ಬೆಳಗಾವಿ | ಒಂಬತ್ತು ತಿಂಗಳ ಗರ್ಭಿಣಿ ಕೊಲೆ

Date:

ಒಂಬತ್ತು ತಿಂಗಳ ಗರ್ಭಿಣಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.

ಚಿಕ್ಕೂಡ ನಿವಾಸಿ ಸುವರ್ಣಾ ಮಾಂತಯ್ಯ ಮಠಪತಿ(36) ಕೊಲೆಯಾದ ಗರ್ಭಿಣಿ. ಇವರು ಶುಕ್ರವಾರ ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು, ಮೇವು ತರಲೆಂದು ಹೊಲಕ್ಕೆ ಹೋಗಿದ್ದರು. ಮರಳಿ ಬರುವಾಗ ಮಾರ್ಗಮಧ್ಯೆ ದುಷ್ಕರ್ಮಿಗಳು ಇವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಹೊಟ್ಟೆ, ಮುಖ ಹಾಗೂ ತಲೆ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ರಕ್ತಸಿಕ್ತವಾಗಿ ಬಿದ್ದದ್ದ ಮಹಿಳೆಯನ್ನು ಕಂಡ ಜನರು, ಪತಿ ಮಾಂತಯ್ಯ ಅವರಿಗೆ ತಿಳಿಸಿದ್ದಾರೆ. ವಾಹನದಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಪ್ರಾಣ ಬಿಟ್ಟಿದ್ದರು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ನೆಲಮಂಗಲ | ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿ, 6 ಮಂದಿ ದಾರುಣ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಂತಯ್ಯ ಮತ್ತು ಸುವರ್ಣ ದಂಪತಿಗೆ ಈಗಾಗಲೇ ನಾಲ್ವರು ಹೆಣ್ಣುಮಕ್ಕಳಿದ್ದು, 5ನೇ ಮಗುವಿನ ನಿರೀಕ್ಷೆಯಲ್ಲಿದ್ದರು. ವೈದ್ಯರು ಜನವರಿ 30ಕ್ಕೆ ಹೆರಿಗೆ ದಿನಾಂಕ ನೀಡಿದ್ದರು. ಮಹಿಳೆ ಕೊಲೆ ಬಗ್ಗೆ ಯಾರ ಮೇಲೂ ಅನುಮಾನವಿಲ್ಲ ಎಂದು ಪತಿ ಹಾಗೂ ಸುವರ್ಣಾ ಅವರ ತಂದೆ-ತಾಯಿ ತಿಳಿಸಿದ್ದಾರೆ. ಅವರು ಏನಾದರೂ ದೂರು ನೀಡಿದರೆ ಕ್ರಮ ವಹಿಸಲಾಗುವುದು” ಎಂದು ಅಥಣಿ ಪೊಲೀಸರು ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...