ಬೆಳಗಾವಿ | ತಹಶೀಲ್ದಾರ್ ಆಪ್ತ ಸಹಾಯಕ ರುದ್ರಣ್ಣನದ್ದು ಆತ್ಮಹತ್ಯೆಯಲ್ಲ, ಕೊಲೆ: ಪೊಲೀಸ್ ಕಚೇರಿಗೆ ಅನಾಮಧೇಯ ಪತ್ರ!

Date:

ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ’ ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇಬಜಾ‌ರ್ ಎಸಿಪಿ ಅವರ ಕಚೇರಿಗೆ ತಲುಪಿರುವ ಬಗ್ಗೆ ವರದಿಯಾಗಿದೆ.

ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ತಹಶೀಲ್ದಾರ್ ಬಸವರಾಜ ನಾಗರಾಳ, ಎಫ್‌ಡಿಎ ಅಶೋಕ ಕಬ್ಬಲಿಗೇರ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಅವರಿಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ದೊರೆತ ಬೆನ್ನಲ್ಲೇ, ಈ ಪತ್ರವು ಪೊಲೀಸ್ ಕಚೇರಿಗೆ ಬಂದಿದೆ.

ಬಿಳಿ ಹಾಳೆಯ ಮೇಲೆ ಟೈಪಿಸಿ ಪ್ರಿಂಟ್ ತೆಗೆದು, ಲಕೋಟೆಯಲ್ಲಿ ಹಾಕಿ ಖಡೇಬಜಾ‌ರ್ ಠಾಣೆಗೆ ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರ ಪ್ರತಿಗಳನ್ನು ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು ಸೇರಿ ಹಲವರಿಗೆ ಪೋಸ್ಟ್ ಮಾಡಲಾಗಿದೆ ಎಂದೂ ಪತ್ರದಲ್ಲಿ ಪಟ್ಟಿ ನೀಡಿರುವ ಬಗ್ಗೆ ವರದಿಯಾಗಿದೆ.

‘ರುದ್ರಣ್ಣನದು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ. ಅವನು ಆತ್ಮಹತ್ಯೆ ಮಾಡಿಕೊಂಡಿಲ್ಲ. ಇದು ವ್ಯವಸ್ಥಿತವಾಗಿ ನಡೆಸಿದ ಕೊಲೆ. ತಹಶೀಲ್ದಾರ್ ಜೀಪ್‌ನ ಚಾಲಕ ಯಲ್ಲಪ್ಪ ಬಡಸದ ಎಂಬಾತನೇ ಕೊಲೆಯ ಸೂತ್ರಧಾರ. ಆ ವಾಹನ ತಪಾಸಿಸಿದರೆ ಮತ್ತು ಯಲ್ಲಪ್ಪನ ವಿಚಾರಣೆ ಮಾಡಿದರೆ, ಕೊಲೆ ರಹಸ್ಯ ಹೊರಬರುತ್ತದೆ. ಯಲ್ಲಪ್ಪನ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡು, ಅವರ ಎಲ್ಲ ದುಡ್ಡು ಹೊಡೆದಿದ್ದಾಳೆ. ಮೃತಪಟ್ಟ ರುದ್ರಣ್ಣನ ಕುಟುಂಬಕ್ಕೆ ನ್ಯಾಯ ಸಿಗಬೇಕು. ಪ್ರಕರಣ ಮುಚ್ಚಿ ಹಾಕಬಾರದು’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಈ‌ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬೆಳಗಾವಿ ಪೊಲೀಸರು, ‘ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಅನಾಮಧೇಯ ಪತ್ರದ ಬಗ್ಗೆ ಪರಿಶೀಲಿಸಲಾಗುವುದು. ಎಲ್ಲ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗುವುದು’ ಎಂದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...