ಬೆಳಗಾವಿ ಅಧಿವೇಶನ | ಚರ್ಚೆಗೆ ಬಾರದ ಗಡಿ ವಿವಾದ: ಎಂಇಎಸ್ ತಕರಾರಿಗೆ ಪರಿಹಾರ ಯಾವಾಗ?

Date:

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನ ಪ್ರಾರಂಭವಾಗಿ ಇಷ್ಟು ದಿನಗಳು ಕಳೆದಿದ್ದರೂ ರಾಜ್ಯದ ಗಡಿವಿವಾದವು ಈವರೆಗೆ ಚರ್ಚೆಗೇ ಬಂದಿಲ್ಲ.

ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ಗಡಿ ವಿವಾದವಿದೆ. ಗಡಿ ವಿವಾದ ವಿಷಯವನ್ನು ಜೀವಂತವಾಗಿ ಇರಿಸಲು ಶಿವಸೇನಾ (ಉದ್ಧವ್ ಠಾಕ್ರೆ ಬಣ) ಹಾಗೂ ಎಂಇಎಸ್ ಪ್ರಯತ್ನಿಸುತ್ತಲೇ ಇದೆ. ಅದಕ್ಕಾಗಿ ಅಧಿವೇಶನ ಪ್ರಾರಂಭವಾದ ಮೊದಲ ದಿನವೇ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಹಾಗೂ ಮಹಾರಾಷ್ಟ್ರದ ಶಿವಸೇನಾ ಮುಖಂಡರು ಪ್ರತಿಭಟನೆ ನಡೆಸಿದ್ದರು. ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿ ಎಂಇಎಸ್‌ ಹಾಗೂ ಶಿವಸೇನೆ ಒಂದಾಗಿ ತನ್ನ ಹಳೆಯ ಚಾಳಿಯನ್ನು ಮುಂದುವರಿಸುತ್ತಲೇ ಇದೆ. ಆದರೂ ಇದಕ್ಕೆ ಈವರೆಗೆ ಬ್ರೇಕ್ ಬಿದ್ದಿಲ್ಲ.

ಕೊಟ್ಟ ಮಾತಿಗೆ ತಪ್ಪಿದ ಮಹಾರಾಷ್ಟ್ರ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮರಾಠಿಗರ ರಕ್ಷಣೆಯ ನೇತಾರರು’ ಎಂದು ಹೇಳಿಕೊಳ್ಳುವ ಎಂಇಎಸ್ ಬೆಳಗಾವಿಯಲ್ಲಿ ತನ್ನ ಹುಚ್ಚಾಟದ ಮೂಲಕ ದೇಶದ ಜನತೆಯ ಮುಂದೆ ನಗೆಪಾಟಲಿಗೀಡಾಗುತ್ತಿದ್ದರೂ ಬುದ್ಧಿ ಬಂದಂತೆ ಕಾಣುತ್ತಿಲ್ಲ‌.

1966ರಲ್ಲಿ ಕೊಟ್ಟ ಮಾತಿಗೆ ತಪ್ಪಿ ನಡೆದಿದ್ದ ಮಹಾರಾಷ್ಟ್ರವು ಗಡಿ ವಿಷಯವಾಗಿ ಮರಾಠಿಗರನ್ನು ಭಾವನಾತ್ಮಕವಾಗಿ ಕೆರಳಿಸಿ ಬೆಳಗಾವಿ ಗಡಿ ವಿಷಯವನ್ನು ತನ್ನ ಓಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ.

ಸ್ವಾತಂತ್ರ್ಯ ನಂತರ ರಾಜ್ಯಗಳನ್ನು ಭಾಷೆಯ ಆಧಾರದಲ್ಲಿ ವಿಂಗಡಿಸಲು 1953 ಡಿಸೆಂಬರ್ 22ರಂದು ಕೇಂದ್ರ ಸರ್ಕಾರವು ನೇಮಿಸಿದ್ದ ಫಝಲ್ ಅಲಿ ಅವರ ನೇತೃತ್ವದ ರಾಜ್ಯಗಳ ಪುನರ್ ವಿಂಗಡನಾ ಆಯೋಗ 1955 ಡಿಸೆಂಬರ್ 14ರಂದು ನೀಡಿದ ವರದಿಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಿತ್ತು. ಈ ವರದಿಯ ಅನ್ವಯ ಆಗಿನ ಬಾಂಬೆ ಪ್ರಾಂತ್ಯದ ಭಾಗವಾಗಿದ್ದ ಬೆಳಗಾವಿ ಕರ್ನಾಟಕಕ್ಕೆ ಸೇರಿತು. ಅಂದಿನಿಂದ ಮಹಾರಾಷ್ಟ್ರದ ರಾಜಕಾರಣಿಗಳು ಬೆಳಗಾವಿ ಗಡಿ ವಿಷಯವನ್ನು ವೋಟ್ ಬ್ಯಾಂಕ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಲೇ ಬಂದಿದ್ದಾರೆ.

WhatsApp Image 2024 12 12 at 6.04.27 PM

ಬೆಳಗಾವಿ ಕರ್ನಾಟಕದ ಭಾಗವಾದ ಬಳಿಕ ಮಹಾರಾಷ್ಟ್ರವು ಗಡಿ ತಕರಾರು ಇತ್ಯರ್ಥಗೊಳಿಸಬೇಕು ಎಂದು ಹೋರಾಟವನ್ನು ಪ್ರಾರಂಭ ಮಾಡಿತು.

ಮಹಾರಾಷ್ಟ್ರದ ನಾಯಕ ಸೇನಾಪತಿ ಬಾಪಟ್ ಅಮರಣಾಂತ ಉಪವಾಸ ಕೈಗೊಂಡ ಕಾರಣ ಮಹಾರಾಷ್ಟ್ರದಲ್ಲಿ ಹೋರಾಟ ತೀವ್ರಗೊಂಡು ಅಂದಿನ ಕೇಂದ್ರ ಸರ್ಕಾರ 1966ರ ಅಕ್ಟೋಬರ್ ತಿಂಗಳಲ್ಲಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಪಂಜಾಬ ಮೂಲದ ಮೆಹರ್ ಚಂದ್ ಮಹಾಜನ್ ನೇತೃತ್ವದಲ್ಲಿ ಆಯೋಗ ರಚನೆ ಮಾಡಿತು. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ವಿ.ಪಿ.ನಾಯಕ್ ಅವರು ಮಹಾಜನ್ ಆಯೋಗದ ವರದಿಯಲ್ಲಿ ಏನೇ ಇದ್ದರೂ ಮಹಾರಾಷ್ಟ್ರ ಸರ್ಕಾರ ಅದಕ್ಕೆ ಬದ್ಧವಾಗಿರಲಿದೆ ಎಂದು ಮಾತು ಕೊಟ್ಟಿದ್ದರು. ಆದರೆ ಮಹಾಜನ್ ಆಯೋಗವು ಗಡಿ ಪ್ರದೇಶದ ಗ್ರಾಮಗಳಲ್ಲಿ ಅಧ್ಯಯನ ಮಾಡಿ 1967ರ ಆಗಸ್ಟ್ ತಿಂಗಳಿನಲ್ಲಿ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು.

ಈ ಮಹಾಜನ್ ವರದಿಯ ಅನ್ವಯ 247 ಹಳ್ಳಿಗಳು ಸೇರಿದಂತೆ ಬೆಳಗಾವಿ ಕೂಡ ಕರ್ನಾಟಕಕ್ಕೆ ಸೇರಬೇಕು ಹಾಗೂ ಬೆಳಗಾವಿ, ಖಾನಾಪೂರ, ಚಿಕ್ಕೋಡಿ, ಹುಕ್ಕೇರಿ, ನಿಪ್ಪಾಣಿ ತಾಲೂಕುಗಳ ಒಟ್ಟು 214 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ವರದಿಯನ್ನು ನೀಡಿದಾಗ ಕರ್ನಾಟಕ ಸರ್ಕಾರ ಮಹಾಜನ ಆಯೋಗದ ವರದಿಯನ್ನು ಒಪ್ಪಿಕೊಂಡಿತು. ಆದರೆ ಮಹಾಜನ್ ವರದಿಯಲ್ಲಿ ಏನೇ ಇದ್ದರೂ ಒಪ್ಪಿಕೊಳ್ಳುವುದಾಗಿ ಹೇಳಿದ್ದ ಮಹಾರಾಷ್ಟ್ರವು ಮಹಾಜನ್ ಆಯೋಗದ ವರದಿಯನ್ನು ತಿರಸ್ಕರಿಸಿ, ಕೊಟ್ಟ ಮಾತಿಗೆ ತಪ್ಪಿ ನಡೆದು ದೇಶದ ಜನತೆಯ ಮುಂದೆ ವಚನ ಭ್ರಷ್ಟರಾಗಿ ನಿಲ್ಲುವಂತಾಯಿತು. ಅಂದಿನಿಂದ ಇಂದಿನವರೆಗೂ ಎಂಇಎಸ್ ತನ್ನ ಮೊಂಡುವಾದದ ಮೂಲಕ ಗಡಿ ತಕರಾರು ತೆಗೆದು ಗಡಿ ಭಾಗದ ಕನ್ನಡ ಮತ್ತು ಮರಾಠಿ ಭಾಷಿಕರ ನಡುವಿನ ಸಾಮರಸ್ಯವನ್ನು ಹಾಳು ಮಾಡಿ ತನ್ನ ರಾಜಕೀಯ ಬೆಳೆಯನ್ನು ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಬೆಳಗಾವಿಯಲ್ಲಿ ರಾಜಕೀಯ ಅಸ್ತಿತ್ವ ಕಳೆದುಕೊಂಡ ಎಂಇಎಸ್

1962ರ ಕರ್ನಾಟಕ ವಿಧಾನ ಸಭೆಗೆ ಬೆಳಗಾವಿ ಜಿಲ್ಲೆಯ ಖಾನಾಪೂರ, ನಿಪ್ಪಾಣಿ ಹಾಗೂ ಬೆಳಗಾವಿಯ ಮೂರು ವಿಧಾನ ಕ್ಷೇತ್ರಗಳಲ್ಲಿ 5 ಜನ ಎಂಇಎಸ್ ಶಾಸಕರು ಆಯ್ಕೆಯಾಗಿದ್ದರು. 1999ರ ನಂತರದ ವಿಧಾನಸಭಾ ಚುನಾವಣೆಗಳಲ್ಲಿ ಎಂಇಎಸ್ ಬೆಳಗಾವಿ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಾ ಬಂದಿದ್ದು,ಕರಾಳ ದಿನಾಚರಣೆ ಮತ್ತು ಮಹಾ ಮೇಳಾವ್ ಮೂಲಕ ತನ್ನ ರಾಜಕೀಯ ಅಸ್ತಿತ್ವವನ್ನು ಹೊಂದಲು ನಾಡದ್ರೋಹ ಕೆಲಸದ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಬೆಗವಿ

ಈ ಕುರಿತು ಈ ದಿನ.ಕಾಮ್ ಜೊತೆ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಮಾತನಾಡಿ, “ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಕೆಲವು ಎಂಇಎಸ್ ನಾಯಕರು ರಾಜಕೀಯ ಲಾಭಕ್ಕಾಗಿ ಗಡಿ ವಿಷಯ ಬಳಸಿಕೊಳ್ಳುತ್ತಿದ್ದಾರೆ ಜಿಲ್ಲೆಯ ಕೆಲವು ರಾಜಕಾರಣಿಗಳು ಮರಾಠಿಗರ ಮತಕ್ಕಾಗಿ ಅವರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಅಧಿವೇಶನದಲ್ಲಿ ಆಗಬೇಕಾದ್ದೇನು | ಮರಾಠಿ ಮುಂದೆ ಮುಂದೆ, ಕನ್ನಡ ತೀರಾ ಹಿಂದೆ; ಗಡಿನಾಡಲ್ಲಿ ಕನ್ನಡ ಅವಸ್ಥೆ ಶೋಚನೀಯ

ಗಡಿನಾಡು ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಆದರೆ, ಗಡಿವಿವಾದವು ಚರ್ಚೆಯಾಗಬೇಕಿದೆ. ಜೊತೆಗೆ, ರಾಜ್ಯ ಸರ್ಕಾರವು ಈ ಚಳಿಗಾಲದ ಅಧಿವೇಶನದಲ್ಲಿ ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ಬೆಳಗಾವಿ ಗಡಿಭಾಗದ ಜನತೆಯ ಆಶಯವಾಗಿದೆ.

ಡಿ. 9ರಿಂದ 20 ವರೆಗೆ ನಿಷೇಧಾಜ್ಞೆ ಜಾರಿ

ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಅವರು ಈ ಭಾಗದಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 9 ರಿಂದ 20 ವರೆಗೆ ಅಂದರೆ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...