ಬೆಳಗಾವಿ | ನಿಯಮ ಮೀರಿ ಪ್ಲಾಸ್ಟಿಕ್ ಬಳಸಿದರೆ ಅಂಗಡಿಗಳ ಪರವಾನಗಿ ರದ್ದು: ಸುಭಾಷ್ ಆಡಿ ಎಚ್ಚರಿಕೆ

Date:

ನಿಯಮ ಮೀರಿ ಪ್ಲಾಸ್ಟಿಕ್ ಬಳಸಿದರೆ ಅಂಗಡಿಗಳ ಪರವಾನಗಿ(ಲೈಸೆನ್ಸ್) ರದ್ದು ಮಾಡಲಾಗುವುದು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ್ ಆಡಿ ಹೇಳಿದರು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಜಿಲ್ಲಾಮಟ್ಟದ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿ, “ತಮ್ಮ ವ್ಯಾಪ್ತಿಯ ಜನಸಂಖ್ಯೆ ಹಾಗೂ ಸಂಗ್ರಹವಾಗುವ ತ್ಯಾಜ್ಯದ ಮಾಹಿತಿ ಸ್ಥಳೀಯ ಸಂಸ್ಥೆಗಳಿಗೆ ತಿಳಿದಿರಬೇಕು. ತ್ಯಾಜ್ಯ ವಿಲೇವಾರಿಗೆ ಸ್ವಚ್ಛ ಭಾರತ್ ಮಿಷನ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು”‌ ಎಂದರು.

“ಪ್ಲಾಸ್ಟಿಕ್‌ ಬಳಕೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿದ್ದು, ನಿಯಮ ಮೀರಿ ಪ್ಲಾಸ್ಟಿಕ್‌ ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಕೆ ಕಂಡುಬಂದರೆ ಅಂಗಡಿಗಳ ಪರವಾನಗಿಯನ್ನೇ ರದ್ದುಗೊಳಿಸಬೇಕು. ಪ್ಲಾಸ್ಟಿಕ್, ಇ–ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಕಾಲೇಜುಗಳಲ್ಲಿ ಗ್ರೀನ್ ಕ್ಯಾಂಪಸ್‌ ನಿರ್ಮಾಣಕ್ಕೆ ಉತ್ತೇಜಿಸಬೇಕು. ದೇವಸ್ಥಾನಗಳಲ್ಲೂ ಸ್ವಚ್ಛತೆ ಬಗ್ಗೆ ತಿಳಿವಳಿಕೆ ಮೂಡಿಸಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಪ್ರತಿ ಮನೆಯಿಂದಲೇ ಹಸಿ ಹಾಗೂ ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಣೆ ಮಾಡುವಂತೆ ಕ್ರಮ ವಹಿಸಬೇಕು” ಎಂದು ಹೇಳಿದರು.

“ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಸರಿಯಾಗಿ ಕೈಗೊಳ್ಳಲು ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಮರುಬಳಕೆ ಆಗಬಹುದಾದ ತ್ಯಾಜ್ಯದಿಂದಲೂ ಆದಾಯ ಗಳಿಸುವತ್ತ ಸ್ಥಳೀಯ ಸಂಸ್ಥೆಗಳು ಗಮನ ಹರಿಸಬೇಕು” ಎಂದು ಸುಭಾಷ್ ಆಡಿ ಸೂಚಿಸಿದ್ದಾರೆ‌.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ವಿದ್ಯಾರ್ಜನೆ ಬಾಲ್ಯವಿವಾಹ ತಡೆಗೆ ದಾರಿ: ಆರ್ ಕೆ ಸರ್ದಾರ್

ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ‌ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...