ಬೆಳಗಾವಿ | ನವಜಾತ ಶಿಶುವನ್ನು ಬಿಸಾಡಿದ್ದ ಪ್ರಕರಣ; ಪ್ರೇಮಿಗಳ ವಿರುದ್ಧ ಕೊಲೆ ಪ್ರಕರಣ ದಾಖಲು

Date:

ನವಜಾತ ಶಿಶುವನ್ನು ತಿಪ್ಪೆಗುಂಡಿ ಬಳಿ ಬಿಸಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊದಲ ಬಾರಿಗೆ ಪ್ರೇಮಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಾಬಳೇಶ ಕಾಮೋಜಿ ಹಾಗೂ ಸಿಮ್ರಾನ್​ ಮಾಣಿಕಬಾಯಿ ಬಂಧಿತರು ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಅನೇಕ ಕಡೆ ನವಜಾತ ಶಿಶುಗಳ ಪತ್ತೆ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿದ್ದು, ಹೆತ್ತವರೇ ತಿಪ್ಪೆಗುಂಡಿ, ರಸ್ತೆ ಹಾಗೂ ನಿರ್ಜನ ಪ್ರದೇಶದಲ್ಲಿ ಶಿಶುಗಳನ್ನು ಬಿಸಾಡಿ ಹೋಗುತ್ತಿದ್ದಾರೆ. ಇದೇ ರೀತಿ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಮನೆಯೊಂದರ ಪಕ್ಕದ ತಿಪ್ಪೆಗುಂಡಿಯಲ್ಲಿ ಇದೇ ಮಾರ್ಚ್‌ 5ರಂದು ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬಡಗಟ್ಟಿ ಗ್ರಾಮದ ಮಹಾಬಳೇಶ ಕಾಮೋಜಿ ಹಾಗೂ ಸಿಮ್ರಾನ್​ ಮಾಣಿಕಬಾಯಿ ಎಂಬ ಯುವಕ, ಯುವತಿ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಸ್ವಲ್ಪ ದಿನದಲ್ಲಿಯೇ ಸಲುಗೆ ಬೆಳೆದಿದ್ದು, ಇಬ್ಬರೂ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಕಳೆದ ವರ್ಷ ಸಿಮ್ರಾನ್​ ಗರ್ಭಿಣಿಯಾಗಿದ್ದು, ಆಕೆ ದಪ್ಪ ಇದ್ದಿದ್ದರಿಂದ ಈ ವಿಚಾರ ಯಾರಿಗೂ ಗೊತ್ತಾಗಿರಲಿಲ್ಲ. ಮಾರ್ಚ್ 5ರಂದು ಸಿಮ್ರಾನ್​ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮನೆಯ ಬಾತ್​ ರೂಂನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಯಾರಿಗೂ ಗೊತ್ತಾಗದ ರೀತಿಯಲ್ಲಿ ಮಗುವನ್ನು ತಿಪ್ಪೆಗುಂಡಿಯ ಬಳಿ ಬಿಸಾಡಲಾಗಿತ್ತು. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಕಿತ್ತೂರು ಪೊಲೀಸರು ಈ ಬಗ್ಗೆ ತನಿಖೆ ಶುರು ಮಾಡಿದ್ದರು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಡಾ.ಭೀಮಾಶಂಕರ ಗುಳೇದ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನವಜಾತ ಶಿಶುವಿನ ತಲೆಗೆ ಗಾಯವಾಗಿ, ಮೃತಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿಯೂ ಈ ಬಗ್ಗೆ ವೈದ್ಯರು ಉಲ್ಲೇಖಿಸಿದ್ದರು. ಪ್ರಕರಣ ಬೆನ್ನಟ್ಟಿದ ಪೊಲೀಸರು ಅಕ್ಕಪಕ್ಕದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಗರ್ಭಿಣಿಯರು ಚಿಕಿತ್ಸೆ ಪಡೆದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಬಳಿಕ ಅನುಮಾನದ ಮೇಲೆ ಸಿಮ್ರಾನ್​ನನ್ನು​ ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬಯಲಾಗಿದೆ” ಎಂದರು.

“ಕಳೆದ ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಸಿಮ್ರಾನ್​ ಹಾಗೂ ಮಹಾಬಳೇಶ ಮಗುವಿಗೆ ಜನ್ಮ ನೀಡಿದ್ದರು. ಇಬ್ಬರು ಅಂಬಡಗಟ್ಟಿಯ ಒಂದೇ ಓಣಿಯ ನಿವಾಸಿಗಳಿದ್ದಾರೆ. ಜತೆಗೆ ಬೇರೆ ಬೇರೆ ಧರ್ಮೀಯರಾಗಿರುವ ಕಾರಣ ಕೃತ್ಯವನ್ನು ಮುಚ್ಚಿಡಲು ಯತ್ನಿಸಿದ್ದರು. ಇದು ಯಾರಿಗೂ ಗೊತ್ತಾಗಬಾರದೆಂದು ಈ ರೀತಿ ಮಾಡಿದ್ದರು. ಹೆರಿಗೆ ಸಂದರ್ಭದಲ್ಲಿ ಸಿಮ್ರಾನ್‌, ಮಹಾಬಳೇಶ್ ಜತೆಗೆ ವಿಡಿಯೋ ಕಾಲ್​ನಲ್ಲಿ ಮಾತನಾಡಿದ್ದರು” ಎಂದು ಮಾಹಿತಿ ನೀಡಿದರು.

ರಾಜ್ಯದ ಅನೇಕ ಕಡೆಗಳಲ್ಲಿ ನವಜಾತ ಶಿಶುಗಳು ಪತ್ತೆ ಆಗುತ್ತವೆ. ಆದದೆ ಇದಕ್ಕೆ ಯಾವುದೇ ತಾರ್ಕಿಕ ಅಂತ್ಯ ಸಿಗುವುದಿಲ್ಲ. ಆದರೆ, ಅಂಬಡಗಟ್ಟಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರ ಮೇಲೆ ಕೊಲೆ ಪ್ರಕರಣವನ್ನೂ ದಾಖಲು ಮಾಡಿದ್ದಾರೆ. ಇದೀಗ ಇಬ್ಬರನ್ನೂ ಜೈಲಿಗೆ ಕಳುಹಿಸಲಾಗಿದೆ” ಎಂದು ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ವಿಜಯಪುರ | ‌ʼಶೋಷಣೆ ರಹಿತ ಸಮಾಜದ ಕನಸು ಕಂಡಿದ್ದವರು ಭಗತ್‌ಸಿಂಗ್ʼ

“ಇನ್ನೆರೆಡು ತಿಂಗಳಲ್ಲಿ ಸಿಮ್ರಾನ್​ ಮದುವೆ ಮಾಡಲು ಪೋಷಕರು ತಯಾರಿ ನಡೆಸಿದ್ದರು ಎನ್ನುವುದು ಗೊತ್ತಾಗಿದೆ. ಇಬ್ಬರೂ ಪ್ರೀತಿಸುತ್ತಿದ್ದರು. ದೈಹಿಕ ಸಂಪರ್ಕ ಬೆಳೆಸಿದ್ದು, ಅವರ ಸ್ವಇಚ್ಛೆ. ಆದರೆ, ಪ್ರಪಂಚವನ್ನೇ ನೋಡದಿರುವ ಶಿಶುವನ್ನು ಧಾರುಣವಾಗಿ ಹತ್ಯೆ ಮಾಡಿದ್ದು ಮಾತ್ರ ಮಹಾಪಾಪ. ಇಂಥ ಪ್ರಕರಣಗಳಲ್ಲಿ ಸಾಮಾನ್ಯವಾಗಿ ತಾಯಿ ಪತ್ತೆ ಹಚ್ಚುವುದು ಬಹಳ ಕಷ್ಟ. ಆದರೆ, ಕಿತ್ತೂರು ಪೊಲೀಸರು ತುಂಬಾ ಶ್ರಮವಹಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಇದು ದುರಾದೃಷ್ಟ ಪ್ರಕರಣವಾದರೂ ಕೂಡ ಆ ಮುಗ್ದ ಮಗುವಿನ ಸಾವಿಗೆ ಪೊಲೀಸರು ನ್ಯಾಯ ಒದಗಿಸಿದ್ದಾರೆ” ಎಂದು ಡಾ.ಭೀಮಾಶಂಕರ ಗುಳೇದ ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...