ಬೆಳಗಾವಿ | ಕೋವಿಡ್-19 ಹಠಾತ್ ಏರಿಕೆ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

Date:

  • ಬೆಳಗಾವಿ ಜಿಲ್ಲೆಯ ಭಾನುವಾರ 14 ಕೋವಿಡ್-19 ಪ್ರಕರಣ ಪತ್ತೆ
  • ಕೋವಿಡ್‌ ಹೆಚ್ಚಳದಲ್ಲಿ ಬೆಳಗಾವಿ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ

ಕಳೆದ ಒಂದು ತಿಂಗಳಿನಿಂದ ಒಂದೇ ಒಂದು ಪ್ರಕರಣ ವರದಿಯಾಗದ ಕಾರಣ ಮತ್ತು ಯಾವುದೇ ಸಕ್ರಿಯ ಪ್ರಕರಣಗಳಿಲ್ಲದ ಕಾರಣ ಬೆಳಗಾವಿ ಜಿಲ್ಲೆಯನ್ನು ಕೋವಿಡ್ -19 ನಿಂದ ಸಂಪೂರ್ಣವಾಗಿ ಮುಕ್ತಗೊಳಿಸಲಾಗಿದೆ ಎಂದು ಫೆಬ್ರವರಿಯಲ್ಲಿ ಆರೋಗ್ಯ ಇಲಾಖೆ ಘೋಷಿಸಿತ್ತು. ಆದರೆ, ಶನಿವಾರ ಕೋವಿಡ್‌ನ ಹಠಾತ್ ಹೆಚ್ಚಳದಿಂದ ಜಿಲ್ಲೆಯ ಜನರಲ್ಲಿ ಭೀತಿ ಉಂಟಾಗಿದೆ.

ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ 19 ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಗಡಿ ತಾಲೂಕುಗಳಾದ ನಿಪ್ಪಾಣಿ ಮತ್ತು ಚಿಕ್ಕೋಡಿಯಲ್ಲಿ 15, ಬೆಳಗಾವಿ ನಗರದಲ್ಲಿ 2, ರಾಯಬಾಗ ಮತ್ತು ಸವದತ್ತಿ ತಾಲೂಕುಗಳಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ. ಬೆಂಗಳೂರು ನಗರ ಮತ್ತು ಶಿವಮೊಗ್ಗದ ನಂತರ ಬೆಳಗಾವಿ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ.

ಆರೋಗ್ಯ ಇಲಾಖೆ ಪ್ರಕಾರ, ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲೂಕಿನ ಅಕ್ಕೋಲ್, ಕೊಗನೊಳ್ಳಿ, ಸೌಂದಲಗಾ, ಮಂಗೂರು, ಜೈನಾಪುರ ಮತ್ತು ಇಂಗಳಿ ಗ್ರಾಮಗಳಲ್ಲಿ 15 ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ಪ್ರಕರಣಗಳ ಹಠಾತ್ ಹೆಚ್ಚಳದಿಂದ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ, ರೋಗಿಗಳನ್ನು ಮನೆಯಲ್ಲಿ ಪ್ರತ್ಯೇಕಿಸುವ ಮೂಲಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶನಿವಾರ ವರದಿಯಾದ ಒಟ್ಟು 19 ಪ್ರಕರಣಗಳಲ್ಲಿ 16 ಪ್ರಕರಣಗಳು ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿವೆ” ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಮಹೇಶ್ ಕೋಣಿ ತಿಳಿಸಿದ್ದಾರೆ.

“ಕಟ್ಟುನಿಟ್ಟಾದ ಹೋಮ್ ಐಸೋಲೇಷನ್ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆಹಚ್ಚುವ ಮೂಲಕ ನಾವು ಪ್ರತಿ ಪ್ರಕರಣವನ್ನು ಮೇಲ್ವಿಚಾರಣೆ ಮಾಡುತ್ತೇವೆ. ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಸಂಚರಿಸುವ ಜನರ ಮೇಲೆ ಕಣ್ಣಿಡಲು ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಹೇಳಿದರು.

“ಕೋವಿಡ್ -19 ಪ್ರಕರಣಗಳ ಹಠಾತ್ ಏರಿಕೆಯ ನಂತರ, ನಾವು ಭಾನುವಾರದಿಂದ ಜಿಲ್ಲೆಯಾದ್ಯಂತ ಪರೀಕ್ಷೆಗಳನ್ನು ದ್ವಿಗುಣಗೊಳಿಸಿದ್ದೇವೆ. ಮುಂಬರುವ ದಿನಗಳಲ್ಲಿ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಇತರ ಅಗತ್ಯ ವಿಷಯಗಳ ಜೊತೆಗೆ ಹೆಚ್ಚಿನ ಲಸಿಕೆಗಳು ಮತ್ತು ಮಾಸ್ಕ್‌ ಧರಿಸುವಂತೆ ಈಗಾಗಲೇ ತಿಳಿಸಿದ್ದೇನೆ” ಎಂದು ಡಾ. ಕೋನಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ದೇಶದಲ್ಲಿ ಒಂದೇ ದಿನ 4,435 ಮಂದಿಗೆ ಕೋವಿಡ್ ದೃಢ

“ಈವರೆಗೆ, ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಆತಂಕ ಪಡುವ ಅಗತ್ಯವಿಲ್ಲ. ಆದರೆ, ಆಗಾಗ್ಗೆ ಕೈಗಳನ್ನು ತೊಳೆಯುವ ಮೂಲಕ, ಜನದಟ್ಟಣೆಯ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವ ಮೂಲಕ ಕೋವಿಡ್‌ನ ಸೂಕ್ತ ಮುಂಜಾಗೃತ ಕ್ರಮ ಅನುಸರಿಸಬೇಕು” ಎಂದು ವೈದ್ಯರು ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ 14 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ವರದಿಯಾದ ಒಟ್ಟು ಪ್ರಕರಣಗಳಲ್ಲಿ 10 ಪ್ರಕರಣಗಳು ಸವದತ್ತಿ ತಾಲೂಕಿನಿಂದ, ಇಬ್ಬರು ಬೆಳಗಾವಿ ನಗರದಿಂದ ಮತ್ತು ಉಳಿದ ಇಬ್ಬರು ಚಿಕ್ಕೋಡಿ ಮತ್ತು ಖಾನಾಪುರದಿಂದ ಬಂದವರು. ಇದರೊಂದಿಗೆ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 36ಕ್ಕೆ ಏರಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...