ಬೆಳಗಾವಿ | ಶೀಘ್ರದಲ್ಲೇ 300 ಹೊಸ ಬಸ್‌ಗಳು ಬರಲಿವೆ: ಸಚಿವ ರಾಮಲಿಂಗಾ ರೆಡ್ಡಿ

Date:

ಬೆಳಗಾವಿ ನಗರದ ಸಾರ್ವಜನಿಕರ ಸೇವೆಗೆ 100 ವಿದ್ಯುತ್ ಚಾಲಿತ ಬಸ್‌ಗಳು ಸೇರಿದಂತೆ 300 ಬಸ್‌ಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದರು.

ಬೆಳಗಾವಿಯಲ್ಲಿ ಹೊಸದಾಗಿ ನಿರ್ಮಿಸಲಾದ ಪ್ರಾದೇಶಿಕ ರಸ್ತೆ ಸಾರಿಗೆ ಕಚೇರಿ ಮತ್ತು ರಸ್ತೆ ಸಾರಿಗೆ ಜಂಟಿ ಆಯುಕ್ತರ ಕಚೇರಿಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರದ 50:50 ಅನುದಾನದೊಂದಿಗೆ ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ನಗರ ಬಸ್ ನಿಲ್ದಾಣವನ್ನು ಶೀಘ್ರದಲ್ಲೇ ಉದ್ಘಾಟಿಸಲಾಗುವುದು. ಬೈಲಹೊಂಗಲದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ ‘ಸ್ವಯಂ ಚಾಲಿತ ಚಾಲನಾ ಮಾರ್ಗ’ವನ್ನು ಉದ್ಘಾಟಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ಕಶ ಶಬ್ದಗಳ ಹಾರ್ನ್‌ಗಳು ಮತ್ತು ತುಂಬಾ ಪ್ರಕಾಶಮಾನವಾದ ದೀಪಗಳನ್ನು ಹೊಂದಿರುವ ವಾಹನಗಳನ್ನು ಗುರುತಿಸಿ ದಂಡ ವಿಧಿಸಬೇಕು. ಸಾರಿಗೆ ಇಲಾಖೆ ಕಚೇರಿಗೆ ಮಧ್ಯವರ್ತಿಗಳ ಪ್ರವೇಶವನ್ನು ನಿರ್ಬಂಧಿಸಬೇಕು” ಎಂದು ಸೂಚನೆ ನೀಡಿದರು.

“ಸಾರಿಗೆ ಇಲಾಖೆಯನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆಯೆಂದು ಜಾರಕಿಹೊಳಿ ಹೇಳಿದರು. ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ವಾಹನ ಚಾಲನಾ ಪರವಾನಗಿಗಳನ್ನು ನೀಡಲು ಕಠಿಣ ನಿಯಮಗಳನ್ನು ಜಾರಿಗೆ ತರಬೇಕು. ಸ್ಥಳೀಯವಾಗಿ, ಡಿಜೆ ಶಬ್ದಗಳನ್ನು ಬಳಸಿ ಸಾರ್ವಜನಿಕರಿಗೆ ಹಾರ್ನ್ ಮಾಡಲು ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ಅವರಿಗೆ ಎಚ್ಚರಿಕೆ ನೀಡಬೇಕು” ಎಂದು ಹೇಳಿದರು.

“ರಾಜ್ಯಾದಂತ ಎಲ್ಲ ಜಿಲ್ಲೆಗಳಿಗೆ ಹೆಚ್ಚಿನ ಬಸ್ ನಿಲ್ದಾಣಗಳ ನಿರ್ಮಾಣದ ಅವಶ್ಯಕತೆಯಿದೆ. ಸರ್ಕಾರಿ ಮಟ್ಟದಲ್ಲಿ, ಲೋಕೋಪಯೋಗಿ ಇಲಾಖೆ ಇದಕ್ಕಾಗಿ ಸ್ಥಳಗಳನ್ನು ಹಂಚಿಕೆ ಮಾಡಲು ಸಿದ್ಧವಾಗಿರುತ್ತದೆ. ಸಾರಿಗೆ ಇಲಾಖೆಯು ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆಗಳನ್ನು ರೂಪಿಸಬಹುದು” ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, “ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಬಸ್ ಸೌಲಭ್ಯಗಳ ಅಗತ್ಯವಿರುವುದರಿಂದ, ಸಾರಿಗೆ ಇಲಾಖೆ ಸಿಬ್ಬಂದಿ ಮಧ್ಯವರ್ತಿಗಳ ಪ್ರವೇಶವನ್ನು ನಿರ್ಬಂಧಿಸುವ ಮೂಲಕ ಸಾರ್ವಜನಿಕರಿಗೆ ತ್ವರಿತವಾಗಿ ಸೇವೆಗಳನ್ನು ಒದಗಿಸಬೇಕು” ಎಂದು ಮನವಿ ಮಾಡಿದರು.

ಶಾಸಕ ಆಸಿಫ್(ರಾಜು) ಸೇಠ್ ಮಾತನಾಡಿ, “ಈಗಿರುವ ಸಿಬ್ಬಂದಿ ಮೇಲಿನ ಹೊರೆ ಕಡಿಮೆ ಮಾಡಲು ಸಾಧ್ಯವಾದಷ್ಟು ಬೇಗ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು. ಇದು ಇಲಾಖೆ ಅಧಿಕಾರಿಗಳು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಒಂದೇ ಹೆಸರಿನ ಮೂವರು ಸಹೋದರರು; ಹೆಸರಿನ ಹಿಂದಿನ ಗುಟ್ಟೇನು ಗೊತ್ತಾ!

ಶಾಸಕ ಮಹಾಂತೇಶ ಕೌಜಲಗಿ, ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಯೋಗೀಶ್ ಎ ಎಂ, ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೊರಸೆ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಹೆಚ್ಚುವರಿ ಸಾರಿಗೆ ಆಯುಕ್ತ ಕೆ‌ ಟಿ ಹಾಲಸ್ವಾಮಿ, ಜಂಟಿ ಸಾರಿಗೆ ಆಯುಕ್ತ ಎಂ ಪಿ ಓಂಕಾರೇಶ್ವರಿ, ಬೆಳಗಾವಿ ಆರ್‌ಟಿಒ ನಾಗೇಶ ಮುಂಡಾಸ, ಶಿವಾನಂದ ಮಗದುಮ್, ಉದಯ್ ಕುಮಾರ್ ಆರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...