ಬೆಳಗಾವಿ | ಮಹಾ ಕುಂಭಮೇಳದ ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಬಿಡುಗಡೆ

Date:

ಪ್ರಯಾಗ್​ರಾಜ್ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ದುರ್ಮರಣ ಹೊಂದಿದ ಬೆಳಗಾವಿಯ ನಾಲ್ವರ ಕುಟುಂಬಸ್ಥರಿಗೆ ಉತ್ತರಪ್ರದೇಶ ಸರ್ಕಾರ ತಲಾ ₹25 ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಪ್ರಯಾಗ್‌ರಾಜ್ ಜಿಲ್ಲಾಧಿಕಾರಿ ರವಿ ಮಂದರ್ ಅವರ ಜತೆಗೆ ಮಾತುಕತೆ ನಡೆಸಿ ಮೃತರಾದ ಜ್ಯೋತಿ ಹತ್ತರವಾಟ, ಮೇಘಾ ಹತ್ತರವಾಟ, ಮಹಾದೇವಿ ಬಾವನೂರ, ಅರುಣ ಕೋಪರ್ಡೆ‌ ಅವರ ಕುಟುಂಬಸ್ಥರ ಖಾತೆಗಳಿಗೆ ನೇರವಾಗಿ ಪರಿಹಾರ ಧನ ಜಮೆಯಾಗಿದೆ. ನಾವು ಗ್ರಾಮಲೆಕ್ಕಾಧಿಕಾರಿ ಮೂಲಕ ಪರಿಶೀಲಿಸಿದ್ದೇವೆ” ಎಂದರು.

“ಮೃತದೇಹಗಳ ವರದಿಯಲ್ಲಿ ಒಂದಿಬ್ಬರ ಹೆಸರಿನಲ್ಲಿ ಅಕ್ಷರದೋಷ ಕಂಡು ಬಂದಿರುವ ಕುರಿತು ಮೃತರ ಕುಟುಂಬಸ್ಥರು ತಿಳಿಸಿದ್ದರು. ಹಾಗಾಗಿ, ಅದನ್ನು ಅನುಮೋದಿಸಿ, ಸರಿಪಡಿಸಿ ಹೆಸರುಗಳನ್ನು ಪ್ರಯಾಗ್‌ರಾಜ್ ಜಿಲ್ಲಾಧಿಕಾರಿಗಳಿಗೆ ವಾಟ್ಸ್​ಆ್ಯಪ್​ ಮತ್ತು ಮೇಲ್ ಮೂಲಕ ಕಳಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಮರಣೋತ್ತರ ವರದಿ ಮತ್ತು ಮರಣ ಪ್ರಮಾಣಪತ್ರವನ್ನು ಕಳುಹಿಸಿಕೊಡುವ ಬಗ್ಗೆ ಪ್ರಯಾಗ್​ರಾಜ್ ಜಿಲ್ಲಾಡಳಿತ ನಮಗೆ ಭರವಸೆ ನೀಡಿದೆ” ಎಂದು ಮೊಹಮ್ಮದ್ ರೋಷನ್ ಇದೇ ವೇಳೆ ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಎರಡು ಬಸ್​ಗಳಲ್ಲಿ ಬೆಳಗಾವಿಯ 60 ಮಂದಿ ಜನವರಿ 26ರಂದು ಪ್ರಯಾಗ್​ರಾಜ್‌ಗೆ ತೆರಳಿದ್ದರು. ಇವರಲ್ಲಿ ನಾಲ್ವರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಉಳಿದ 56 ಮಂದಿ ಸುರಕ್ಷಿತವಾಗಿರುವುದಾಗಿ ಅಂದೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ದಿಗಂತ್ ನಾಪತ್ತೆ ಪ್ರಕರಣ: ಬಿಜೆಪಿ ಶಾಸಕ ಭರತ್ ಶೆಟ್ಟಿ, ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

“ಟ್ರಾವೆಲ್ಸ್‌ನವರು​ ಊಟ, ಉಪಹಾರ ಸೇರಿ ಎಲ್ಲ ವ್ಯವಸ್ಥೆಯನ್ನು ಒಳ್ಳೆಯ ರೀತಿ ಮಾಡಿದ್ದಾರೆ‌. ನಮ್ಮ ವಾಹನ ಪ್ರಯಾಗ್​ರಾಜ್‌ನಿಂದ 30-40 ಕಿಮೀ ದೂರದಲ್ಲಿತ್ತು. ಹಾಗಾಗಿ, ಗುಂಪುಗಳನ್ನಾಗಿ ವಿಂಗಡಿಸಿ 2 ಗಂಟೆಯೊಳಗೆ ನದಿಯಲ್ಲಿ ಸ್ನಾನ ಮಾಡಿ ಬರುವಂತೆ ತಿಳಿಸಿದ್ದರು‌‌. ಅದೇ ರೀತಿ ಬ್ರಾಹ್ಮಿ ಮುಹೂರ್ತದಲ್ಲಿ ಸ್ನಾನಕ್ಕೆಂದು 9 ಜನರ ಗುಂಪು ತೆರಳಿತ್ತು. ಆ ವೇಳೆ ಏಕಾಏಕಿ ಕಾಲ್ತುಳಿತ ಉಂಟಾಗಿ ನಾಲ್ಕು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಾಯಿರಥ ಟ್ರಾವೆಲ್ಸ್‌​ನವರದ್ದು ಯಾವುದೇ ತಪ್ಪಿಲ್ಲ, ಸುರಕ್ಷಿತವಾಗಿ ಹೋಗಿ ವಾಪಸ್​ ಬಂದು ಬಸ್‌ ಹತ್ತುವಂತೆ ಅವರು ಮೊದಲೇ ನಮಗೆ ತಿಳಿಸಿದ್ದರು” ಎಂದು 56 ಜನರಿದ್ದ ತಂಡ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿತ್ತು.

ಆರಂಭದಲ್ಲಿ ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ(50) ಮತ್ತು ಪುತ್ರಿ ಮೇಘಾ ಹತ್ತರವಾಟ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದಾದ ಬಳಿಕ ಪತ್ನಿ ಜತೆಗೆ ಪ್ರಯಾಗ್​ರಾಜ್‌ಗೆ ತೆರಳಿದ್ದ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಮೃತಪಟ್ಟಿರುವ ಮಾಹಿತಿ ಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...