ಬೆಳಗಾವಿ | ಕುಡಿಯುವ ನೀರಿನ ಸಮಸ್ಯೆ ಉಲ್ಬಣ; ಕೊಳವೆಬಾವಿ ಕೊರೆಸಲು ಶಾಸಕ ಪಾಟೀಲ್‌ ನಿರ್ಧಾರ

Date:

  • ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನೀರು ಪೂರೈಕೆಗೆ ಮುಂದಾದ ಶಾಸಕ
  • ‘ಸ್ಮಾರ್ಟ್ ಸಿಟಿ’ ಟ್ಯಾಗ್ ಹೊಂದಿದ್ದರೂ, ಬೆಳಗಾವಿಯಲ್ಲಿ ಉಂಟಾದ ನೀರಿನ ಕೊರತೆ

ಬೇಸಿಗೆ ಆರಂಭದಲ್ಲಿ ನೀರು ಸರಬರಾಜಿನಲ್ಲಿ ಉಂಟಾಗಿರುವ ಅಡೆತಡೆಗಳನ್ನು ನಿವಾರಿಸಲು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ವಿಭಿನ್ನ ಪರಿಹಾರ ಕೈಗೊಂಡಿದ್ದು, ತಮ್ಮ ಕ್ಷೇತ್ರದಲ್ಲಿ 73 ಕೊಳವೆಬಾವಿಗಳನ್ನು ಕೊರೆಸಲು ಮುಂದಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ತೀವ್ರವಾಗಿ ಹದಗೆಟ್ಟಿದೆ. ಅನೇಕ ಪ್ರದೇಶಗಳಲ್ಲಿ ಹದಿನೈದು ದಿನಗಳಿಗೊಮ್ಮೆ ನಲ್ಲಿ ನೀರು ಬರುತ್ತಿದೆ. ಇದರಿಂದ ಸ್ಥಳೀಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನೀರು ಪೂರೈಕೆ ವ್ಯವಸ್ಥೆಗಾಗಿ ಶಾಸಕ ಪಾಟೀಲ್ ಕೊಳವೆಬಾವಿಗಳನ್ನು ಕೊರೆಸಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಹೃದಯಭಾಗದಲ್ಲಿರುವ ಬಹುತೇಕ ಐಷಾರಾಮಿ ಪ್ರದೇಶಗಳಲ್ಲಿಯೂ ನೀರಿನ ಸಮಸ್ಯೆ ತೀವ್ರವಾಗಿದ್ದು, 5 ರಿಂದ 7 ದಿನಗಳಿಗೊಮ್ಮೆ ನೀರಿನ ಪೂರೈಕೆಯಾಗುತ್ತಿದೆ.

“ನೀರು ಪೂರೈಕೆ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಿರುವುದು ಎಲ್ಲರಿಗೂ ತಿಳಿದಿದೆ. ಎರಡು ದಶಕಗಳ ಹಿಂದೆ, ರೆಕಾಸ್ಕೋಪ್ ಅಣೆಕಟ್ಟಿನಿಂದ ನಗರಕ್ಕೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಈಗ ಹಿಡಕಲ್ ಅಣೆಕಟ್ಟನ್ನು ಸೇರಿಸಲಾಗಿದೆ. 2032ರವರೆಗೆ ನಗರದ ನಿವಾಸಿಗಳಿಗೆ ವಾರದ 24 ಗಂಟೆಯೂ ನೀರು ಪೂರೈಕೆ ಮಾಡಲು ಹಿಡಕಲ್ ಅಣೆಕಟ್ಟು ಯೋಜನೆ ಜಾರಿಗೆ ತರಲಾಗಿದೆ” ಎಂದು ಶಾಸಕ ಪಾಟೀಲ್‌ ತಿಳಿಸಿದ್ದಾರೆ.

“ನೀರಿನ ಸಮಸ್ಯೆ ಮಾತ್ರವಲ್ಲ, ಕಳೆದ ಎರಡು ದಶಕಗಳಿಂದ ಚಾನಲ್‌ ನೀರು ಪೂರೈಕೆ ಕೂಡ ಸುಧಾರಿಸಿಲ್ಲ. ಹೀಗಾಗಿ, ‘ಸ್ಮಾರ್ಟ್ ಸಿಟಿ’ ಟ್ಯಾಗ್ ಹೊಂದಿದ್ದರೂ, ಬೆಳಗಾವಿಯಲ್ಲಿ ಭಾರೀ ನೀರಿನ ಕೊರತೆ ಉಂಟಾಗಿದೆ. ಎಲ್‌ ಆ್ಯಂಡ್‌ ಟಿ ಸಂಸ್ಥೆ ಸಮರ್ಪಕವಾಗಿ ನೀರು ಪೂರೈಕೆ ಮಾಡದ ಕಾರಣ ಸಮಸ್ಯೆ ಉದ್ಭವಿಸಿದೆ” ಎಂದು ಶಾಸಕ ಅಭಯ್ ಪಾಟೀಲ್ ತಿಳಿಸಿದ್ದಾರೆ.

“ನಗರಕ್ಕೆ ಸಮರ್ಪಕ ನೀರು ಪೂರೈಕೆ ಮಾಡುವುದು ಎಲ್‌ ಆ್ಯಂಡ್‌ ಟಿ ಜವಾಬ್ದಾರಿಯಾಗಿದೆ. ನೀರು ಪೂರೈಕೆ ಚಾನಲ್‌ಗೆ ಯಾವುದೇ ಸಮಸ್ಯೆ ಇದ್ದರೆ, ಕಂಪನಿಯು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಬೇಕು. ಆದರೆ, ಅದು ಹಾಗೆ ಮಾಡುತ್ತಿಲ್ಲ. ಇದಲ್ಲದೆ, ನಿರ್ವಹಣೆಗೆ ಸಂಬಂಧಿಸಿದಂತೆ ಸಂಸ್ಥೆಗೆ ಅನೇಕ ಸಮಸ್ಯೆಗಳಿವೆ. ಹಾಗಾಗಿ ನಗರದಲ್ಲಿ ನೀರಿನ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ” ಎಂದು ಹೇಳಿದ್ದಾರೆ.

“ನಗರದಲ್ಲಿ ಹೆಚ್ಚುತ್ತಿರುವ ನೀರು ಸರಬರಾಜಿನ ಅಡೆತಡೆಗಳ ಬಗ್ಗೆ ಚರ್ಚಿಸಲು ಎಲ್‌ ಆ್ಯಂಡ್‌ ಟಿ, ನಗರಾಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮ (ಕೆಯುಐಡಿಎಫ್ ಸಿ) ಅಧಿಕಾರಿಗಳೊಂದಿಗೆ ಶುಕ್ರವಾರ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ” ಎಂದು ಶಾಸಕ ಪಾಟೀಲ್ ತಿಳಿಸಿದ್ದಾರೆ.

“ಸಭೆಯಲ್ಲಿ ಈ ವಿಷಯಗಳ ಬಗ್ಗೆ ವಿವರವಾಗಿ ಚರ್ಚಿಸಲಾಗುವುದು. ನಗರಾಭಿವೃದ್ಧಿ ಇಲಾಖೆಯು ಎಲ್‌ ಆ್ಯಂಡ್‌ ಟಿ ಜೊತೆಗಿನ ಒಪ್ಪಂದವನ್ನು ರದ್ದುಗೊಳಿಸಿ, ಕಂಪನಿಗೆ ದಂಡ ವಿಧಿಸಬೇಕು. ನೀರು ಪೂರೈಕೆ ಸೇವೆಗಳನ್ನು ಆದಷ್ಟು ಬೇಗ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಗೆ ಹಸ್ತಾಂತರಿಸಬೇಕು” ಎಂದು ಶಾಸಕ ಪಾಟೀಲ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...