ ಕಾರ್ಯಕ್ರಮದ ಉದ್ದೇಶವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮಕೃಷ್ಣ ಆಶ್ರಮದ ಮೋಕ್ಷಾತ್ಮಾನಂದ ಸ್ವಾಮಿಜಿ ಮಾತನಾಡಿ, “ರಾಮಕೃಷ್ಣ ಪರಮಹಂಸರು ಮತ್ತು ವಿವೇಕಾನಂದರೂ ಕೂಡಾ ಧರ್ಮವು ಒಂದೇ ಆಗಿದೆ ಹಾಗೂ ಎಲ್ಲ ದೇವರುಗಳು ಒಂದೇ ಎಂದು ತಿಳಿಸಿದ್ದರು” ಎಂದರು.

ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿ ಮಾತನಾಡಿ, “ನಮ್ಮ ಮಠದ ಮೂಲಕ ನಾವು ಸರ್ವಧರ್ಮ ಸಮಾನತೆಯ ಕಾರ್ಯಗಳನ್ನು ಮಾಡುತ್ತಾ ಬಂದಿದ್ದೆವೆ ಹಾಗೂ ನಮ್ಮ ಮಠದಿಂದ ಉರ್ದು ಶಾಲೆಯನ್ನೂ ಕೂಡಾ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ನೂತನ ಡಿಸಿಯಾಗಿ ಗೋವಿಂದ ರೆಡ್ಡಿ ನೇಮಕ; ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವರೇ?

ಕಾರ್ಯಕ್ರಮದಲ್ಲಿ ಸಿಖ್ ಸಮುದಾಯದ ಗುರುಗಳಾದ ಗುರುಬ್ಜೋತ್ ಸಿಂಗ್, ಬ್ರಹ್ಮಕುಮಾರಿ ಆಶ್ರಮದಿಂದ ರಾಜಯೋಗಿ ವಿದ್ಯಾ, ಜಮಾಅತೆ ಇಸ್ಲಾಮೀ ಹಿಂದ್ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಇಂಜಿನಿಯರ್ ಮೊಹಮ್ಮದ್ ಸಲೀಮ್, ರಾಜ್ಯಾಧ್ಯಕ್ಷ ಡಾ ಮೊಹಮ್ಮದ್ ಸಾದ್ ಬೆಳಗಾಮಿ, ಕ್ರಿಶ್ಚಿಯನ್ ಸಮುದಾಯದ ಪಾದ್ರಿಗಳು ಸೇರಿದಂತೆ ಯಾಸಿನ್ ಮಖಾಂದಾರ್, ಶಿವಾಜಿ ಕಾಗಣಿಗಕರ್, ಡಿ ಎಸ್ ಚೌಗಲೆ, ಕೃಷಿಕ ಸಮಾಜದ ಸಿದ್ದೇಗೌಡ ಮೋದಗಿ, ಬಸವರಾಜ ಹಿಮ್ಮಡಿ ಸೇರಿದಂತೆ ಬಹುತೇಕ ಗಣ್ಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...