ಬೆಳಗಾವಿ | ನೀರಿನ ಸಮಸ್ಯೆ; ಕಟ್ಟಡ ನಿರ್ಮಾಣಕ್ಕೂ ತಟ್ಟಿದ ಬಿಸಿ

Date:

ಬೆಳಗಾವಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಕೊರತೆಯಿಂದಾಗಿ ನಿರ್ಮಾಣ ಕಾರ್ಯಗಳಿಗೆ ಹೊಡೆತ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಲಾಶಯಗಳಲ್ಲಿ ನೀರಿನ ಮಟ್ಟವು ವೇಗವಾಗಿ ಕ್ಷೀಣಿಸುತ್ತಿರುವುದರಿಂದ ನೀರನ್ನು ನ್ಯಾಯಯುತವಾಗಿ ಬಳಸುವಂತೆ ಸ್ಥಳೀಯ ಆಡಳಿತವು ಸಾರ್ವಜನಿಕರನ್ನು ಒತ್ತಾಯಿಸಿದೆ. ದೈನಂದಿನ ನಿಗದಿತ ನೀರು ಸರಬರಾಜು ಕೂಡಾ ವಿಳಂಬವಾಗಿದೆ.

ರಕ್ಕಸಕೊಪ್ಪ ಜಲಾಶಯದ ನೀರನ್ನು ಬೇರೆ ಉದ್ದೇಶಕ್ಕೆ ಬಳಸದೆ ಬೆಳಗಾವಿ ನಗರಕ್ಕೆ ನೀರು ಪೂರೈಸಲು ಕಟ್ಟುನಿಟ್ಟಾಗಿ ಮೀಸಲಿಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಪಮಾನ ಹೆಚ್ಚುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಹಾಗಾಗಿ ಸರ್ಕಾರವು ಟ್ಯಾಂಕರ್ ನೀರನ್ನು ಒದಗಿಸಬೇಕೆಂಬ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಇಲ್ಲಿ ನೂರಾರು ನಿರ್ಮಾಣ ಹಂತದ ಕಟ್ಟಡಗಳಿವೆ. ಹಲವಾರು ನವೀಕರಣದ ಕಟ್ಟಡಗಳು ವಿವಿಧ ಹಂತಗಳಲ್ಲಿವೆ. ನೀರಿನ ಕೊರತೆಯಿಂದಾಗಿ ಇವುಗಳಲ್ಲಿ ಹೆಚ್ಚಿನವುಗಳ ಕೆಲಸ ಸ್ಥಗಿತಗೊಂಡಿದೆ. ಎಂಜಿನಿಯರ್‌ಗಳು ಮತ್ತು ಗುತ್ತಿಗೆ ಸಂಸ್ಥೆಗಳು ಈಗ ಗಡುವನ್ನು ಪೂರೈಸಲು ಬಳಕೆದಾರರಿಗೆ ಸಮಯಕ್ಕೆ ಸರಿಯಾಗಿ ಬಿಟ್ಟುಕೊಡಲು ಶ್ರಮಿಸುತ್ತಿದ್ದಾರೆ. ಆದರೆ ಟ್ಯಾಂಕರ್ ನೀರನ್ನು ಸಂಗ್ರಹಿಸಿ ಕಾಮಗಾರಿ ಡೆಸುತ್ತಿರುವುದರಿಂದ ಈ ಯೋಜನೆಗಳಿಗೆ ವೆಚ್ಚ ಹೆಚ್ಚಾಗಿದೆ.

“ನಿರ್ಮಾಣ ಕಾರ್ಯಗಳಿಗೆ ಬೋರ್‌ವೆಲ್ ಅಥವಾ ಟ್ಯಾಂಕರ್ ಮಾತ್ರ ನೀರಿನ ಮೂಲವಾಗಿ ಅನುಮತಿಸಲಾಗಿದೆ. ಪ್ರಸ್ತುತ, ಸ್ವಂತ ಕೊಳವೆಬಾವಿಗಳನ್ನು ಹೊಂದಿರುವ ಯೋಜನೆಗಳ ಕೆಲಸ ಮಾತ್ರ ಮುಂದುವರೆದಿದೆ” ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ.

“ಕೆಲವರು ಕೊಳವೆಬಾವಿಗಳನ್ನು ಕೊರೆಸುತ್ತಿರುವುದರಿಂದ ಅಂತರ್ಜಲ ಕುಸಿಯುತ್ತಿದೆ. ಹಾಗಾಗಿ ಕೊಳವೆಬಾವಿಗಳಲ್ಲಿನ ನೀರೂ ಕೂಡಾ ಸಾಕಾಗುವುದಿಲ್ಲ. ಇದರಿಂದ ಪ್ರತಿಯೊಬ್ಬರೂ ಟ್ಯಾಂಕರ್‌ಗಳನ್ನು ಅವಲಂಬಿಸುವಂತಾಗಿದ್ದು, ಟ್ಯಾಂಕರ್ ಬೇಡಿಕೆ ಅನೇಕ ಪಟ್ಟು ಹೆಚ್ಚಾಗಿದೆ” ಎಂದು ಹೇಳಿದರು.

ತಿಲಕವಾಡಿಯ ಶಹಾಪುರದ ಬಿಲ್ಡ‌ರ್‌ಗಳು ಜೂನ್ 2023ರಲ್ಲಿ ಯೋಜನೆಯನ್ನು ಪ್ರಾರಂಭಿಸಿದ್ದರು. ಆದರೆ ಈ ಫೆಬ್ರವರಿಯಿಂದ ನೀರಿನ ತೀವ್ರ ಕೊರತೆ ಕಂಡುಬಂದಿದೆ. 5,000 ಲೀಟರ್ ನೀರಿನ ಟ್ಯಾಂಕರ್‌ ಬೆಲೆ ಈ ಹಿಂದೆ ₹800 ರಿಂದ ₹900ರ ನಡುವೆ ಇತ್ತು. ಆದರೆ ಈಗ ₹1,500ಕ್ಕೆ ಏರಿಕೆಯಾಗಿದೆ. ಇದರಿಂದ ನಿರ್ಮಾಣ ಕಾರ್ಯಕ್ಕೆ ಅಡ್ಡಿಯಾಗಿದೆ ಮತ್ತು ಕಟ್ಟಡದ ಪೂರ್ಣಗೊಳಿಸುವಿಕೆ ಮತ್ತಷ್ಟು ವಿಳಂಬವಾಗಲಿದೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ʼವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿʼ ಅಭಿಯಾನ

ಜಲಾಶಯಗಳಿಗೆ ಮತ್ತೆ ನೀರು ಹರಿಯಲು ಪ್ರಾರಂಭಿಸುವವರೆಗೆ ನಿರ್ಮಾಣ ಕಾರ್ಯಗಳಿಗೆ ಯಾವುದೇ ಟ್ಯಾಂಕರ್ ನೀರನ್ನು ಪೂರೈಸದಂತೆ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಬಿಸಿಸಿ ಅಧಿಕಾರಿಗಳು ತಿಳಿಸಿದ್ದಾರೆ.

“ಬರ ಪರಿಸ್ಥಿತಿಯು ರೈತರಿಗೆ ಮಾತ್ರವಲ್ಲ. ನಿರ್ಮಾಣ ಕ್ಷೇತ್ರದವರಿಗೂ ಜೀವನವನ್ನು ಕಷ್ಟಕರವಾಗಿಸಿದೆ” ಎಂದು ಅಸಂಘಟಿತ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಎನ್ ಆರ್ ಲಾತೂರ್ ಬೇಸರ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...